Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೇ ಟೆಸ್ಟ್: ಇನಿಂಗ್ಸ್ ಸೋಲು...

ಎರಡನೇ ಟೆಸ್ಟ್: ಇನಿಂಗ್ಸ್ ಸೋಲು ತಪ್ಪಿಸಲು ಬಾಂಗ್ಲಾ ಹೋರಾಟ

ವಾರ್ತಾಭಾರತಿವಾರ್ತಾಭಾರತಿ23 Nov 2019 9:16 PM IST
share
ಎರಡನೇ ಟೆಸ್ಟ್: ಇನಿಂಗ್ಸ್ ಸೋಲು ತಪ್ಪಿಸಲು ಬಾಂಗ್ಲಾ ಹೋರಾಟ

ಕೋಲ್ಕತಾ, ನ.23: ಇಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶ ತಂಡ ಮತ್ತೆ ಕುಸಿತಕ್ಕೊಳಗಾಗಿದ್ದು, ಇನಿಂಗ್ಸ್ ಸೋಲು ತಪ್ಪಿಸಲು ಹೋರಾಟ ನಡೆಸುತ್ತಿದೆ.

ಅಹರ್ನಿಶಿ ಟೆಸ್ಟ್‌ನ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ ತಂಡ 32.2 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 152 ರನ್ ಗಳಿಸಿದೆ. ಇನಿಂಗ್ಸ್ ಸೋಲು ತಪ್ಪಿಸಲು ಇನ್ನೂ 90 ರನ್ ಗಳಿಸಬೇಕಾಗಿದೆ.

ಅರ್ಧಶತಕ ದಾಖಲಿಸಿರುವ ಮುಶ್ಫೀಕುರ್ರಹೀಂ (59) ಬ್ಯಾಟಿಂಗ್‌ನ್ನು ಮೂರನೇ ದಿನಕ್ಕೆ ಕಾಯ್ದಿರಿಸಿದ್ದಾರೆ. ಇಶಾಂತ್ ಶರ್ಮಾ(39ಕ್ಕೆ 4), ಉಮೇಶ ಯಾದವ್(40ಕ್ಕೆ 2) ದಾಳಿಗೆ ಸಿಲುಕಿದ ಬಾಂಗ್ಲಾದೇಶ ತಂಡ ಒಂದು ಹಂತದಲ್ಲಿ 6.4 ಓವರ್‌ಗಳಲ್ಲಿ 13ಕ್ಕೆ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಶಾದ್ಮನ್ ಇಸ್ಲಾಂ(0), ನಾಯಕ ಮೊಮಿನುಲ್ ಹಕ್(0) ,ಇಮ್ರುಲ್ ಕೈಸ್(5), ಮತ್ತು ವಿಕೆಟ್ ಕೀಪರ್‌ ಮುಹಮ್ಮದ್ ಮಿಥುನ್(6) ಔಟಾಗುವುದರೊಂದಿಗೆ ತಂಡ ಮತ್ತೆ ಸಂಕಷ್ಟಕ್ಕೆ ಒಳಗಾಗಿತ್ತು. ಬಳಿಕ ಮುಶ್ಫೀಕುರ್ರಹೀಂ ಮತ್ತು ಮಹ್ಮುದುಲ್ಲಾ ತಂಡಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ ಹೋರಾಟ ಕೈಗೊಂಡರು. ಆದರೆ ಸ್ಪೋಟಕ ಬ್ಯಾಟಿಂಗ್‌ಗೆ ಒತ್ತು ನೀಡಿದ ಮಹ್ಮುದುಲ್ಲಾ 39 ರನ್(41ಎ, 7ಬೌ) ಗಳಿಸಿದ್ದಾಗ ಗಾಯಗೊಂಡರು. ಬ್ಯಾಟಿಂಗ್ ಮುಂದುವರಸಲಾರದೆ ಕ್ರೀಸ್ ತೊರೆದರು.

ಮೆಹಿದಿ ಹುಸೈನ್(15) ಮತ್ತು ತೈಜುಲ್ ಇಸ್ಲಾಂ(11) ಎರಡಂಕೆಯ ಸ್ಕೋರ್ ನೀಡಿ ನಿರ್ಗಮಿಸಿದರು. ತೈಜುಲ್ ಇಸ್ಲಾಂ ಔಟಾದ ಬೆನ್ನಲ್ಲೇ ಎರಡನೇ ದಿನದ ಆಟವನ್ನು ನಿಲ್ಲಿಸಲಾಯಿತು. ಮುಶ್ಫೀಕುರ್ರಹೀಂ 59 ರನ್(70ಎ, 10ಬೌ) ಗಳಿಸಿ ಔಟಾಗದೆ ಕ್ರೀಸ್‌ನಲ್ಲಿದ್ದಾರೆ.

ಭಾರತ 347/9 ಡಿಕ್ಲೇರ್

ಮೊದಲ ದಿನದಾಟದಂತ್ಯಕ್ಕೆ 46 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 174 ರನ್ ಗಳಿಸಿದ್ದ ಭಾರತ ಬ್ಯಾಟಿಂಗ್ ಮುಂದುವರಿಸಿ ಈ ಮೊತ್ತಕ್ಕೆ 173 ರನ್ ಸೇರಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ಭಾರತ ಮತ್ತೆ ಬಾಂಗ್ಲಾ ವಿರುದ್ಧ ದೊಡ್ಡ ಗೆಲುವು ದಾಖಲಿಸುವ ಉದ್ದೇಶದೊಂದಿಗೆ 89.4 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 347 ರನ್ ಗಳಿಸಿ ಬಾಂಗ್ಲಾಕ್ಕೆ ಎರಡನೇ ಇನಿಂಗ್ಸ್ ಆರಂಭಿಸಲು ಅವಕಾಶ ನೀಡಿತು.

ಮೊದಲ ದಿನದಾಟದಂತ್ಯಕ್ಕೆ 59 ರನ್ ಗಳಿಸಿದ್ದ ನಾಯಕ ವಿರಾಟ್ ಕೊಹ್ಲಿ ಮತ್ತು 23 ರನ್ ಗಳಿಸಿದ್ದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಮುಂದುವರಿಸಿ ತಂಡದ ಸ್ಕೋರ್‌ನ್ನು 236ಕ್ಕೆ ತಲುಪಿಸಿದರು.

ಮೊದಲು ನಾಯಕ ಕೊಹ್ಲಿ ಶತಕ ದಾಖಲಿಸಿದರು.ರಹಾನೆ ಅರ್ಧಶತಕ ದಾಖಲಿಸಿದರು. ರಹಾನೆ ಅರ್ಧಶತಕ ದಾಖಲಿಸಿದ ಬೆನ್ನಲ್ಲೇ ಅವರಿಗೆ ತೈಜುಲ್ ಇಸ್ಲಾಂ ಪೆವಿಲಿಯನ್ ಹಾದಿ ತೋರಿಸಿದರು. ಆ ಮೂಲಕ ಎರಡನೇ ದಿನದಾಟದಲ್ಲಿ ಬಾಂಗ್ಲಾಕ್ಕೆ ಮೊದಲ ಯಶಸ್ಸು ಸಿಕ್ಕಿತು. ರಹಾನೆ 51 ರನ್(69ಎ, 7ಬೌ) ಗಳಿಸಿದರು.

ಆಲ್‌ರೌಂಡರ್ ರವೀಂದ್ರ ಜಡೇಜ ಐದನೇ ವಿಕೆಟ್‌ಗೆ ಜೊತೆಯಾಟದಲ್ಲಿ 53 ರನ್ ಸೇರಿಸಿದರು. ಜಡೇಜ 12 ರನ್(41 ಎಸೆತ) ಗಳಿಸಿ ಅಬು ಝಾಹಿದ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.

ನಾಯಕ ವಿರಾಟ್ ಕೊಹ್ಲಿಗೆ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಜೊತೆಯಾದರು. ಆದರೆ ಇವರ ಜೊತೆಯಾಟ ಹೆಚ್ಚು ಹೊತ್ತು ಇರಲಿಲ್ಲ. ಕೊಹ್ಲಿ 136 ರನ್(194ಎ, 18ಬೌ) ಗಳಿಸಿದರು. 80.3ನೇ ಓವರ್‌ನಲ್ಲಿ ಕೊಹ್ಲಿ ಅವರು ಇಬಾದತ್ ಹುಸೈನ್ ಎಸೆತದಲ್ಲಿ ತೈಜುಲ್ ಇಸ್ಲಾಂಗೆ ಕ್ಯಾಚ್ ನೀಡಿದರು. ಆಗ ತಂಡದ ಮೊತ್ತ 308ಕ್ಕೆ ತಲುಪಿತ್ತು. ಕೊಹ್ಲಿ ನಿರ್ಗಮದ ಬಳಿಕ ಕ್ರೀಸ್‌ಗೆ ಆಗಮಿಸಿದ ಆರ್.ಅಶ್ವಿನ್ 21 ಎಸೆತಗಳಲ್ಲಿ 2 ಬೌಂಡರಿಗಳನ್ನು ಒಳಗೊಂಡ 9 ರನ್ ಸೇರಿಸಿದರು. ಅವರನ್ನು ಅಲ್ ಅಮೀನ್ ಹುಸೈನ್ ಎಲ್‌ಬಿಡಬ್ಲು ಬಲೆಗೆ ಬೀಳಿಸಿದರು. ಉಮೇಶ್ ಯಾದವ್(0) ಮತ್ತು ಇಶಾಂತ್ ಶರ್ಮಾ(0) ಅವರಿಗೆ ಖಾತೆ ತೆರೆಯಲು ಅಬು ಝಾಹಿದ್ ಮತ್ತು ಅಲ್ ಅಮೀನ್ ಅವಕಾಶ ನೀಡಲಿಲ್ಲ.

ಅಂತಿಮ ವಿಕೆಟ್‌ಗೆ ಸಹಾ ಮತ್ತು ಮುಹಮ್ಮದ್ ಶಮಿ ಮುರಿದ ಜೊತೆಯಾಟದಲ್ಲಿ 17 ರನ್‌ಗಳ ಜೊತೆಯಾಟ ನೀಡಿದರು. ಭಾರತ ಆಲೌಟಾಗುವ ಮೊದಲೇ ನಾಯಕ ವಿರಾಟ್ ಕೊಹ್ಲಿ ಇನಿಂಗ್ಸ್ ಡಿಕ್ಲೇರ್ ಮಾಡುವ ನಿರ್ಧಾರ ಕೈಗೊಂಡರು. ಸಹಾ ಔಟಾಗದೆ 17 ರನ್(41ಎ, 2ಬೌ) ಮತ್ತು ಶಮಿ ಔಟಾಗದೆ 10 ರನ್(5ಎ, 1ಬೌ,1ಸಿ) ಗಳಿಸಿದರು.

ಬಾಂಗ್ಲಾದೇಶ ತಂಡದ ಅಲ್ ಅಮೀನ್ ಹುಸೈನ್ 85ಕ್ಕೆ 3, ಅಬು ಝಾಹಿದ್ 77ಕ್ಕೆ 2, ಇಬಾದತ್ ಹುಸೈನ್ 91ಕ್ಕೆ 3 ಮತ್ತು ತೈಜುಲ್ ಇಸ್ಲಾಂ 80ಕ್ಕೆ 1 ವಿಕೆಟ್ ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X