Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಟ್ಲ ಅವರನ್ನು ಕಟೀಲು ಮೇಳಕ್ಕೆ...

ಪಟ್ಲ ಅವರನ್ನು ಕಟೀಲು ಮೇಳಕ್ಕೆ ಸೇರ್ಪಡೆಗೊಳಿಸಲು ಒತ್ತಾಯ : ನ.25ರಂದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Nov 2019 10:27 PM IST
share

ಮಂಗಳೂರು, ನ.24: ಕಟೀಲು ಮೇಳದಿಂದ ಕೈಬಿಟ್ಟ ಭಾಗವತ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರನ್ನು ಮತ್ತೆ ಕಟೀಲು ಮೇಳಕ್ಕೆ ಸೇರ್ಪಡೆಗೊಳಿಸಬೇಕು. ಸೇವೆಯಾಟದ ದಿನ ಮಾಡಿದ ಅವಮಾನಕ್ಕೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಪಟ್ಲ ಸತೀಶ್ ಶೆಟ್ಟಿ ಅವರ ಅಭಿಮಾನಿಗಳ ವತಿಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನೇತೃತ್ವದಲ್ಲಿ ನ.25ರಂದು ಮಧ್ಯಾಹ್ನ 2:30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಆಯೋಜಿಸಲಾಗಿದೆ.

ಶನಿವಾರ ಸಂಜೆ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮತ್ತು ಪಟ್ಲ ಅಭಿಮಾನಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.

ಖಂಡನೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶುಕ್ರವಾರ ಕ್ಷೇತ್ರದ ಯಕ್ಷಗಾನ ಮೇಳಗಳ ತಿರುಗಾಟದ ಆರಂಭದ ಸೇವೆಯಾಟ ಸಂದರ್ಭದಲ್ಲಿ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ರಂಗಸ್ಥಳದಲ್ಲಿ ಭಾಗವತಿಕೆಗೆ ಕುಳಿತಾಗ ಅವರಿಗೆ ಅವಕಾಶ ನೀಡದೆ ಕೆಳಗಿಳಿಸಿರುವುದು ಖಂಡನೀಯ ಎಂದು ಪಟ್ಲ ಸತೀಶ್ ಶೆಟ್ಟಿ ಅಭಿಮಾನಿಗಳ ಬಳಗ ಹೇಳಿದೆ.

‘ಶುಕ್ರವಾರ ಪುಣ್ಯಕ್ಷೇತ್ರವಾದ ಶ್ರೀ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಆರಂಭದ ದಿನ ಸೇವೆ ಆಟದ ಸಂದರ್ಭದಲ್ಲಿ ಮೇಳದ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರನ್ನು ರಂಗಸ್ಥಳದಿಂದ ಇಳಿಸಿದ ಆಡಳಿತದ ಕ್ರಮವನ್ನು ಸಭೆಯು ತೀವ್ರವಾಗಿ ಖಂಡಿಸುತ್ತದೆ. ಭಾಗವತರು ರಂಗವೇರಿದ ಮೇಲೆ ತನ್ನ ಕಲಾ ಕೈಂಕರ್ಯ ಮಾಡದಂತೆ ತಡೆಯುವುದು ಕಲೆಗೆ, ಕಲಾವಿದರಿಗೆ ಮತ್ತು ಮಹಾನ್ ಕ್ಷೇತ್ರಕ್ಕೆ ಅವಮಾನಕರ. ಈ ಕುರಿತಾಗಿ ಕಾನೂನು, ನ್ಯಾಯಗಳ ಚೌಕಟ್ಟಿನಲ್ಲಿ ಸರಕಾರಿ ಇಲಾಖೆ-ದೇವಾಲಯದ ಆಡಳಿತದ ಮತ್ತು ಕಲಾವಿದರ ಘನತೆಗೆ ತಕ್ಕಂತೆ ಸೂಕ್ತ ಸೌಹಾರ್ದಯುತ ಪರಿಹಾರವನ್ನು ರೂಪಿಸಿ ಭಾಗವತರನ್ನು ಮರಳಿ ಮೇಳಕ್ಕೆ ಸಂಯೋಜಿಸಿ ಆಗಿರುವ ತಪ್ಪನ್ನು ಸರಿಪಡಿಸಬೇಕು’ ಎಂದು ಆಗ್ರಹಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಮಾತನಾಡಿ, ಶ್ರೀ ಕ್ಷೇತ್ರ ಕಟೀಲಿನಲ್ಲಿ ಶುಕ್ರವಾರ ನಡೆದಿರುವ ಘಟನೆ ಕಲಾವಿದ ರೆಲ್ಲರಿಗೂ ಅತೀವ ನೋವು ತಂದಿದೆ. ಇದು ಕಲಾವಿದರಿಗೆ, ಕಲಾಕ್ಷೇತ್ರಕ್ಕೆ ಮಾಡಿರುವ ಅವಮಾನ ಎಂದರು.

ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಮಾತನಾಡಿ, ಯಕ್ಷಗಾನ ರಂಗದಲ್ಲಿ ನನ್ನ 55 ವರ್ಷಗಳ ಅನುಭವದಲ್ಲಿ ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ರಂಗಸ್ಥಳದಲ್ಲಿ ಭಾಗವತಿಕೆಗೆ ಕುಳಿತ ಮೇಲೆ ಪಟ್ಲ ಅವರನ್ನು ಇಳಿಸಿರುವುದು ಕಲೆಗೆ ಮಾಡಿರುವ ಅವಮಾನವಾಗಿದ್ದು, ಇದು ಖಂಡನೀಯ ಎಂದರು.

ಕಲಾವಿದ ಸಂಜಯ ಕುಮಾರ್ ಗೋಣಿಬೀಡು ಮಾತನಾಡಿ, ಯಕ್ಷಗಾನ ಇತಿಹಾಸದಲ್ಲೇ ನಡೆಯದ ಘಟನೆ ಶುಕ್ರವಾರ ಕಟೀಲು ಕ್ಷೇತ್ರದ ಮೇಳದ ಸೇವೆಯಾಟದಲ್ಲಿ ನಡೆದಿದ್ದು, ಇದು ಸರಿಯಲ್ಲ. ಪಟ್ಲ ಸತೀಶ್ ಶೆಟ್ಟಿ ಅವರಿಗೆ ನ್ಯಾಯ ಸಿಗಬೇಕು ಹಾಗೂ ಪ್ರಕರಣ ಸುಖಾಂತ್ಯವಾಗಬೇಕು ಎಂದು ಒತ್ತಾಯಿಸಿದರು.

ಪ್ರಕರಣವನ್ನು ಖಂಡಿಸಿ ಯಕ್ಷಗಾನ ಅಕಾಡಮಿ ಸದಸ್ಯ ಕದ್ರಿ ನವನೀತ ಶೆಟ್ಟಿ, ಬೋಳಾರ ಹಳೇಕೋಟೆ ಮಾರಿಯಮ್ಮ ದೇವಸ್ಥಾನ ಆಡಳಿತ ಮೊಕ್ತೇಸರ ಬೋಳಾರ ತಾರಾನಾಥ ಶೆಟ್ಟಿ, ತುಳು ನಾಟಕ ಕಲಾವಿದ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಆಳ್ವ, ಅರುವ ಕೊರಗಪ್ಪ ಶೆಟ್ಟಿ, ಸಾಂಸ್ಕೃತಿಕ ಪ್ರತಿಷ್ಠಾನದ ದೇವಿ ಪ್ರಸಾದ್ ಶೆಟ್ಟಿ, ಆರ್.ಕೆ. ಭಟ್, ಸಂಜಯರಾವ್, ಭಾಗವತ ಸತ್ಯನಾರಾಯಣ ಪುಣಿಂಚಿತ್ತಾಯ, ಯಕ್ಷಗಾನ ವಿಮರ್ಶಕ ಶಾಂತಾರಾಮ ಕುಡ್ವ ಮುಂತಾದವರು ಮಾತನಾಡಿದರು.

ಪೂರ್ವನಿಯೋಜಿತ ಕೃತ್ಯ: ಭಾಗವತ ಪಟ್ಲ ಸತೀಶ್ ಶೆಟ್ಟಿ

‘ಮೇಳದ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ್ದ ಏಳು ಕಲಾವಿದರನ್ನು ಮೇಳದ ಯಜಮಾನರು ಶ್ರೀ ಕ್ಷೇತ್ರಕ್ಕೆ ಕರೆಯಿಸಿ ಎಚ್ಚರಿಕೆ ನೀಡಿದ್ದರು. ಒಂದು ವೇಳೆ ನನ್ನಲ್ಲಿ ಏನಾದರೂ ತಪ್ಪು ಆಗಿದ್ದರೆ ನನ್ನನ್ನೂ ಕರೆಯಿಸಿ ಕೇಳಬಹುದಿತ್ತು. ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಲ್ಲಿ ಆಶೀರ್ವಾದ ಪಡೆದು ನಿಂತಿದ್ದೆ. ಆ ಸಂದರ್ಭವೂ ಯಾರೂ ಮಾಹಿತಿ ನೀಡಲಿಲ್ಲ. ಆದರೆ ರಂಗಸ್ಥಳ ಏರಿದ ಕೂಡಲೇ ಈ ರೀತಿ ಕೆಳಗಿಳಿಸಿದ್ದು ಪೂರ್ವನಿಯೋಜಿತ. ಯಾವ ಕಲಾವಿದರಿಗೂ ಇಂತಹ ಅಪಮಾನ ಆಗಬಾರದು’ ಎಂದು ಭಾಗವತ ಪಟ್ಲ ಸತೀಶ್ ಶೆಟ್ಟಿ  ‘ನಾನು ನನ್ನ ಮೇಳದ ಪ್ರಧಾನ ಭಾಗವತರಿಗೆ ಶುಕ್ರವಾರ ಬೆಳಗ್ಗೆಯೇ ಸಂಪರ್ಕಿಸಿದ್ದೆ. ರಾತ್ರಿವರೆಗೂ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಮೇಳದ ಮ್ಯಾನೇಜರ್ ಕೂಡ ನನಗೆ ವಿಷಯ ತಿಳಿಸಿರಲಿಲ್ಲ. ವೇದಿಕೆಗೆ ಏರಿದ ಕೂಡಲೇ ದೇವಿಪ್ರಸಾದ್ ಶೆಟ್ಟಿ ಸಹಿತ ನಾಲ್ವರು ಗೂಂಡಾಗಳಂತೆ ಬಂದು ಭಾಗವತಿಕೆ ಮಾಡಬೇಡ ಎಂದು ಕೆಳಗಿಳಿಯಲು ಹೇಳಿದ್ದಾರೆ. ನಾನು ಇಳಿದಿದ್ದೇನೆ, ತಲೆಯ ಪೇಟವನ್ನು ತಾಯಿ ಕಟಿಲೇಶ್ವರಿಯ ಮುಂದಿರಿಸಿ ಕೈಮುಗಿದು ಬಂದಿದ್ದೇನೆ’ ಎಂದು ಭಾಗವತ ಪಟ್ಲ ಸತೀಶ್ ಶೆಟ್ಟಿ ಘಟನೆ ಬಗ್ಗೆ ವಿವರಿಸಿದರು.

‘ಮುಂದೇನು ಎನ್ನುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನಾನು ಯಾವತ್ತಿಗೂ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ಮಗ. ನನಗೆ ಆದ ಅನ್ಯಾಯಕ್ಕೆ ಅಮ್ಮನವರೇ ನನ್ನನ್ನು ಕರೆಯಿಸಿಕೊಳ್ಳುವ ಭರವಸೆ ಇದೆ’ ಎಂದು ತಿಳಿಸಿದರು.

‘ರಂಗಸ್ಥಳದಲ್ಲೇ ನನ್ನನ್ನು ಕೆಳಗಿಳಿಸುವುದು ಅವರ ಉದ್ದೇಶವಾಗಿತ್ತು. ಸುಮಾರು 20 ವರ್ಷಗಳಿಂದ ನಾನು ಯಕ್ಷಗಾನ ಕಲಾಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ನನ್ನಿಂದ ಆದಷ್ಟು ಸಹಾಯ ಮಾಡಿದ್ದೇನೆ. ಮೇಳಕ್ಕೆ, ಯಜಮಾನರಿಗೆ, ಸೇವಾಕರ್ತರಿಗೆ ಎಂದೂ ದ್ರೋಹ ಮಾಡಿಲ್ಲ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X