Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ರಾಜಕೀಯ ದಾಳಿಯಿಂದ ಕಾರ್ಟೂನಿಸ್ಟ್‌ಗಳಿಗೆ...

'ರಾಜಕೀಯ ದಾಳಿಯಿಂದ ಕಾರ್ಟೂನಿಸ್ಟ್‌ಗಳಿಗೆ ಇನ್ನಷ್ಟು ಪ್ರಚಾರ'

ಕುಂದಾಪುರದಲ್ಲಿ ಕಾರ್ಟೂನ್ ಹಬ್ಬ ಉದ್ಘಾಟಿಸಿದ ರಿಷಬ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ23 Nov 2019 7:37 PM IST
share
ರಾಜಕೀಯ ದಾಳಿಯಿಂದ ಕಾರ್ಟೂನಿಸ್ಟ್‌ಗಳಿಗೆ ಇನ್ನಷ್ಟು ಪ್ರಚಾರ

ಕುಂದಾಪುರ, ನ.23: ರಾಜಕೀಯ ಹಾಗೂ ರಾಜಕಾರಣೆಗಳನ್ನು ಟೀಕಿಸಿ ವ್ಯಂಗ್ಯಚಿತ್ರ ರಚಿಸಿದ ವ್ಯಂಗ್ಯಚಿತ್ರಕಾರರ ಮೇಲೆ ದಾಳಿಗಳು ನಡೆಯುತ್ತಲೇ ಇವೆ. ಆದರೆ ವ್ಯಂಗ್ಯಚಿತ್ರಕಾರರು ತಮ್ಮ ವೃತ್ತಿಯನ್ನು ಮುಂದಕ್ಕೆ ಕೊಂಡೊಯ್ಯ ಬೇಕು. ಟೀಕೆಗಳಿಗೆ ಯಾರು ಕೂಡ ಹೆದರಬಾರದು. ಇಂತಹ ದಾಳಿಗಳಿಂದ ವ್ಯಂಗ್ಯಚಿತ್ರಕಾರರಿಗೆ ಇನ್ನಷ್ಟು ಪ್ರಚಾರ ದೊರೆಯಲು ಸಾಧ್ಯ ಎಂದು ಸಿನೆಮಾ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

ಕುಂದಾಪುರ ಕಾರ್ಟೂನ್ ಬಳಗದ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೆ ಜನ್ಮದಿನಾಚರಣೆಯ ಪ್ರಯುಕ್ತ ‘ಈಶ್ವರ ಅಲ್ಲಾ ತೇರೋ ನಾಮ್’ ಧ್ಯೇಯದೊಂದಿಗೆ ಕುಂದಾಪುರ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾದ ನಾಲ್ಕು ದಿನಗಳ ಕಾರ್ಟೂನ್ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಿನೆಮಾ ಕತೆ ಬರೆಯುವಾಗ ನಮ್ಮ ಜೀವನದಲ್ಲಿ ಎದುರಾಗುವ ಪಾತ್ರಗಳನ್ನೇ ಕತೆಯಾಗಿ ತೆಗೆದುಕೊಳ್ಳಬೇಕು. ನಮ್ಮ ಕಲೆ, ಸಂಸ್ಕೃತಿ, ನಾಡು-ನುಡಿಯೊಂದಿಗೆ ಕತೆ ಬರೆದಾಗ ಮಾತ್ರ ಅದು ಗಟ್ಟಿಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ನಮ್ಮ ಪರಿಸರದಲ್ಲಿರುವ ವಿಚಾರಗಳನ್ನು ಹೆಚ್ಚು ಗಮನಿಸಬೇಕು ಮತ್ತು ಎಲ್ಲಿಯೂ ಕೂಡ ನಮ್ಮತನವನ್ನು ಬಿಟ್ಟುಕೊಡದೆ ಉಳಿಸಿಕೊಳ್ಳುವ ಮನೋಭಾವ ಬೆಳೆಸಿ ಕೊಳ್ಳಬೇಕು ಎಂದರು.

ಇಂದಿಗೂ ನಾವು ಬ್ರಿಟಿಷ್ ಶಿಕ್ಷಣ ಪದ್ದತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ. ಆದರೆ ನಮ್ಮ ಗುರುಕುಲ ಮಾದರಿ ಶಿಕ್ಷಣ ವ್ಯವಸ್ಥೆ ಯಲ್ಲಿ ಮಕ್ಕಳು ಜೀವನ ಏನು ಎಂಬುದನ್ನು ಕಲಿಯುತ್ತಿದ್ದರು. ಇಂದು ಅದನ್ನು ನಾವು ಕಳೆದುಕೊಂಡಿದ್ದೇವೆ. ಆದುದರಿಂದ ಮತ್ತೆ ಗುರುಕುಲ ಪದ್ಧತಿಯತ್ತ ಹೋದರೆ ನಮ್ಮತನವನ್ನು ಉಳಿಸಿಕೊಳ್ಳಬಹುಾಗಿದೆ ಎಂದವರು ಅಭಿಪ್ರಾಯ ಪಟ್ಟರು.

‘ಈಶ್ವರ ಅಲ್ಲಾ ತೇರೋ ನಾಮ್’ ವಿಷಯದ ಕುರಿತು ದಿಕ್ಸೂಚಿ ಭಾಷಣ ಮಾಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ಸಮಾಜದಲ್ಲಿ ಭಾವನಾತ್ಮಕ ಸಂಬಂಧ ದೂರವಾಗಿ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಗಾಂಧಿಜೀ ಅವರನ್ನು ಕೇವಲ ಐಕಾನ್ ಆಗಿ ಬಳಸುತ್ತಿದ್ದೇವೆ ಹೊರತು ಅವರ ಆದರ್ಶ ಗಳನ್ನು ಪಾಲಿಸುತ್ತಿಲ್ಲ ಎಂದರು.

ಕೋಮು ಸಾಮರಸ್ಯ, ಅಸ್ಪಶ್ಯತೆ ನಿವಾರಣೆ, ಸ್ವಚ್ಛತೆ ಗಾಂಧಿ ಕನಸು ಆಗಿದ್ದು, ಆದರೆ ಇಂದು ಅವರ ವಿಚಾರಧಾರೆಯು ದಿಕ್ಕು ತಪ್ಪುತ್ತಿದೆ. ಸಮಾಜದಲ್ಲಿ ಉದ್ಭವಿ ಸಿರುವ ಎಲ್ಲ ಸಮಸ್ಯೆಗಳಿಗೆ ಗಾಂಧೀ ವಿಚಾರಧಾರೆಯನ್ನು ನಾವು ಸರಿಯಾಗಿ ಅರ್ಥೈಸಿಕೊಳ್ಳದಿರುವುದೇ ಕಾರಣ ವಾಗಿದೆ. ಹೆಣ್ಣುಮಕ್ಕಳು ಸ್ವತಂತ್ರವಾಗಿ ಓಡಾಡಬೇಕು ಎಂಬುದು ಗಾಂಧೀಜಿ ಆಶಯ. ಆದರೆ ಅವರ 150ನೆ ಜನ್ಮ ದಿನಾಚರಣೆಯ ಕಾಲಘಟ್ಟದಲ್ಲಿ ಮಹಿಳೆಯ ಶಕ್ತಿ ಕೇವಲ 50ರಷ್ಟು ಮಾತ್ರ ಅನಾವರಣಗೊಂಡಿರುವುದು ಖೇದಕರ ಎಂದು ಅವರು ತಿಳಿಸಿದರು.

ಮಣಿಪಾಲ ಗಾಂಧೀಜಿ ಅಧ್ಯಯನ ಕೇಂದ್ರ ನಿರ್ದೇಶಕ ಪ್ರೊ.ವರದೇಶ ಹಿರೇಗಂಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ಮಾಪಕ ಯಾಕೂಬ್ ಖಾದರ್ ಗುಲ್ವಾಡಿ ಮಾತನಾಡಿದರು. ಹಿರಿಯ ವ್ಯಂಗ್ಯ ಚಿತ್ರಗಾರರಾದ ವಿ.ಜಿ.ನರೇಂದ್ರ, ಸುರೇಂದ್ರ, ಪವರ್‌ಲಿಪ್ಟರ್ ವಿಶ್ವನಾಥ ಗಾಣಿಗ ಅವರನ್ನು ಸನ್ಮಾನಿಸಲಾಯಿತು.

ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅತಿಥಿಗಳನ್ನು ಗೌರವಿಸಿದರು. ವ್ಯಂಗ್ಯ ಚಿತ್ರಕಾರರಾದ ಕೇಶವ ಸಸಿಹಿತ್ಲು, ಚಂದ್ರಶೇಖರ ಶೆಟ್ಟಿ ಸಹಕರಿಸಿದರು. ಅವಿನಾಶ್ ಕಾಮತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಹವ್ಯಾಸಿ ವ್ಯಂಗ್ಯ ಚಿತ್ರಕಲಾವಿದ ರಾಮಕೃಷ್ಣ ಹೇರ್ಳೆ ವಂದಿಸಿದರು.

ವಿದ್ಯಾರ್ಥಿಗಳಿಗೆ ಕಾರ್ಟೂನು ಸ್ಪರ್ಧೆ

ಶನಿವಾರ ಅಪರಾಹ್ನ ಕಾರ್ಟೂನ್‌ಹಬ್ಬದಲ್ಲಿ ಮಾಯಾ ಕಾಮತ್ ಸ್ಮರಣಾರ್ಥ ಉಡುಪಿ ಮತ್ತು ದ.ಕ. ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿ ಗಳಿಗಾಗಿ ಕಾರ್ಟೂನು ರಚಿಸು  ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

5ನೇ ತರಗತಿವರೆಗಿನ ಮಕ್ಕಳಿಗೆ ಗಾಂಧೀಜಿ ಚಿತ್ರ, 6ರಿಂದ ಕಾಲೇಜು ವರೆಗಿನ ವಿದ್ಯಾರ್ಥಿಗಳಿಗೆ ಗಾಂಧೀಜಿ ಈಶ್ವರ ಅಲ್ಲಾ ತೇರೋ ನಾಮ್ (ಕೋಮು ಸಾಮರಸ್ಯ) ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮನೋವೈದ್ಯ ಡಾ.ಪಿ.ವಿ.ಭಂಡಾರಿ, ವಾಗ್ಮಿ ಡಾ.ಜಯ ಪ್ರಕಾಶ್ ಶೆಟ್ಟಿ ಉಡುಪಿ, ಸಾಧನಾ ಕಲಾ ಸಾಂಸ್ಕೃತಿಕ ಕೇಂದ್ರ ಕುಂದಾಪುರ ನಾರಾಯಣ ಐತಾಳ್, ಕ್ರಿಕೆಟ್ ತರಬೇತುದಾರ ವಿಜಯ್ ಆಳ್ವ ಬ್ರಹ್ಮಾವರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X