Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಹೊಸ 7 ಮರಳು...

ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಹೊಸ 7 ಮರಳು ದಿಬ್ಬಗಳ ಗುರುತು

ಎನ್‌ಐಟಿಕೆ ತಜ್ಞರಿಂದ ಮರು ಸರ್ವೆ

ವಾರ್ತಾಭಾರತಿವಾರ್ತಾಭಾರತಿ25 Nov 2019 9:02 PM IST
share
ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಹೊಸ 7 ಮರಳು ದಿಬ್ಬಗಳ ಗುರುತು

ಉಡುಪಿ, ನ.25: ಉಡುಪಿ ತಾಲೂಕಿನ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಎನ್‌ಐಟಿಕೆ ತಜ್ಞರ ಮೂಲಕ ಮರು ಸರ್ವೆ ನಡೆಸಲಾಗಿದ್ದು, ಅದರಂತೆ ಉದ್ಯಾವರ ಪಾಪಾನಾಶಿನಿ ಹೊಳೆಯಲ್ಲಿ ನಾಲ್ಕು, ಸ್ವರ್ಣ ನದಿಯಲ್ಲಿ ಮೂರು ಮರಳು ದಿಬ್ಬಗಳನ್ನು ಗುರುತಿಸಲಾಗಿದೆ ಎಂದು ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರಾಂಜಿ ನಾಯ್ಕ ತಿಳಿಸಿದ್ದಾರೆ.

ಈ ಹಿಂದೆ ಉದ್ದೇಶಪೂರ್ವಕವಾಗಿ ಮರಳು ಇರುವ ಪ್ರದೇಶದ ಬದಲು ಮರಳು ಇಲ್ಲದ ಜಾಗದಲ್ಲಿ ದಿಬ್ಬಗಳನ್ನು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಮರು ಸರ್ವೆ ನಡೆಸಲಾಗಿದೆ. ಇದೀಗ ಗುರುತಿಸಿರುವ ದಿಬ್ಬ ಗಳಲ್ಲಿ 3.5 ಲಕ್ಷ ಮೆಟ್ರಿಕ್ ಟನ್ ಮರಳು ದೊರೆಯಲಿದೆ. ಈ ಬಗ್ಗೆ ಏಳು ಮಂದಿಯ ಸದಸ್ಯರ ಸಮಿತಿಯಿಂದ ತೀರ್ಮಾನ ತೆಗೆದುಕೊಂಡು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಡಿಸಿಝೆಡ್‌ಎಂಎಯ ಮೂಲಕ ಅನುಮೋದನೆಗಾಗಿ ರಾಜ್ಯ ಸರಕಾರಕ್ಕೆ ಕಳುಹಿಸಾಗುವುದು ಎಂದರು.

ಉಡುಪಿ ತಾಲೂಕಿನ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಈಗಾಗಲೇ ಉದ್ಯಾವರ ಪಾಪಾನಾಶಿನಿ, ಸ್ವರ್ಣ ಹಾಗೂ ಸೀತಾನದಿಗಳಲ್ಲಿ ಒಟ್ಟು ಎಂಟು ಮರಳು ದಿಬ್ಬಗಳನ್ನು ಗುರುತಿಸಿ 7.92 ಲಕ್ಷ ಮೆಟ್ರಿಕ್ ಟನ್ ಮರಳು ತೆರವುಗೊಳಿಸಲು ಟೆಂಡರ್ ವಹಿಸಿಕೊಡಲಾಗಿದೆ. ಇದರಲ್ಲಿ ಕೆಲವೊಂದು ಸಮಸ್ಯೆ ಹಾಗೂ ಮೀನುಗಾರರ ವಿರೋಧದ ಹಿನ್ನೆಲೆಯಲ್ಲಿ ಪಾಪಾನಾಶಿನಿ ಹೊಳೆಯ ನಾಲ್ಕು ಮರಳು ದಿಬ್ಬಗಳಿಂದ ಮರಳು ತೆರವುಗೊಳಿಸುವ ಕಾರ್ಯ ಮಾಡಲಾಗುತ್ತಿಲ್ಲ. ಉಳಿದಂತೆ ಸ್ವರ್ಣ ಮತ್ತು ಸೀತಾನದಿಯ ನಾಲ್ಕು ದಿಬ್ಬಗಳಿಂದ ನ.19ರವರೆಗೆ ಒಟ್ಟು 1.5ಲಕ್ಷ ಮೆಟ್ರಿಕ್ ಟನ್ ಮರಳನ್ನು ತೆರವುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

21 ಮರಳು ದಿಬ್ಬಕ್ಕೆ ಟೆಂಡರ್: ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ 2018-19ರಲ್ಲಿ ಒಟ್ಟು 30 ಮರಳು ದಿಬ್ಬಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಏಳು ದಿಬ್ಬಗಳನ್ನು ಲೋಕೋಪಯೋಗಿ ಇಲಾಖೆ, ವಾರಾಹಿ ಯೋಜನೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. ಉಳಿದ 23 ದಿಬ್ಬಗಳಲ್ಲಿ ಎರಡು ದಿಬ್ಬಗಳ ಟೆಂಡರ್ ಕರೆಯ ಲಾಗಿದ್ದು, ಇಲ್ಲಿ ದಿನಕ್ಕೆ 150 ಲೋಡ್ ಮರಳನ್ನು ತೆರವುಗೊಳಿಸಲಾಗುತ್ತಿದೆ. ಉಳಿದ 21 ದಿಬ್ಬಗಳು ಕೆಲವೊಂದು ನಿಯಮಗಳಿಂದಾಗಿ ಬಾಕಿ ಉಳಿದಿವೆ. ಅದಕ್ಕೆ ಶೀಘವೇ ಮರು ಟೆಂಡರ್ ಕರೆಯುವ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು.

ಕಾರ್ಕಳ ತಾಲೂಕಿನಲ್ಲಿ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಗ್ರಾಪಂ, ಸಣ್ಣ ನೀರಾವರಿ ಇಲಾಖೆ ಹಾಗೂ ಗಣಿ ಇಲಾಖೆಯವರು ಜಂಟಿ ಸರ್ವೆ ನಡೆಸಿ ಒಂದು ಮುಂಡ್ಲಿಯಲ್ಲಿರುವ ಮಧ್ಯಮ ಅಣೆಕಟ್ಟು ಮತ್ತು ಎಂಟು ಸಣ್ಣ ಕಿಂಡಿ ಅಣೆಕಟ್ಟುಗಳನ್ನು ಗುರುತಿಸ ಲಾಗಿದ್ದು, ಇದರಿಂದ ಹೂಳು ತೆಗೆಯಲು ಆಯಾ ಗ್ರಾಪಂಗಳು ಟೆಂಡರ್ ಕರೆಯಲಿವೆ. ಇದರಲ್ಲಿ ಸಿಗುವ ಮರಳನ್ನು ಹರಾಜು ಮಾಡಲಾಗುವುದೆಂದು ಹಿರಿಯ ಭೂವಿಜ್ಞಾನಿ ರಾಂಜಿ ನಾಯ್ಕಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X