Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಣ್ಣು ವ್ಯಾಪಾರಿಗಳಿಗೆ ಲಕ್ಷಾಂತರ ರೂ....

ಹಣ್ಣು ವ್ಯಾಪಾರಿಗಳಿಗೆ ಲಕ್ಷಾಂತರ ರೂ. ವಂಚನೆ ಆರೋಪ: ಎಫ್‌ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ24 Nov 2019 9:58 PM IST
share
ಹಣ್ಣು ವ್ಯಾಪಾರಿಗಳಿಗೆ ಲಕ್ಷಾಂತರ ರೂ. ವಂಚನೆ ಆರೋಪ: ಎಫ್‌ಐಆರ್ ದಾಖಲು

ಬೆಂಗಳೂರು, ನ.24: ರಾಜಧಾನಿ ಬೆಂಗಳೂರಿನ ಮಾರುಕಟ್ಟೆಯಲ್ಲಿರುವ ಹಣ್ಣು ವ್ಯಾಪಾರಿಗಳ ಬಳಿ ನಂಬಿಕೆ ಗಿಟ್ಟಿಸಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂಪಾಯಿ ಮೌಲ್ಯದ ಹಣ್ಣುಗಳನ್ನು ಖರೀದಿಸಿ, ಹಣ ನೀಡದೆ ವಂಚನೆ ಮಾಡುತ್ತಿದ್ದ ಪ್ರಕರಣಯೊಂದು ಬೆಳಕಿಗೆ ಬಂದಿದೆ.

ತಮಿಳುನಾಡು ಮೂಲದ ಎಸ್.ರಾಜಗೋಪಾಲ ಎಂಬಾತ ಈ ಕೃತ್ಯವೆಸಗಿರುವ ಆರೋಪ ಕೇಳಿಬಂದಿದ್ದು, ಹಣ್ಣಿನ ವ್ಯಾಪಾರಿ ಇಲ್ಲಿನ ರಾಜಾಜಿನಗರ ನಿವಾಸಿ ತಬ್ರೇಝ್ ಅಂಜುಂ ಎಂಬುವರು ಇಲ್ಲಿನ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸದ್ಯ ಎಫ್‌ಐಆರ್ ದಾಖಲಾಗಿದೆ.

ಅಂತರರಾಜ್ಯ ಮಟ್ಟದಲ್ಲಿ ವ್ಯಾಪಾರಿ ಆಗಿರುವ ತಬ್ರೇಝ್ ಅಂಜುಂ ಅವರು, ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಹಾಗೂ ಸಿಟಿ ಮಾರ್ಕೆಟ್‌ನಲ್ಲಿ ದಾಳಿಂಬೆ ಮತ್ತು ಸೇಬು ಹಣ್ಣುಗಳ ಬೃಹತ್ ಮಾರಾಟ ಮಳಿಗೆಗಳನ್ನು ಹೊಂದಿದ್ದಾರೆ. ಇದನ್ನು ಗುರಿಯಾಗಿಸಿ ಕೊಂಡ ಆರೋಪಿ ಎಸ್.ರಾಜಗೋಪಾಲ, ಒಂದೇ ಬಾರಿಗೆ 4 ರಿಂದ ಐದಾರು ಲಕ್ಷ ರೂ. ಮೌಲ್ಯದ ಹಣ್ಣುಗಳನ್ನು ಖರೀದಿಸಿ, ಹಣ ನೀಡುವ ಮೂಲಕ ನಂಬಿಕೆಗಿಟ್ಟಿಸಿಕೊಂಡಿದ್ದಾನೆ. ನಂತರ, ಸರಿ ಸುಮಾರು 30 ರಿಂದ 40 ಲಕ್ಷ ರೂ. ಮೌಲ್ಯದ ಹಣ್ಣು ಖರೀದಿಸಿದರೂ, ಹಣ ನೀಡದೆ ತಲೆಮರೆಸಿಕೊಳ್ಳುತ್ತಿದ್ದ ಎಂದು ತಬ್ರೇಝ್ ಅಂಜುಂ ದೂರಿನಲ್ಲಿ ಆರೋಪಿಸಿದ್ದಾರೆ.

ಚೆಕ್ ನೀಡಿ ವಂಚನೆ?: ಕೆಲ ದಿನಗಳ ಹಿಂದೆ ಮತ್ತೇ ತಬ್ರೇಝ್ ಅಂಜುಂ ಅವರ ಬಳಿ ಬಂದಿದ್ದ ಆರೋಪಿಯು, ಖಾಸಗಿ ಬ್ಯಾಂಕ್‌ಗಳ ಚೆಕ್ ನೀಡಿ, ಹಣವನ್ನು ತಾವು ಪಡೆದುಕೊಂಡು, ವ್ಯಾಪಾರ ಮುಂದುವರೆಸೋಣ ಎಂದಿದ್ದ. ಆದರೆ, ಖಾತೆಯಲ್ಲಿ ಠೇವಣಿ ನಗದು ಇಲ್ಲದ ಕಾರಣ, ಚೆಕ್ ಬೌನ್ಸ್ ಆಗಿದೆ ಎಂದು ದೂರುದಾರರು ಹೇಳಿದರು.

ಬೆದರಿಕೆ: ಆರೋಪಿ ರಾಜಗೋಪಾಲ ಮೇಲೆ ಪೊಲೀಸರಿಗೆ ದೂರು ನೀಡಿದ್ದ ಸಂದರ್ಭದಲ್ಲಿ ವ್ಯಾಪಾರಿ ತಬ್ರೇಝ್ ಅವರಿಗೆ ಬೆದರಿಕೆ ಹಾಕಿದ್ದು, ಹಣ ವಾಪಸ್ಸು ಕೇಳಿದರೆ, ಹೊರ ರಾಜ್ಯಗಳ ವ್ಯಕ್ತಿಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯಾವ ಪ್ರಕರಣ ದಾಖಲು

ಆರೋಪಿ ಐಪಿಸಿ 1860ರ ಅನ್ವಯ 420(ವಂಚನೆ), 504(ಬೆದರಿಕೆ) ಹಾಗೂ 506 (ಉದ್ದೇಶ ಪೂರ್ವಕವಾಗಿ ಶಾಂತಿ ಕದಡಿದ) ಆರೋಪದಡಿ ಇಲ್ಲಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜತೆಗೆ ತಮಿಳುನಾಡು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈತ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಸೂಕ್ತ ಕ್ರಮ ಕೈಗೊಳ್ಳಿ’

ರಾಜಗೋಪಾಲ ಇದುವರೆಗೂ ಹತ್ತಾರು ವ್ಯಾಪಾರಿಗಳಿಗೆ ವಂಚನೆ ಮಾಡಿದ್ದು, ಈ ಸಂಬಂಧ ಪೊಲೀಸ್ ಠಾಣೆಗಳಲ್ಲೂ ದೂರುಗಳು ದಾಖಲಾಗಿವೆ. ಆದರೆ, ಈತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡಿಲ್ಲ. ಮುಂದೆಯಾದರೂ, ಇಂತಹ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಿ.

-ತಬ್ರೇಝ್, ದೂರುದಾರ

ವಂಚನೆಗೊಳಗಾದವರ ವಿವರ ಮತ್ತು ಹಣ ?

ಕೇವಲ ತಬ್ರೇಝ್ ಮಾತ್ರವಲ್ಲದೆ, ವ್ಯಾಪಾರಿಗಳಾದ ಹನುಮಂತ-8 ಲಕ್ಷ, ರಘುನಾಥ್-15 ಲಕ್ಷ, ರಾಕೇಶ್-15, ವಾಸು-5, ಮತೀನ್-15 ಲಕ್ಷ, ಬಾಬು-4 ಲಕ್ಷ, ಲಾಲುಸೇಠ್-2 ಲಕ್ಷ, ರೆಡ್ಡಿ ಮಂಡಿ-7 ಲಕ್ಷ ಸೇರಿದಂತೆ ಹತ್ತಾರು ಮಂದಿಗೆ ಸುಮಾರು 1 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವಂಚನೆ ಮಾಡಿದ್ದು, ಇದರಿಂದ ಹಣ್ಣು ವ್ಯಾಪಾರಿಗಳಿಗೆ ಬಹುದೊಡ್ಡ ಪೆಟ್ಟು ಬಿದ್ದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X