Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಅನರ್ಹರಿಗಾಗಿ ಪ್ರಾಣ ತ್ಯಾಗ’ ಎಂದ...

‘ಅನರ್ಹರಿಗಾಗಿ ಪ್ರಾಣ ತ್ಯಾಗ’ ಎಂದ ಬಿಎಸ್‌ವೈಗೆ ಕುಮಾರಸ್ವಾಮಿ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ25 Nov 2019 6:33 PM IST
share
‘ಅನರ್ಹರಿಗಾಗಿ ಪ್ರಾಣ ತ್ಯಾಗ’ ಎಂದ ಬಿಎಸ್‌ವೈಗೆ ಕುಮಾರಸ್ವಾಮಿ ತಿರುಗೇಟು

ಹೊಸಪೇಟೆ, ನ. 25: ‘ಅನರ್ಹ ಶಾಸಕರಿಗಾಗಿ ಪ್ರಾಣ ತ್ಯಾಗ ಮಾಡುವೆ’ ಎಂದ ಮುಖ್ಯಮಂತ್ರಿ ಯಡಿಯೂರಪ್ಪ, ನೆರೆ ಸಂತ್ರಸ್ತರಿಗೆ ಅಥವಾ ರಾಜ್ಯದ ಆರೂವರೆ ಕೋಟಿ ಜನರಿಗಾಗಿ ಪ್ರಾಣ ಕೊಡುತ್ತೇನೆ ಎಂದು ಹೇಳಲಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಸೋಮವಾರ ಇಲ್ಲಿನ ವಿಜಯನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗಾಗಿ ಪ್ರಾಣ ತ್ಯಾಗದ ಮಾತುಗಳನ್ನು ಆಡಿದ್ದರೆ, ಅವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದೆ ಎಂದು ಹೇಳಿದರು.

ಸಮುದಾಯದ ದುರ್ಬಳಕೆ: ‘ವೀರಶೈವ ಸಮುದಾಯ ಬೇರೆಯವರಿಗೆ ಮತ ಹಾಕಬಾರದು’ ಎಂಬ ಯಡಿಯೂರಪ್ಪ ಹೇಳಿಕೆಗೆ ಆಕ್ಷೇಪಿಸಿದ ಕುಮಾರಸ್ವಾಮಿ, ವೀರಶೈವರನ್ನು ಬಿಟ್ಟು ಬೇರೆ ಯಾರ ಮತಗಳೂ ಬೇಡ ಎನ್ನುವ ಮೂಲಕ ಅವರು ಆ ಸಮುದಾಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇತರೆ ಸಮುದಾಯದವರನ್ನೂ ಅವಮಾನಿಸಿದ್ದಾರೆಂದು ದೂರಿದರು.

ಬೆನ್ನಿಗೆ ಚೂರಿ ಹಾಕಿದ: ‘ಕುಮಾರಣ್ಣ ನಿನ್ನಿಂದ ನಾನು ಬದುಕಿದೆ ಎನ್ನುತ್ತಿದ್ದ ಆನಂದ್ ಸಿಂಗ್ ಬಿಜೆಪಿ ಸೇರಿ ನನ್ನ ಬೆನ್ನಿಗೆ ಚೂರಿ ಹಾಕಿದರು. ನಾನು ತಿನ್ನುವ ಅನ್ನದ ಪ್ರತಿ ಅನ್ನದ ಅಗುಳಿನ ಮೇಲೂ ಕುಮಾರಸ್ವಾಮಿ ಹೆಸರಿದೆ ಎನ್ನುತ್ತಿದ್ದರು. ಆದರೆ, ನನ್ನಿಂದ ಸಹಾಯ ಪಡೆದು ಬಿಜೆಪಿಗೆ ಹೋದರು’ ಎಂದು ಆನಂದ್‌ ಸಿಂಗ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ ನಡೆಸಿದರು.

ಆನಂದ್ ಸಿಂಗ್ ಮತದಾರರಿಗೆ ನೀಡುವ ಹಣ ಬೆವರು ಹರಿಸಿ ದುಡಿದಿದ್ದಲ್ಲ. ಜಿಲ್ಲೆಯ ಸಂಪತ್ತನ್ನು ಮಾರಾಟ ಮಾಡಿ ಗಳಿಸಿದ ಹಣ. ಹೀಗಾಗಿ ಮತದಾರರು ಎಚ್ಚರಿಕೆಯಿಂದ ಮತದಾನ ಮಾಡಬೇಕೆಂದ ಅವರು, 2008ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಮತ್ತೆ ಗೆದ್ದರು. 2018ರಲ್ಲಿ ಕಾಂಗ್ರೆಸ್ ಸೇರಿ ಮತ್ತೆ ಗೆದ್ದು ರಾಜೀನಾಮೆ ನೀಡುವ ಬದಲು ಬಿಜೆಪಿಯಲ್ಲೇ ಉಳಿಯಬೇಕಿತ್ತು ಎಂದರು.

ಪಕ್ಷಾಂತರದಿಂದ ನಡೆಯುತ್ತಿರುವ ಉಪಚುನಾವಣೆಗೆ ಸರಕಾರದ ಸುಮಾರು 35 ಕೋಟಿ ರೂ.ಖರ್ಚಾಗುತ್ತದೆ. ಅದು ಜನರ ತೆರಿಗೆ ಹಣ. 50ಕೋಟಿ ರೂ.ಸಂಗ್ರಹಿಸಿ ಯಡಿಯೂರಪ್ಪ ಉಪಚುನಾವಣೆ ಗೆಲ್ಲಲು ಹೊರಟಿದ್ದಾರೆ. ಅವರನ್ನು ಸೋಲಿಸಿದರೆ ಮಾತ್ರ ಜನರ ಬದುಕು ಸುಭಿಕ್ಷವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ಹದಿನಾಲ್ಕು ತಿಂಗಳು ಕಾಂಗ್ರೆಸ್ ಜೊತೆ ಮೈತ್ರಿ ಸರಕಾರ ನಡೆಸಲು ಹಲವು ಸಮಸ್ಯೆಗಳನ್ನು ಎದುರಿಸಿದೆ. ರೈತರ ಸಾಲಮನ್ನಾ ನನ್ನ ಉದ್ದೇಶವಾಗಿತ್ತು. 25 ಸಾವಿರ ಕೋಟಿ ರೂ.ಸಾಲಮನ್ನಾ ಮಾಡಲಾಗಿದೆ. 26 ಲಕ್ಷ ಮಂದಿಗೆ ಅನುಕೂಲವಾಗಿದೆ. ಆದರೆ ಮತ ಹಾಕಬೇಕಾದರೆ ಏಕೆ ನಮ್ಮನ್ನು ಮರೀತೀರಿ? ಎಂದು ಎಚ್‌ಡಿಕೆ ಪ್ರಶ್ನಿಸಿದರು.

ಪ್ರಧಾನಿ ಮೋದಿ ಆಗಾಗ ಅತಿಥಿಯಂತೆ ದೇಶಕ್ಕೆ ಬಂದು ಹೋಗುತ್ತಾರೆ. ಉಳಿದ ಸಮಯದಲ್ಲಿ ವಿದೇಶ ಪ್ರವಾಸ ಮಾಡುತ್ತಿರುತ್ತಾರೆ. ಆದರೆ, ರಾಜ್ಯದಲ್ಲಿ ನೆರೆ ಹಾವಳಿ ಉಂಟಾದ ಸಂದರ್ಭದಲ್ಲಿ ಒಮ್ಮೆಯೂ ಭೇಟಿ ನೀಡಲಿಲ್ಲ. ಭರವಸೆಯ ಮಾತನ್ನೂ ಆಡಲಿಲ್ಲ. ರಾಜ್ಯದಲ್ಲಿ ಸರಕಾರ ಅನರ್ಹರ ಪರವಾಗಿದೆ ಎಂದು ಟೀಕಿಸಿದರು.

‘ಜನಗಳನ್ನು ಖರೀದಿಸುತ್ತೇವೆ ಎಂಬ ಅಹಂಕಾರವನ್ನು ಬಿಜೆಪಿ ಪ್ರದರ್ಶಿಸಿದೆ. ನೆರೆ ಸಂತ್ರಸ್ತರಿಗೆ ನೆರವೂ ನೀಡಲಿಲ್ಲ. ನಾನು ಬಿಜೆಪಿ ಅಥವಾ ಕಾಂಗ್ರೆಸ್ ಜೊತೆಗೆ ಏಕೆ ಹೋಗಲಿ. ಆದರೆ, ಸರಕಾರವಂತೂ ಉಳಿಯಲಿದೆ. ಅದಕ್ಕೆ ಏನು ಮಾಡುತ್ತೇನೆಂದು ಆ ಮೇಲೆ ಹೇಳುವೆ’
-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X