Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುನಿವೆಫ್ ಕರ್ನಾಟಕದಿಂದ ಪ್ರವಾದಿ ಸಂದೇಶ...

ಯುನಿವೆಫ್ ಕರ್ನಾಟಕದಿಂದ ಪ್ರವಾದಿ ಸಂದೇಶ ಪ್ರಚಾರ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Nov 2019 10:55 PM IST
share
ಯುನಿವೆಫ್ ಕರ್ನಾಟಕದಿಂದ ಪ್ರವಾದಿ ಸಂದೇಶ ಪ್ರಚಾರ ಅಭಿಯಾನಕ್ಕೆ ಚಾಲನೆ

ಮಂಗಳೂರು, ನ. 22: ಯುನಿವರ್ಸಲ್ ವೆಲ್ಫೇರ್ ಫೋರಮ್ ಕರ್ನಾಟಕ (ಯುನಿವೆಫ್) ವತಿಯಿಂದ ಮುಂದಿನ ಜ.24ರವರೆಗೆ ನಡೆಯುವ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನಕ್ಕೆ ನಗರದ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಚಾಲನೆ ನೀಡಿದರು.

ಬಳಿಕ ಕಾರ್ಯಕ್ರಮದಲ್ಲಿ ‘ಮಾನವ ಸಂಬಂಧಗಳು ಮತ್ತು ಪ್ರವಾದಿ’ ವಿಷಯದಲ್ಲಿ ವಿಚಾರ ಮಂಡಿಸಿದ ರಫೀಉದ್ದೀನ್ ಕುದ್ರೋಳಿ, ನಮ್ಮ ಬದುಕನ್ನು ಪ್ರವಾದಿಯ ಪಥದಲ್ಲಿ ಸಾಗಿಸಿದರೆ ಮಾತ್ರ ಪರಲೋಕದಲ್ಲಿ ಮೋಕ್ಷ ಸಿಗುತ್ತದೆ. ಇಂದಿನ ವರ್ತಮಾನದಲ್ಲಿ ಪ್ರವಾದಿಯನ್ನು ನಿಂದಿಸುವವರಿಗೆ ಅವರ ಜೀವನ ಸಂದೇಶವನ್ನು ತಿಳಿಸಬೇಕಾಗಿದೆ. ಪ್ರವಾದಿಯ ಸಂದೇಶದ ವಾಸ್ತವಿಕತೆಯನ್ನು ಅಂಥವರ ಮುಂದೆ ಅನಾವರಣಗೊಳಿಸಿದಾಗ ಎಲ್ಲ ಮಿಥ್ಯಗಳೂ ಬಹಿರಂಗಗೊಳ್ಳುತ್ತವೆ ಎಂದು ಹೇಳಿದರು.

ಯುನಿವೆಫ್ ಕರ್ನಾಟಕ ಕಳೆದ 13 ವರ್ಷಗಳಿಂದ ಈ ವಾಸ್ತವಿಕತೆಯನ್ನು ಅರ್ಥೈಸಿಕೊಂಡು ಜನರಿಗೆ ಪ್ರವಾದಿಯ ಸಂದೇಶವನ್ನು ತಲುಪಿಸುತ್ತಿದೆ. ಜತೆಗೆ ಸೌಹಾರ್ದತೆಯ ನಾಡನ್ನು ಕಟ್ಟಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಜನರು ಸಹಕರಿಸಬೇಕು ಎಂದರು.
ಮುಸ್ಲಿಮರು ಪ್ರವಾದಿಯನ್ನು ನಂಬುವುದು ಮಾತ್ರವಲ್ಲ, ಅವರ ಬೋಧನೆಗಳನ್ನು ಅನುಷ್ಠಾನಗೊಳಿಸಬೇಕು. ಆಗ ಮಾತ್ರ ನಾವು ನೈಜ ಪ್ರವಾದಿಯ ಅನುಯಾಯಿಗಳಾಗುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಯುನಿವೆಫ್ ಕರ್ನಾಟಕ ಶಿಕ್ಷಣ ಘಟಕದ ಸಂಚಾಲಕ ಯು.ಕೆ.ಖಾಲಿದ್, ಉಪ ಸಂಚಾಲಕ ಸೈಯದ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಮರ್ ಮುಕ್ತಾರ್ ಕಿರಾಅತ್ ಪಠಿಸಿದರು. ಹುದೈಫ್ ಕುದ್ರೋಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಯುನಿವೆಫ್ ಕಾರ್ಯದರ್ಶಿ ಅರ್ಶಲನ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು. ಸಿರಾಜುದ್ದೀನ್ ವಂದಿಸಿದರು.

ಪ್ರಶಸ್ತಿ ಪ್ರದಾನ

2019ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೌಲಾನಾ ಅಬುಲ್ ಕಲಾಮ್ ಆಝಾದ್ ಮತ್ತು ಸರ್ ಅಲ್ಲಮಾ ಇಕ್ಬಾಲ್ ಹೆಸರಲ್ಲಿ ಉದ್ಯಮಿ ಎಸ್.ಎನ್.ಹಮೀದ್, ಯೆನ್ ಮಾರ್ಕ್ ಬಿಲ್ಡರ್ ನೂರುಲ್ ಪ್ರಶಸ್ತಿ-ಪುರಸ್ಕಾರ ವಿತರಿಸಿದರು.

ಎಸೆಸೆಲ್ಸಿ ವಿಭಾಗದಲ್ಲಿ ಮೆಲ್ಕಾರ್ ಶಾಲೆಯ ವಿದ್ಯಾರ್ಥಿನಿ ಫಾತಿಮಾ ಸುಹಾನಾ ಬಂಟ್ವಾಳ ಹಾಗೂ ಎಸ್‌ಡಿಎಂ ಉಜಿರೆ ಶಾಲೆಯ ಸೈಯದ್ ಆರಿಫ್ ಅವರಿಗೆ ವೌಲಾನಾ ಅಬುಲ್ ಕಲಾಮ್ ಆಝಾದ್ ಪ್ರಶಸ್ತಿ ಹಾಗೂ ನಗದು ಪುರಸ್ಕಾರ ನೀಡಲಾಯಿತು.

ಪಿಯುಸಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಅಬ್ದುಲ್ ನೂಮಾನ್ ಹಾಗೂ ಮೆಲ್ಕಾರ್ ಕಾಲೇಜಿನ ರಾಬಿಯತುಲ್ ಅದಬಿಯ ಅವರಿಗೆ ಸರ್ ಅಲ್ಲಮಾ ಇಕ್ಬಾಲ್ ಪ್ರಶಸ್ತಿ ಮತ್ತು ನಗದು ಪುರಸ್ಕಾರ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X