Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿವಸೇನೆ-ಎನ್‌ಸಿಪಿ- ಕಾಂಗ್ರೆಸ್...

ಶಿವಸೇನೆ-ಎನ್‌ಸಿಪಿ- ಕಾಂಗ್ರೆಸ್ ಮೈತ್ರಿಕೂಟದ ನಾಯಕರಾಗಿ ಉದ್ಧವ್ ಠಾಕ್ರೆ ಆಯ್ಕೆಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ26 Nov 2019 7:55 PM IST
share
ಶಿವಸೇನೆ-ಎನ್‌ಸಿಪಿ- ಕಾಂಗ್ರೆಸ್ ಮೈತ್ರಿಕೂಟದ ನಾಯಕರಾಗಿ ಉದ್ಧವ್ ಠಾಕ್ರೆ ಆಯ್ಕೆಗೆ ನಿರ್ಧಾರ

ಮುಂಬೈ, ನ.26: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ ಬದಲಾಗಿರುವ ರಾಜಕೀಯ ಸನ್ನಿವೇಶದಲ್ಲಿ ಸರಕಾರ ರಚನೆಗೆ ಮುಂದಾಗಿರುವ ಶಿವಸೇನೆ-ಎನ್‌ಸಿಪಿ ಕಾಂಗ್ರೆಸ್ ಮೈತ್ರಿಕೂಟದ ನಾಯಕರಾಗಿ ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆ ಆಯ್ಕೆಯಾಗಲಿದ್ದಾರೆ ಎಂದು ಶಿವಸೇನೆಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

   ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವಿನ ಬಹುತೇಕ ಸಮಸ್ಯೆಗಳು ಬಗೆಹರಿದಿವೆ. ಆದ್ದರಿಂದ ಸರಕಾರ ರಚನೆಗೆ ಅವಕಾಶ ಕೋರಲು ಇನ್ನಷ್ಟು ಸಮಯದ ಅಗತ್ಯವಿಲ್ಲ. ಎರಡನೆಯ ಅತೀ ದೊಡ್ಡ ಪಕ್ಷವಾಗಿರುವ ಶಿವಸೇನೆಯನ್ನು ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನಿಸಬೇಕು . ಶಿವಸೇನೆ-ಎನ್‌ಸಿಪಿ- ಕಾಂಗ್ರೆಸ್‌ನ ಜಂಟಿ ಹೇಳಿಕೆಯನ್ನು ರಾಜ್ಯಪಾಲರು ಕೇಳಬಹುದು ಎಂದವರು ಹೇಳಿದ್ದಾರೆ. ಶಿವಸೇನೆಯ 56 ಶಾಸಕರು, ಎನ್‌ಸಿಪಿಯ 54 ಮತ್ತು ಕಾಂಗ್ರೆಸ್‌ನ 44 ಶಾಸಕರು ಸೇರಿ ಮೈತ್ರಿಕೂಟದ ಬಲ 154 ಆಗುತ್ತದೆ. 288 ಸದಸ್ಯಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಸಂಖ್ಯಾಬಲದ ಅಗತ್ಯವಿದೆ.

ದೇವೇಂದ್ರ ಫಡ್ನವೀಸ್ ರಾಜೀನಾಮೆ ಘೋಷಿಸಿರುವ ಕಾರಣ ಸುಪ್ರೀಂಕೋರ್ಟ್ ಆದೇಶದಂತೆ ಬುಧವಾರ ಸದನದಲ್ಲಿ ವಿಶ್ವಾಸಮತ ಯಾಚನೆಯ ಪ್ರಶ್ನೆ ಬರುವುದಿಲ್ಲ ಎಂದು ವಿಧಾನಸಭೆಯ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಅದರ ಬದಲು ಎರಡನೇ ಅತೀ ದೊಡ್ಡ ಪಕ್ಷವಾಗಿರುವ ಶಿವಸೇನೆಯನ್ನು ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನಿಸಬಹುದು ಎಂದವರು ಹೇಳಿದ್ದಾರೆ.

ಶನಿವಾರ ಬಿಜೆಪಿಯ ಜತೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್‌ಸಿಪಿಯ ಮುಖಂಡ ಅಜಿತ್ ಪವಾರ್ ಮಂಗಳವಾರ ‘ವೈಯಕ್ತಿಕ ಕಾರಣ’ ನೀಡಿ ಹುದ್ದೆಗೆ ರಾಜೀನಾಮೆ ನೀಡಿದರೆ, ಬಿಜೆಪಿಗೆ ಬಹುಮತವಿಲ್ಲದ ಕಾರಣ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ದೇವೇಂದ್ರ ಫಡ್ನವೀಸ್ ಘೋಷಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X