Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಾಸ್ಟೆಲ್ ಶುಲ್ಕ ಏರಿಕೆ ಸಮರ್ಥಿಸಿದ...

ಹಾಸ್ಟೆಲ್ ಶುಲ್ಕ ಏರಿಕೆ ಸಮರ್ಥಿಸಿದ ಜೆಎನ್‌ಯು

ವಾರ್ತಾಭಾರತಿವಾರ್ತಾಭಾರತಿ22 Nov 2019 11:09 PM IST
share
ಹಾಸ್ಟೆಲ್ ಶುಲ್ಕ ಏರಿಕೆ ಸಮರ್ಥಿಸಿದ ಜೆಎನ್‌ಯು

ಹೊಸದಿಲ್ಲಿ, ನ.23: ಹಾಸ್ಟೆಲ್ ಶುಲ್ಕಗಳಲ್ಲಿ ಏರಿಕೆ ಮಾಡುವ ತನ್ನ ನಡೆಯನ್ನು ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯವು ಗುರುವಾರ ಸಮರ್ಥಿಸಿ ಕೊಂಡಿದೆ. ವಿಶ್ವವಿದ್ಯಾನಿಲಯವು 45 ಕೋಟಿ ರೂ.ಗೂ ಅಧಿಕ ವಿತ್ತೀಯ ಕೊರತೆಯನ್ನು ಎದುರಿಸುತ್ತಿರುವುದರಿಂದ ಹಾಸ್ಟೆಲ್ ಶುಲ್ಕ ಏರಿಕೆ ಅನಿವಾರ್ಯವಾಗಿದೆಯೆಂದು ಅದು ಹೇಳಿದೆ. ಜೆಎನ್‌ಯುವಿನ ಹಾಸ್ಟೆಲ್ ಶುಲ್ಕಗಳ ಏರಿಕೆಯನ್ನು ವಿರೋಧಿಸಿ ಅಲ್ಲಿನ ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

‘‘ಅಗಾಧವಾದ ವಿದ್ಯುತ್ ಹಾಗೂ ನೀರಿನ ಶುಲ್ಕ ಹಾಗೂ ಗುತ್ತಿಗೆ ಆದಾರಿತ ಸಿಬ್ಬಂದಿಯ ವೇತನದ ಕಾರಣಗಳಿಂದಾಗಿ ವಿಶ್ವವಿದ್ಯಾನಿಲಯವು 45 ಕೋಟಿ ರೂ.ಗೂ ಅಧಿಕ ವಿತ್ತೀಯ ಕೊರತೆಯನ್ನು ಎದುರಿಸುತ್ತಿದೆ ’’ಎಂದು ಜೆಎನ್‌ಯು ಹೇಳಿಕೆಯೊಂದರಲ್ಲಿ ತಿಳಿಸಿದೆ. ಹಾಸ್ಟೆಲ್ ಶುಲ್ಕ ಏರಿಕೆಗೆ ಸಂಬಂಧಿಸಿ ತಪ್ಪು ಮಾಹಿತಿ ನೀಡುವ ಅಭಿಯಾನವನ್ನು ಕೆಲವರು ನಡೆಸುತ್ತಿದ್ದಾರೆಂದು ಅದು ಆಪಾದಿಸಿದೆ.

ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ವು ಗುತ್ತಿಗೆಯಾಧಾರಿ ಉದ್ಯೋಗಿಗಳಿಗೆ ವೇತನ ನಿಧಿಯಿಂದ ಸಂಬಳ ಪಾವತಿಸಲು ಈಗ ಅವಕಾಶ ನೀಡುತ್ತಿಲ್ಲವೆಂದು ಜೆಎನ್‌ಯು ಆಡಳಿತಮಂಡಳಿಯ ಹೇಳಿಕೆ ತಿಳಿಸಿದೆ. ವಿಶ್ವವಿದ್ಯಾನಿಲಯವು ಸಂಪಾದಿಸುವ ಅಂತರಿಕ ಶುಲ್ಕಗಳಿಂದಲೇ ವೇತನದಿಂದ ಹೊರತಾದ ಖರ್ಚುಗಳನ್ನು ನಿಭಾಯಿಸಬೇಕೆಂದು ಯುಜಿಸಿ ಸೂಚನೆಗಳನ್ನು ನೀಡಿದೆ ಎಂದು ಅದು ತಿಳಿಸಿದೆ. ವಿದ್ಯಾರ್ಥಿಗಳಿಂದ ಸೇವಾ ಶುಲ್ಕಗಳನ್ನು ಸಂಗ್ರಹಿಸದೆ ವಿವಿಗೆ ಬೇರೆ ಪರ್ಯಾಯ ದಾರಿಯಿಲ್ಲವೆಂದು ಜೆಎನ್‌ಯು ಆಡಳಿತ ಮಂಡಳಿ ತಿಳಿಸಿದೆ.

ಇತರ ವಿಶ್ವವಿದ್ಯಾನಿಲಯಗಳ ಹಾಗೆ ಜೆಎನ್‌ಯು ಅಭಿವೃದ್ಧಿ ಶುಲ್ಕಗಳನ್ನು ತನ್ನ ವಿದ್ಯಾರ್ಥಿಗಳು ವಿಧಿಸುತ್ತಿಲ್ಲವೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದಕ್ಕಿಂತಲೂ ಹೆಚ್ಚಾಗಿ, ಜೆಎನ್‌ಯುವಿನ ಪ್ರವೇಶಾತಿ ಶುಲ್ಕವು ಕಳೆದ ಕೆಲವು ದಶಕಗಳಲ್ಲಿಯೇ ಅತ್ಯಂತ ಕನಿಷ್ಠವಾದುದಾಗಿದೆ ಹಾಗೂ ಕಳೆದ ನಾಲ್ಕು ದಶಕಗಳಲ್ಲಿ ಆ ಬಗ್ಗೆ ಯಾವುದೇ ಪರಿಷ್ಕರಣೆಯನ್ನು ನಡೆಸಲಾಗಿಲ್ಲವೆಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X