Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ :...

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ : ಕರ್ನಾಟಕವನ್ನು ಮಣಿಸಿದ ಮುಂಬೈ

ನಾಯಕ ಸೂರ್ಯಕುಮಾರ್ ಯಾದವ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ25 Nov 2019 11:47 PM IST
share
ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ : ಕರ್ನಾಟಕವನ್ನು ಮಣಿಸಿದ ಮುಂಬೈ

ಸೂರತ್, ನ.25: ನಾಯಕ ಸೂರ್ಯಕುಮಾರ್‌ಯಾದವ್ ಅವರ (ಔಟಾಗದೆ 94)ಭರ್ಜರಿ ಅರ್ಧಶತಕದ ಕೊಡುಗೆ ನೆರವಿನಿಂದ ಮುಂಬೈ ತಂಡ ಹಾಲಿ ಚಾಂಪಿಯನ್ ಕರ್ನಾಟಕ ತಂಡವನ್ನು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ‘ಬಿ’ ಗುಂಪಿನ ಸೂಪರ್ ಲೀಗ್ ಪಂದ್ಯದಲ್ಲಿ ಏಳು ವಿಕೆಟ್‌ಗಳ ಅಂತರದಿಂದ ಮಣಿಸಿದೆ.

ಮುಂಬೈ 172 ರನ್ ಗುರಿಯನ್ನು ಯಶಸ್ವಿಯಾಗಿ ಚೇಸಿಂಗ್ ಮಾಡಿದ್ದು,ಉತ್ತಮ ಫಾರ್ಮ್ ನಲ್ಲಿರುವ ಸೂರ್ಯ ಏಕಾಂಗಿ ಹೋರಾಟ ನೀಡಿ ದೇಶೀಯ ಕ್ರಿಕೆಟ್‌ನ ದೈತ್ಯ ತಂಡವನ್ನು ಒಂದು ಓವರ್ ಬಾಕಿ ಇರುವಾಗಲೇ ಗೆಲುವಿನ ದಡ ಸೇರಿಸಿದರು.

 ಮುಂಬೈ 44 ರನ್‌ಗೆ 2 ವಿಕೆಟ್ ಕಳೆದುಕೊಂಡಾಗ ಕ್ರೀಸ್‌ಗೆ ಇಳಿದ ಸೂರ್ಯ(ಔಟಾಗದೆ 94, 53 ಎಸೆತ, 11 ಬೌಂಡರಿ,4 ಸಿಕ್ಸರ್)ತಂಡಕ್ಕೆ ಆಸರೆಯಾದರು. ಆರಂಭಿಕ ಬ್ಯಾಟ್ಸ್ ಮನ್‌ಗಳಾದ ಆದಿತ್ಯ ತಾರೆ(12) ಹಾಗೂ ಪೃಥ್ವಿ ಶಾ(30) ವಿಕೆಟ್ ಒಪ್ಪಿಸಿದಾಗ ಮುಂಬೈಗೆ ಗೆಲ್ಲಲು 100ಕ್ಕೂ ಅಧಿಕ ರನ್ ಅಗತ್ಯವಿತ್ತು.

ಶ್ರೇಯಸ್ ಅಯ್ಯರ್(14) ಅವರೊಂದಿಗೆ ಮೂರನೇ ವಿಕೆಟ್‌ಗೆ 46 ರನ್ ಜೊತೆಯಾಟ ನಡೆಸಿದ ಆಕ್ರಮಣಕಾರಿ ಬಲಗೈ ದಾಂಡಿಗ ಸೂರ್ಯ ಇನಿಂಗ್ಸ್‌ಗೆ ಜೀವ ತುಂಬಿದರು. 11ನೇ ಓವರ್‌ನಲ್ಲಿ ಅಯ್ಯರ್‌ಗೆ ಪೆವಿಲಿಯನ್ ಹಾದಿ ತೋರಿಸಿದ ಕರ್ನಾಟಕ ತಿರುಗೇಟು ನೀಡಿತು. ಅಯ್ಯರ್ ನಿರ್ಗಮನದ ಬಳಿಕ ಸೂರ್ಯ ತನ್ನ ಪ್ರತಾಪ ತೋರಿದರು. ಸಿ.ಬಿ. ಪಟೇಲ್ ಮೈದಾನದಲ್ಲಿ ಕರ್ನಾಟಕದ ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿದರು. 53 ಎಸೆತಗಳಲ್ಲಿ 94 ರನ್ ಗಳಿಸಿದ ಸೂರ್ಯ 11 ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಸಿಡಿಸಿದರು.ಈ ಮೂಲಕ ಆಯ್ಕೆಗಾರರ ಮನ ಗೆದ್ದಿದ್ದಾರೆ.

ಮುಂಬೈ ನಾಯಕ ಸೂರ್ಯ ಆಲ್‌ರೌಂಡರ್ ಶಿವಂ ದುಬೆ(ಔಟಾಗದೆ 22, 18 ಎಸೆತ)ಜೊತೆಗೆ ನಾಲ್ಕನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 84 ರನ್ ಸೇರಿಸಿ ತಂಡಕ್ಕೆ ಭರ್ಜರಿ ಜಯ ತಂದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಕರ್ನಾಟಕ ತಂಡ ಕೆ.ಎಲ್. ರಾಹುಲ್(0) ಹಾಗೂ ನಾಯಕ ಮನೀಷ್ ಪಾಂಡೆ(4) ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡಿದ್ದರೂ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 171 ರನ್ ಗಳಿಸಲು ಶಕ್ತವಾಯಿತು.

ಆರಂಭಿಕ ಬ್ಯಾಟ್ಸ್‌ಮನ್ ದೇವದತ್ತ ಪಡಿಕ್ಕಲ್(57ರನ್, 34 ಎಸೆತ, 4 ಬೌಂಡರಿ,4 ಸಿಕ್ಸರ್)ರೋಹನ್ ಕದಂ(71 ರನ್, 41 ಎಸೆತ, 7 ಬೌಂಡರಿ,3 ಸಿಕ್ಸರ್)ಜೊತೆಗೆ ಸೇರಿ ಕರ್ನಾಟಕ ಗೌರವಾರ್ಹ ಮೊತ್ತ ಗಳಿಸಲು ನೆರವಾದರು.

ಮುಂಬೈ ಪರವಾಗಿ ವೇಗಿಗಳಾದ ಶಾರ್ದೂಲ್ ಠಾಕೂರ್(2-29), ಶಿವಂ ದುಬೆ(2-39) ಹಾಗೂ ಎಡಗೈ ಸ್ಪಿನ್ನರ್ ಶಂಸ್ ಮುಲಾನಿ(1-8)ಐದು ವಿಕೆಟ್‌ಗಳನ್ನು ಹಂಚಿಕೊಂಡರು. ಇದು ಟೂರ್ನಮೆಂಟ್‌ನ ಸೂಪರ್ ಲೀಗ್‌ನಲ್ಲಿ ಕರ್ನಾಟಕ ಕಂಡ ಮೊದಲ ಸೋಲಾಗಿದೆ. ಕರ್ನಾಟಕ 4ನೇ ಪಂದ್ಯದಲ್ಲಿ ಸೋಲುವ ಮೊದಲು ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಸೂಪರ್ ಲೀಗ್ ‘ಬಿ’ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X