Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 1ರಿಂದ ಫಾಸ್ಟ್ಯಾಗ್ ಅಳವಡಿಕೆ ಕಡ್ಡಾಯ...

ಡಿ. 1ರಿಂದ ಫಾಸ್ಟ್ಯಾಗ್ ಅಳವಡಿಕೆ ಕಡ್ಡಾಯ : ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ25 Nov 2019 10:46 PM IST
share
ಡಿ. 1ರಿಂದ ಫಾಸ್ಟ್ಯಾಗ್ ಅಳವಡಿಕೆ ಕಡ್ಡಾಯ : ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಸಭೆ

ಪಡುಬಿದ್ರಿ: ಡಿಸೆಂಬರ್ 1ರಿಂದ ಫಾಸ್ಟ್ಯಾಗ್ ಮೂಲಕ ಟೋಲ್‍ಪಾವತಿಯನ್ನು ಕಡ್ಡಾಯಗೊಳಿಸಲಾಗಿದ್ದು, ವಾಹನ ಮಾಲಕ ರೆಲ್ಲರೂ ಇದಕ್ಕೆ ತಮ್ಮ ವಾಹನವನ್ನು ಹೊಂದಾಣಿಕೆ ಮಾಡಿಕೊಳ್ಳಬೇಕಿದೆ.  ಟೋಲ್ ಗೇಟ್‍ಗಳ ಒಂದು ಪ್ರವೇಶಾತಿಯಲ್ಲಿ ಮಾತ್ರ ವಾಹನದಲ್ಲಿ ಡಿ. 1ರಿಂದ ಫಾಸ್ಟ್ಯಗ್ ಇಲ್ಲದಿದ್ದಲ್ಲಿ ದುಪ್ಪಟ್ಟು ಸುಂಕ ಪಾವತಿಸಿ ಹೋಗಬೇಕಾಗುತ್ತದೆ ಎಂದು ಎನ್‍ಎಚ್‍ಎಐ ಪ್ರತಿನಿಧಿ ನವೀನ್ ಹೇಳಿದರು.

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಫಾಸ್ಟ್ಯಾಗ್ ಅಳವಡಿಕೆಗೆ ಸಂಬಂಧಿಸಿ ಸಾರ್ವಜನಿಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮೂರು ದಿನಗಳಲ್ಲಿ (ನ. 28ಕ್ಕೆ) ಫಾಸ್ಟ್ಯಾಗ್‍ ಮುಕ್ತವಾಗಿ ನೀಡಲು ನಿರೀಕ್ಷಿಸುತ್ತಿದ್ದು ಬಂದಲ್ಲಿ ವಿತರಣೆ ಮಾಡುತ್ತೇವೆ. ಸಂಗ್ರಹ ನಿಜವಾಗಿಯೂ ವಿಳಂಬವಾದಲ್ಲಿ ಅಥವಾ ಸಾಕಷ್ಟು ಲಭ್ಯವಾಗದಿದ್ದಲ್ಲಿ ಎಲ್ಲೆಡೆಗಳ ಪರಿಸ್ಥಿತಿಯನ್ನು ತುಲನೆ ಮಾಡಿ ಎನ್‍ಎಚ್‍ಎಐ ಇದನ್ನು ಕೇಂದ್ರದ ಅನುಮತಿಯೊಂದಿಗೆ ಮುಂದೂಡಬಹುದಾಗಿದೆ ಎಂದು ಎನ್‍ಎಚ್‍ಎಐ ಪ್ರತಿನಿದಿ ನವೀನ್ ವಿವರಿಸಿದರು.

ಪೇಟಿಎಂ, ಆ್ಯಕ್ಸಿಸ್ ಬ್ಯಾಂಕ್ ಹಾಗೂ ಎನ್‍ಎಚ್‍ಎಐಗಳ ವತಿಯಿಂದ ವಾಹನ ಸವಾರರಿಗೆ ಫಾಸ್ಟ್ಯಾಗ್‍ ಖರೀದಿ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಎಲ್ಲಾ ಕೌಂಟರ್‍ಗಳಲ್ಲಿ ವಾಹನದ ಆರ್‍ಸಿ (ನೋಂದಣಿ ದಾಖಲೆ), ಆಧಾರ್‍ಕಾರ್ಡ್ ಅಥವಾ ಚಾಲನಾ ಪರವಾನಿಗೆಗಳ ದಾಖಲೆಗಳೊಂದಿಗೆ ವಾಹನದ ವಿವರಗಳನ್ನು ಅವರಿಗೆ ನೀಡಿದಲ್ಲಿ ಯಾವುದೇ ಪಾವತಿಗಳಿಲ್ಲದೇ ಮುಕ್ತವಾಗಿ ದೊರಕುವ ಫಾಸ್ಟ್ಯಾಗನ್ನು ಸಕ್ರಿಯಗೊಳಿಸಲಾಗುತ್ತದೆ. ಆದರ ಒಂದು ಸ್ಟಿಕ್ಕರನ್ನೂ ಕಾರಲ್ಲಿ ಅಂಟಿಸಲಾಗುತ್ತದೆ. ಈ ಖಾತೆಯನ್ನು ನಿಯಮಿತವಾಗಿ ರೀಚಾರ್ಜ್ ಮಾಡಿಸಬೇಕು. 200ರೂ. ಕನಿಷ್ಟ ಮಿತಿಯಾಗಿದ್ದು, ಇದು ಇದ್ದಲ್ಲಿ ಮಾತ್ರ ಟೋಲ್‍ಗೇಟಲ್ಲಿ ವಾಹನ ಪ್ರವೇಶಿಸುತ್ತಲೇ ಆಯಾಯ ಹೆದ್ದಾರಿ ಸುಂಕವು ವಾಹನ ಮಾಲಕನ ಖಾತೆಯಿಂದ ಕಡಿತವಾಗುತ್ತದೆ. ನಿತ್ಯ ನಿರಂತರ 265 ರೂ. ಪಾಸ್‍ಗಳನ್ನು ಹೊಂದಿರುವ ವಾಹನ ಮಾಲಕರು ಟೋಲ್‍ಗೇಟ್ ಕಚೇರಿಯನ್ನು ಸಂಪರ್ಕಿಸಿದಲ್ಲಿ ಆ ವಾಹನಗಳಿಗೆ ಫಾಸ್ಟ್ಯಾಗನ್ನು ಸಕ್ರಿಯಗೊಳಿಸಲಾಗುವುದು ಎಂದು ನವಯುಗ ಹೆಜಮಾಡಿ ಟೋಲ್‍ಗೇಟ್  ಪ್ರಬಂಧಕ ಶಿವಪ್ರಸಾದ್ ರೈ ಹೇಳಿದರು.

ಸ್ಥಳೀಯರಿಗೆ ವಿನಾಯಿತಿ: ಜಿಲ್ಲಾಮಟ್ಟದಲ್ಲಿ ಚರ್ಚೆ

ಫಾಸ್ಟ್ಯಾಗ್ ಆರಂಭಗೊಳ್ಳುವುದರಿಂದ ಸ್ಥಳೀಯ ವಾಹನಗಳು, ಹೆಜಮಾಡಿ ಒಳ ರಸ್ತೆಗಳಲ್ಲಿ ಸಂಚರಿಸುವ 20 ಸ್ಥಳೀಯ ಬಸ್ಸು ಗಳಿಗೆ ನೀಡಬಹುದಾದ ರಿಯಾಯಿತಿ, 5 ಕಿಮೀ. ಒಳಗಿನ ಟೂರಿಸ್ಟ್ ಕಾರುಗಳು ಮತ್ತು ಖಾಸಗಿ ವಾಹನಗಳಿಗೆ ಲಭ್ಯವಾಗಬಹು ದಾದ ರಿಯಾಯಿತಿಗಳಿಗೆ ಜಿಲ್ಲಾಡಳಿತ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು  ಕಾಪು ವೃತ್ತ ನಿರೀಕ್ಷಕ ಮಹೇಶ್‍ಪ್ರಸಾದ್ ಹೇಳಿದರು.

ಸಭೆಯಲ್ಲಿ ಪಡುಬಿದ್ರಿ ಠಾಣಾಧಿಕಾರಿ ಸುಬ್ಬಣ್ಣ, ಪ್ರೊಬೆಶನರಿ ಪಿಎಸ್‍ಐ ಸದಾಶಿವ ಗವರೋಜಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X