Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಆರ್‌ಎಸ್ ಶಾಸಕನ ಪೌರತ್ವ ರದ್ದತಿ...

ಟಿಆರ್‌ಎಸ್ ಶಾಸಕನ ಪೌರತ್ವ ರದ್ದತಿ ಆದೇಶಕ್ಕೆ ಉಚ್ಚ ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ

ವಾರ್ತಾಭಾರತಿವಾರ್ತಾಭಾರತಿ22 Nov 2019 9:12 PM IST
share
ಟಿಆರ್‌ಎಸ್ ಶಾಸಕನ ಪೌರತ್ವ ರದ್ದತಿ ಆದೇಶಕ್ಕೆ ಉಚ್ಚ ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ

ಹೈದರಾಬಾದ್, ನ.22: ಟಿಆರ್‌ಎಸ್ ಶಾಸಕ ರಮೇಶ ಚೆನ್ನಮನೆನಿ ಅವರ ಪೌರತ್ವವನ್ನು ರದ್ದುಗೊಳಿಸಿ ಕೇಂದ್ರ ಗೃಹ ಸಚಿವಾಲಯವು ಹೊರಡಿಸಿದ್ದ ಆದೇಶಕ್ಕೆ ತೆಲಂಗಾಣ ಉಚ್ಚ ನ್ಯಾಯಾಲಯವು ಗುರುವಾರ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.16ಕ್ಕೆ ನಿಗದಿಗೊಳಿಸಲಾಗಿದೆ. ಚೆನ್ನಮನೆನಿ ಅವರು ಕಳೆದ ವರ್ಷ ವೇಮುಲವಾಡಾ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದರು.

ಭಾರತೀಯ ಪೌರತ್ವ ಕೋರಿ ಅರ್ಜಿ ಸಲ್ಲಿಕೆಯ ಮೊದಲಿನ ಒಂದು ವರ್ಷದ ಅವಧಿಯಲ್ಲಿ ವಿದೇಶಗಳಿಗೆ ತನ್ನ ಭೇಟಿಗಳ ಕುರಿತು ಸತ್ಯಾಂಶಗಳನ್ನು ಬಚ್ಚಿಟ್ಟಿದ್ದಕ್ಕಾಗಿ ಟಿಆರ್‌ಎಸ್ ಶಾಸಕ ರಮೇಶ ಚೆನ್ನಮನೆನಿ ಅವರ ಪೌರತ್ವವನ್ನು ರದ್ದುಗೊಳಿಸಿ ಕೇಂದ್ರ ಗೃಹ ಸಚಿವಾಲಯವು ಬುಧವಾರ ಹೊಸದಾಗಿ ಆದೇಶವನ್ನು ಹೊರಡಿಸಿತ್ತು. ಚೆನ್ನಮನೆನಿ ಜರ್ಮನ್ ಪ್ರಜೆಯಾಗಿದ್ದಾರೆ ಮತ್ತು ಭಾರತೀಯ ಪೌರತ್ವವನ್ನು ಕೋರಲು ಅಗತ್ಯ ಮಾನದಂಡಗಳನ್ನು ಪೂರೈಸಿಲ್ಲ ಎಂದು ಅದು ತನ್ನ ಆದೇಶದಲ್ಲಿ ಹೇಳಿದೆ.

ಚೆನ್ನಮನೆನಿ ತಪ್ಪು ಮಾಹಿತಿಗಳನ್ನು ಒದಗಿಸಿದ್ದು ಮತ್ತು ಸತ್ಯಾಂಶಗಳನ್ನು ಬಚ್ಚಿಟ್ಟಿದ್ದು ಸರಕಾರವು ಅವರಿಗೆ ಪೌರತ್ವವನ್ನು ಮಂಜೂರು ಮಾಡುವ ತಪ್ಪುನಿರ್ಧಾರವನ್ನು ಕೈಗೊಳ್ಳಲು ಕಾರಣವಾಗಿತ್ತು ಎಂದು ತನ್ನ ಆದೇಶದಲ್ಲಿ ತಿಳಿಸಿರುವ ಸಚಿವಾಲಯವು,ಅರ್ಜಿ ಸಲ್ಲಿಕೆಗೆ ಮೊದಲಿನ ಒಂದು ವರ್ಷ ತಾನು ಭಾರತದಲ್ಲಿ ವಾಸವಾಗಿರಲಿಲ್ಲ ಎಂದು ಅವರು ತಿಳಿಸಿದ್ದರೆ ಸಚಿವಾಲಯದಲ್ಲಿನ ಸಕ್ಷಮ ಪ್ರಾಧಿಕಾರವು ಅವರಿಗೆ ಪೌರತ್ವವನ್ನು ಮಂಜೂರು ಮಾಡುತ್ತಿರಲಿಲ್ಲ. ಪ್ರಾಧಿಕಾರವು ತನ್ನ ಅಧಿಕಾರವನ್ನು ಬಳಸಿಕೊಂಡು ಅವರ ಪೌರತ್ವವನ್ನು ರದ್ದುಗೊಳಿಸಿದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X