Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ವಿರೋಧಿ ಸುತ್ತೋಲೆ: ಶಿಕ್ಷಣ...

ಸಂವಿಧಾನ ವಿರೋಧಿ ಸುತ್ತೋಲೆ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ26 Nov 2019 7:47 PM IST
share

ಬೆಂಗಳೂರು, ನ.26: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂದಿದ್ದ ಸಿಎಂಸಿಎ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಸಂವಿಧಾನ ವಿರೋಧಿ ನಿಲುವುಳ್ಳ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ನಗರದಲ್ಲಿಂದು ಬೃಹತ್ ಪ್ರತಿಭಟನಾ ಐಕ್ಯತಾ ಸಮಾವೇಶ ನಡೆಸಲಾಯಿತು.

ಮಂಗಳವಾರ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ ಉದ್ಯಾನದವರೆಗೂ ಸಂವಿಧಾನ ಸಂರಕ್ಷಣ ಐಕ್ಯತಾ ಸಮಿತಿ ನೇತೃತ್ವದಲ್ಲಿ ಬೃಹತ್ ರ‍್ಯಾಲಿ ನಡೆಸಿ, ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ದಲಿತ ಮುಖಂಡರು, ಧಾರ್ಮಿಕ ಮುಖಂಡರು, ಸಂವಿಧಾನಶಿಲ್ಪಿ ಅಂಬೇಡ್ಕರ್‌ಗೆ ಅವಮಾನ ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಅಂಬೇಡ್ಕರ್ ಸಂವಿಧಾನವನ್ನೇ ರಚಿಸದೆ ಇದ್ದಿದ್ದರೆ ಶೂದ್ರರು, ಹಿಂದುಳಿದ ವರ್ಗದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರತಿಪಾದಿಸಿದರು.

ಮಕ್ಕಳ ಮೂಲಕ ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲ ಎಂಬ ಹಸಿ ಸುಳ್ಳನ್ನು ಲಕ್ಷಾಂತರ ಜನರ ನಡುವೆ ಹರಿಬಿಡಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಇದು ಅತ್ಯಂತ ಕ್ರೂರ ಮನಸ್ಥಿತಿಯಾಗಿದೆ. ಸಂವಿಧಾನ ದಿನ ಆಚರಿಸಿ ಎಂದು ಸುತ್ತೋಲೆ ಹೊರಡಿಸಿ, ಅದರ ಜತೆಗಿನ ಮಾರ್ಗದರ್ಶಿಯಲ್ಲಿ ಈ ಕೃತ್ಯ ಎಸಗಲಾಗಿದೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಖಂಡಿಸುತ್ತೇವೆ ಹಾಗೂ ಇದಕ್ಕೆ ತಕ್ಕ ಶಿಕ್ಷೆಯಾಗಬೇಕು ಎಂದು ಎಲ್ಲರೂ ಸರಕಾರವನ್ನು ಆಗ್ರಹಿಸಿದರು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಭಾರತದ ಅಖಂಡತೆಯನ್ನು ಗಟ್ಟಿಯಾಗಿ ಹಿಡಿದಿರುವ ಏಕೈಕ ಧರ್ಮಗ್ರಂಥ ಸಂವಿಧಾನ, ನಾವೆಲ್ಲರೂ ಅದರ ಅಡಿಯಾಳುಗಳು. ಸಂವಿಧಾನದ ಉಳಿವು ಎಂದರೆ ಭಾರತದ ಉಳಿವು ಆಗಿದೆ. ಆದರೆ, ಇಂದು ಕೆಲವರು ಅದನ್ನೇ ನಾಶಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ಇತ್ತೀಚಿಗೆ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲ ಶಾಲೆಗಳಿಗೆ ಸಂವಿಧಾನ ದಿನ ಆಚರಿಸುವ ಸಂಬಂಧ ಸುತ್ತೋಲೆ ಹೊರಡಿಸಿದೆ. ಅದರೊಂದಿಗೆ ಮಾರ್ಗಸೂಚಿ ನೀಡಿದ್ದು, ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಬರೆದಿಲ್ಲ ಎಂಬ ಸುಳ್ಳೊಂದನ್ನು ಮಕ್ಕಳ ತಲೆಗೆ ತುಂಬುವ ಷಡ್ಯಂತರ ಮಾಡಲಾಗಿದೆ. ಇದು ಅಂಬೇಡ್ಕರ್‌ಗೆ ಹಾಗೂ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ ಎಂದು ತಿಳಿಸಿದರು.

ದಲಿತ ಮುಖಂಡ ವಿ.ಗೋಪಾಲ್ ಮಾತನಾಡಿ, ಅಂಬೇಡ್ಕರ್ ಸಂವಿಧಾನ ರಚಿಸಿದ ನಂತರ, ದೇಶದಲ್ಲಿ ಬ್ರಾಹ್ಮಣರು, ರಾಜರು ಸೇರಿದಂತೆ ಪುರುಷರಿಗಷ್ಟೇ ಇದ್ದ ಮತದಾನದ ಹಕ್ಕನ್ನು ಎಲ್ಲರಿಗೂ ಸಿಗುವಂತಾಯಿತು. ಅಲ್ಲದೆ, ಅಂದಿನ ಜನಪ್ರತಿನಿಧಿಗಳಲ್ಲಿ ದಲಿತರಿಗೆ ಮೀಸಲಾತಿ ಸಿಗುವಂತಾಯಿತು ಎಂದರು.

ಸಮಾವೇಶದಲ್ಲಿ ಬೌದ್ಧ ಗುರು ಭಂತೇಜಿ, ಹಿಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸೂಫಿ ಸಂತ ನೂರುಲ್ಲಾ ಶಾ ಖಾದ್ರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್, ಡಿಎಚ್‌ಎಸ್‌ನ ಗೋಪಾಲಕೃಷ್ಣ ಅರಳಹಳ್ಳಿ ಸೇರಿದಂತೆ ಹಲವು ಧಾರ್ಮಿಕ ಮುಖಂಡರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಸಮಾವೇಶಕ್ಕೆ ಸಂವಿಧಾನ ಪರವಾದ ಎಲ್ಲ ಧರ್ಮಗುರುಗಳು, ಧಾರ್ಮಿಕ ಅಲ್ಪಸಂಖ್ಯಾತ ಸಂಘಟನೆಗಳು, ಹಿಂದುಳಿದ ವರ್ಗದ ಸಂಘಟನೆಗಳು, ಮಹಿಳಾ, ಒಬಿಸಿ, ಎಸ್ಸಿ, ಎಸ್ಟಿ ನೌಕರರ ಸಂಘಟನೆಗಳು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ಗುತ್ತಿಗೆದಾರರ ಸಂಘಟನೆಗಳು, ಕಾಲೇಜು-ಹಾಸ್ಟೆಲ್ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದ್ದರು.

ಬೇಡಿಕೆಗಳು...

- ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡಬೇಕು.

- ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕು.

- ಪ್ರತಿ ಶಾಲೆಯಲ್ಲಿ ತಿಂಗಳಿಗೊಮ್ಮೆ ಸಂವಿಧಾನದ ಕುರಿತು ಅರಿವು ಮೂಡಿಸಬೇಕು.

- ವೈಜ್ಞಾನಿಕ ಸಂವಿಧಾನ ಅರಿವಿನ ಕೈಪಿಡಿಯನ್ನು ಪರಿಗಣಿಸಬೇಕು.

- ಶಾಲಾ-ಕಾಲೇಜುಗಳಲ್ಲಿ ನಾಡಗೀತೆ ಅಥವಾ ರಾಷ್ಟ್ರಗೀತೆ ಬಳಿಕ ಸಂವಿಧಾನದ ಪ್ರಸ್ತಾವನೆಯನ್ನು ಓದಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X