Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಕ್ಕಿ ಹರಿಯುತ್ತಿರುವ ಡ್ರೈನೇಜ್ ಗಳು:...

ಉಕ್ಕಿ ಹರಿಯುತ್ತಿರುವ ಡ್ರೈನೇಜ್ ಗಳು: ಮಂಗಳೂರಿನ ಜ್ಯೋತಿ ಸರ್ಕಲ್ ಬಳಿ ತಡೆಯಲಾಗುತ್ತಿಲ್ಲ ದುರ್ನಾತ!

ಇನ್ನಾದರೂ ಗಮನಹರಿಸಬಹುದೇ ನಗರಾಡಳಿತ?

ಇಸ್ಮಾಯೀಲ್ ಝೌರೇಝ್ಇಸ್ಮಾಯೀಲ್ ಝೌರೇಝ್25 Nov 2019 9:12 PM IST
share
ಉಕ್ಕಿ ಹರಿಯುತ್ತಿರುವ ಡ್ರೈನೇಜ್ ಗಳು: ಮಂಗಳೂರಿನ ಜ್ಯೋತಿ ಸರ್ಕಲ್ ಬಳಿ ತಡೆಯಲಾಗುತ್ತಿಲ್ಲ ದುರ್ನಾತ!

ಮಂಗಳೂರು, ನ.25: ನಗರದ ಪ್ರಮುಖ ಸ್ಥಳವಾದ ಜ್ಯೋತಿ ಸರ್ಕಲ್ ನಲ್ಲಿ ಎರಡು ಡ್ರೈನೇಜ್ ಗಳಿಂದ ಕಲುಷಿತ ನೀರು ಹೊರಬರುತ್ತಿದ್ದು, ಅಲ್ಲಿ ಬಸ್ ಗಳಿಗಾಗಿ ಕಾಯುವ ಜನರು ಮೂಗು ಮುಚ್ಚಿಕೊಂಡೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಹಲವು ದಿನಗಳಿಂದ ಜನರು ಇಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಿದ್ದು, ಇನ್ನೂ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ಜ್ಯೋತಿ ಪ್ರಮುಖ ಜಂಕ್ಷನ್ ಕೆಎಂಸಿ ಆಸ್ಪತ್ರೆ ಬಳಿ ಇರುವ ಡ್ರೈನೇಜ್ ಮತ್ತು ಜ್ಯೋತಿ ಟಾಕೀಸ್ ಬಳಿ ಇರುವ ಡ್ರೈನೇಜ್ ಒಂದರಿಂದ ಕಲುಷಿತ ನೀರು ಹೊರಬರುತ್ತಿದೆ. ಈ ಪ್ರದೇಶವು ಜನನಿಬಿಡವಾಗಿದ್ದು, ಸಂಜೆ ವೇಳೆಗೆ ಬಸ್ ಗಳಿಗೆ ಕಾಯುತ್ತಾ ನೂರಾರು ಮಂದಿ ಇಲ್ಲಿ ನಿಲ್ಲುತ್ತಾರೆ. ಆದರೆ ಈ ಸಮಸ್ಯೆಯಿಂದ ಬಸ್ ಗಳಿಗೆ ಕಾಯುವ ಪ್ರಯಾಣಿಕರು ಉಸಿರಾಡಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. 'ಇಲ್ಲಿ ಹೆಚ್ಚು ಹೊತ್ತು ನಿಲ್ಲುವುದರಿಂದ ಉಸಿರಾಟಕ್ಕೆ ಸಮಸ್ಯೆಯಾಗುತ್ತಿದೆ' ಎಂದು ಹಿರಿಯ ನಾಗರಿಕರು ಅಳಲು ತೋಡಿಕೊಳ್ಳುತ್ತಾರೆ.

"ಇದು ಅತ್ಯಂತ ಅಪಾಯಕಾರಿ. ನಗರಾಡಳಿತವು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲಿನ ಬಸ್ ನಿಲ್ದಾಣದಲ್ಲಿ ಸಾವಿರಾರು ಮಂದಿ ಬಸ್ ಗಳಿಗಾಗಿ ಕಾಯುತ್ತಾರೆ. ಈ ಜನರ ಆರೋಗ್ಯಕ್ಕೆ ಈ ಚರಂಡಿಗಳ ಮಾಲಿನ್ಯವು ಹಾನಿಕಾರಕ" ಎಂದು ಬಸ್ ಪ್ರಯಾಣಿಕ ಧನಂಜಯ್ ಶೆಟ್ಟಿ ಹೇಳುತ್ತಾರೆ.

"ಹಲವು ತಿಂಗಳುಗಳಿಂದ ಈ ಸಮಸ್ಯೆಯಿದೆ. ಆದರೆ ಇದು ನಗರಾಡಳಿತದ ಅಧಿಕಾರಿಗಳ ಕಣ್ಣಿಗೆ ಬಿದ್ದಿಲ್ಲ. ಸಂಜೆ ವೇಳೆ ಈ ಪ್ರದೇಶವು ಜನನಿಬಿಡವಾಗುತ್ತದೆ. ಈ ರಸ್ತೆಯಲ್ಲಿ ನಡೆದಾಡುವ ಜನರಿಗೆ ಈ ದುರ್ನಾತದಿಂದ ಸಮಸ್ಯೆಯಾಗುತ್ತಿದೆ" ಎಂದು ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸುಮಿತ್ ಭಟ್ ಹೇಳುತ್ತಾರೆ.

ಈ ಬಗ್ಗೆ 'ವಾರ್ತಾ ಭಾರತಿ' ಮಂಗಳೂರು ಮಹಾ ನಗರ ಪಾಲಿಕೆ ಕಮಿಶನರ್ ಅಜಿತ್ ಶಾನಾಡಿಯವರನ್ನು ಸಂಪರ್ಕಿಸಿದ್ದು, ಈ ಸಮಸ್ಯೆಯು ಆಡಳಿತದ ಗಮನಕ್ಕೆ ಬಂದಿದೆ. ವಾರದೊಳಗೆ ಇದನ್ನು ದುರಸ್ತಿಪಡಿಸಲಾಗುವುದು ಎಂದು ಅವರು ಹೇಳಿದರು.

ಆದರೆ ಈ ಬಗ್ಗೆ ವಾರ್ಡ್ ಕೌನ್ಸಿಲರ್ ಎ.ಸಿ. ವಿನಯರಾಜ್ ಬೇರೆಯದೇ ಮಾತುಗಳನ್ನು ಹೇಳುತ್ತಾರೆ.

"ಈ ಸಮಸ್ಯೆಗೆ ಅಜಿತ್ ಶಾನಾಡಿಯವರೇ ಕಾರಣ. ಸಮಸ್ಯೆ ಪರಿಹಾರಕ್ಕೆ ಅವರು ಸಹಕರಿಸುತ್ತಿಲ್ಲ. 4 ತಿಂಗಳುಗಳಿಂದ ನಾನು ಈ ಸಮಸ್ಯೆ ಪರಿಹರಿಸುವಂತೆ ಕೇಳುತ್ತಲೇ ಇದ್ದೇನೆ. ಆದರೆ ಅವರು ಈ ಬಗ್ಗೆ ಗಮನಹರಿಸುತ್ತಿಲ್ಲ. ಚರಂಡಿ ದುರಸ್ತಿ ಮಾಡದಿದ್ದರೆ ರಸ್ತೆ ತಡೆ ನಡೆಸುವುದಾಗಿ ಎಚ್ಚರಿಸಿದ್ದೆ. 2 ದಿನಗಳಲ್ಲಿ ದುರಸ್ತಿಗೊಳಿಸುವುದಾಗಿ ಅವರು ಹೇಳಿದ್ದರು" ಎಂದು ವಿನಯರಾಜ್ ಹೇಳುತ್ತಾರೆ.

"ಜೂನಿಯರ್ ಇಂಜಿನಿಯರ್ ಗಳ ಜೊತೆಯೂ ನಾನು ಮಾತನಾಡಿದ್ದೇನೆ. ಅವರು ಒಬ್ಬರು ಮತ್ತೊಬ್ಬರ ಮೇಲೆ ಆರೋಪ ಹೊರಿಸುತ್ತಾರೆ. ನಿಧಿ ಇಲ್ಲ ಎಂದು ದುರಸ್ತಿ ಕಾಮಗಾರಿಗೆ ಅಜಿತ್ ಶಾನಾಡಿ ಮುಂದಾಗುತ್ತಿಲ್ಲ ಎಂದು ಇಂಜಿನಿಯರ್ ಗಳು ಹೇಳುತ್ತಾರೆ" ಎಂದು ವಿನಯರಾಜ್ ಆರೋಪಿಸಿದರು.

ಆರೋಪ-ಪ್ರತ್ಯಾರೋಪಗಳೇನೇ ಇರಲಿ ವಿವಿಧ ರಾಜ್ಯಗಳ ಜನರು, ವಿದ್ಯಾರ್ಥಿಗಳಿರುವ, ಪ್ರತಿಷ್ಠಿತ ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳಿರುವ ಮಂಗಳೂರಿನ ಪ್ರಮುಖ ಪ್ರದೇಶದಲ್ಲೇ ಈ ಗಂಭೀರ ಸಮಸ್ಯೆಯಿರುವುದು ಮಂಗಳೂರಿಗೆ ಮಾಡುವ ಅವಮಾನ. ನಗರಾಡಳಿತದ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಬೇಕು.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕಾರ್ಟೂನ್
 

share
ಇಸ್ಮಾಯೀಲ್ ಝೌರೇಝ್
ಇಸ್ಮಾಯೀಲ್ ಝೌರೇಝ್
Next Story
X