Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರ...

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರ ಸ್ವಾಭಿಮಾನದ ನಡಿಗೆ ಹಾಗೂ ಕರ್ನಾಟಕ ಕ್ರೀರ್ ಹಬ್ಬ-2019

ವಾರ್ತಾಭಾರತಿವಾರ್ತಾಭಾರತಿ24 Nov 2019 11:59 PM IST
share
ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರ ಸ್ವಾಭಿಮಾನದ ನಡಿಗೆ ಹಾಗೂ ಕರ್ನಾಟಕ ಕ್ರೀರ್ ಹಬ್ಬ-2019

ಬೆಂಗಳೂರು, ನ.24: ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಎಲ್ಲರಂತೆ ಸಮಾನವಾಗಿ ಕಾಣುವುದು ಹಾಗೂ ಸಮಾನ ಅವಕಾಶ ನೀಡುವುದು ಸರಕಾರದ ಕರ್ತವ್ಯ ಎಂದು ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಸಂಚಾಲಕ ಮಲ್ಲಪ್ಪ ತಿಳಿಸಿದ್ದಾರೆ.

ರವಿವಾರ ನಮ್ಮ ಪ್ರೈಡ್ ವತಿಯಿಂದ ನಗರದ ತುಳಸಿ ಪಾರ್ಕ್‌ನಿಂದ ಪುರಭವನದ ವರೆಗೆ ಆಯೋಜಿಸಿದ್ದ ಲೈಂಗಿಕ ಅಲ್ಪಸಂಖ್ಯಾತರ ಸ್ವಾಭಿಮಾನದ ನಡಿಗೆ ಹಾಗೂ ಕರ್ನಾಟಕ ಕ್ರೀರ್ ಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಆಧುನಿಕತೆ, ತಂತ್ರಜ್ಞಾನ ಸಾಕಷ್ಟು ಮುಂದುವರೆದರು ಲೈಂಗಿಕ ಅಲ್ಪಸಂಖ್ಯಾತರನ್ನು ಪೂರ್ವಾಗ್ರಹದಿಂದ ನೋಡುವುದು ತಪ್ಪಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ವಿಶೇಷವಾಗಿ ಪರಿಗಣಿಸಬೇಕೆಂದು ನಾವು ಹೇಳುತ್ತಿಲ್ಲ. ಎಲ್ಲರಂತೆ ನಮಗೂ ಸ್ವಾಭಿಮಾನದಿಂದ ಬದುಕುವುದಕ್ಕೆ ಅವಕಾಶ ಮಾಡಿಕೊಡಬೇಕು. ಎಲ್ಲ ಕ್ಷೇತ್ರಗಳಲ್ಲೂ ಲೈಂಗಿಕ ಅಲ್ಪಸಂಖ್ಯಾತರು ತೊಡಗುವಂತಾಗಲು ಮುಕ್ತ ಅವಕಾಶ ಒದಗಿಸಲು ಸರಕಾರ ಮುಂದಾಗಬೇಕೆಂದು ಅವರು ಹೇಳಿದರು.

ಕೇಂದ್ರ ಸರಕಾರ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಂಘ, ಸಂಸ್ಥೆಗಳೊಂದಿಗೆ ಯಾವುದೇ ಚರ್ಚೆ ಮಾಡದೆ, ಲೈಂಗಿಕ ಅಲ್ಪಸಂಖ್ಯಾತ ಸಂರಕ್ಷಣಾ ಮಸೂದೆ-2019ನ್ನು ಸಂಸತ್‌ನಲ್ಲಿ ಮಂಡಿಸಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಲೈಂಗಿಕ ಅಲ್ಪಸಂಖ್ಯಾತರ ಮಸೂದೆ ಮಂಡನೆ ಆಗಬಾರದು. ಪ್ರತಿಪಕ್ಷಗಳು ಇದಕ್ಕೆ ಅವಕಾಶ ಮಾಡಿಕೊಡಬಾರದೆಂದು ಅವರು ಒತ್ತಾಯಿಸಿದರು.

ಕರ್ನಾಟಕ ಕ್ರೀರ್ ಹಬ್ಬಕ್ಕೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಭಾಗಗಳಿಂದ ನೂರಾರು ಮಂದಿ ಲೈಂಗಿಕ ಅಲ್ಪಸಂಖ್ಯಾತರು ಭಾಗವಹಿಸಿದರು. ಈ ವೇಳೆ ಸಂಸ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡು, ಕುಣಿತ, ನಾಟಕಗಳ ಮೂಲಕ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳನ್ನು ಸಾದರ ಪಡಿಸಿದರು.

ಹಕ್ಕೋತ್ತಾಯಗಳು: ರಾಜ್ಯ ಹಾಗೂ ಕೇಂದ್ರ ಸರಕಾರ 2018ರ ನವತೇಜ್ ಸಿಂಗ್ ಜೋಹರ್, ಸುಪ್ರೀಂ ಕೋರ್ಟ್ ತೀರ್ಪನ್ನು ಅನುಷ್ಟಾನಗೊಳಿಸಬೇಕು. ಹಾಗೂ ಲಿಂಗತ್ವ ಮತ್ತು ಲೈಂಗಿಕತೆ ಬಗ್ಗೆ ಸಂವೇದನಾ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು. ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಹಿಂಸೆ, ತಾರತಮ್ಯ, ಕೌಟುಂಬಿಕ ದೌರ್ಜನ್ಯಗಳು ನಿಲ್ಲಿಸುವಂತೆ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ನಾಗರಿಕ ಒಕ್ಕೂಟದ ಹಕ್ಕು ಅಥವಾ ವಿವಾಹ, ದತ್ತು ಪಡೆಯುವ, ವಿಮೆ ಮತ್ತು ಪಿತ್ರಾರ್ಜಿತದ ಹಕ್ಕುಗಳು ಸಿಗಬೇಕು. ಲೈಂಗಿಕ ಅಲ್ಪಸಂಖ್ಯಾತರು ಎಲ್ಲ ಕ್ಷೇತ್ರಗಳಲ್ಲೂ ಮುಂದುವರೆಯುವಂತೆ ಪ್ರೋತ್ಸಾಹ ನೀಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X