Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಲಪಾಡಿ ಟೋಲ್ ಗೇಟ್ ಬಳಿ ಪ್ರತಿಭಟನಾ ಸಭೆ

ತಲಪಾಡಿ ಟೋಲ್ ಗೇಟ್ ಬಳಿ ಪ್ರತಿಭಟನಾ ಸಭೆ

ವಾರ್ತಾಭಾರತಿವಾರ್ತಾಭಾರತಿ26 Nov 2019 7:58 PM IST
share
ತಲಪಾಡಿ ಟೋಲ್ ಗೇಟ್ ಬಳಿ ಪ್ರತಿಭಟನಾ ಸಭೆ

ಮಂಗಳೂರು : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಿಗುವ ಸುಂಕ ವಸೂಲಾತಿಗೆ ಡಿಸೆಂಬರ್ ಒಂದರಿಂದ ಫಾಸ್ಟ್ ಟ್ಯಾಗ್ ಪದ್ದತಿ ಅಳವಡಿಸುವುದನ್ನು ವಿರೋಧಿಸಿ ಮಂಗಳವಾರ ತಾಲೂಕು ಪಂಚಾಯಿತಿ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ ನೇತೃತ್ವದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಲಪಾಡಿ ಟೋಲ್ ಗೇಟ್ ಬಳಿ ಪ್ರತಿಭಟನಾ ಸಭೆ ನಡೆಯಿತು.

ಸಭೆಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ, ಫಾಸ್ಟ್ ಟ್ಯಾಗ್ ವ್ಯವಸ್ಥೆ ಮಾಡುವ ಮೊದಲು ರಾಷ್ಟ್ರೀಯ ಹೆದ್ದಾರಿ ಸರಿಪಡಿಸಬೇಕಿದ್ದು ಈ ಬಗ್ಗೆ ಸಂಸದರು ಗಮನ ಹರಿಸಬೇಕಿತ್ತು.

ಎಂದಾದರೊಮ್ಮೆ ಕಾರಿನಲ್ಲಿ ಬರುವರು ಫಾಸ್ಟ್ ಟ್ಯಾಗ್ ಅಳವಡಿಸದಿದ್ದರೆ ದುಪ್ಪಟ್ಟು ಹಣ ವಸೂಲು ಮಾಡುತ್ತಾರೆ. ಈ ಕಾರಣಕ್ಕೆ ಇಲ್ಲಿಗೆ ನೂತನ ವ್ಯವಸ್ಥೆ ಅನಿವಾರ್ಯವಲ್ಲ. ಸ್ಥಳೀಯರಿಗೆ ವಿಶೇಷ ರಿಯಾಯಿತಿ ನೀಡಬೇಕು. ಇದಕ್ಕೂ ಮೀರಿ ವ್ಯವಸ್ಥೆ ಜಾರಿಗೆ ತಂದದ್ದೇ ಆದಲ್ಲಿ ರಾಜಕೀಯರಹಿತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ತಾಲೂಕು ಪಂ. ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಮಾತನಾಡಿ, ಪಂಪ್ ಮೇಲ್ಸೇತುವೆ ಹಲವಾರು ವರ್ಷಗಳಿಂದ ಪೂರ್ತಿ ಗೊಳಿಸುವಲ್ಲಿ ನವಯುಗ ಸಂಸ್ಥೆ ವಿಫಲವಾಗಿದೆ. ಹಿಂದಿನ ಉಸ್ತುವಾರಿ ಸಚಿವರು ಇದ್ದಾಗ ಸ್ಥಳೀಯರಿಗೆ ಸುಂಕ ರಿಯಾಯಿತಿ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿತ್ತು, ಆದರೆ ಈಗ ಏಕಾಏಕಿ ಫಾಸ್ಟ್ ಟ್ಯಾಗ್ ಜಾರಿಗೆ ತರಲಾಗುತ್ತಿದೆ. ಇದರಿಂದಾಗಿ ದಿನಕ್ಕೆ ಐದು ಬಾರಿ ನಮಾಝ್ ಗೆ ಹೋಗುವವರು, ದೇವಸ್ಥಾನಕ್ಕೆ ಪೂಜೆ ಮಾಡಲು ಹೋಗುವ ಅರ್ಚಕರು ದಿನಕ್ಕೆ ನಾಲ್ಕೈದು ಬಾರಿ ತೆರಿಗೆ ಕಟ್ಟಬೇಕಾಗುತ್ತದೆ. ಸ್ಥಳೀಯರಿಗೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಬೇಕು, ಈ ಬಗ್ಗೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸ್ಥಳೀಯ ಶಾಸಕರು, ಸಂಸದರು ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಎಚ್ಚರಿಸಿದರು. ‌

ಗಡಿನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಸಿದ್ದೀಕ್ ತಲಪಾಡಿ ಮಾತನಾಡಿ, ಫಾಸ್ಟ್ ಟ್ಯಾಗ್ ಹೆಸರಲ್ಲಿ ಬಸ್ಸುಗಳು ಟಿಕೆಟ್ ದರ ಹೆಚ್ಚಳ ಮಾಡಿದರೆ ನಾವು ಬಿಡುವುದಿಲ್ಲ, ಈ ವ್ಯವಸ್ಥೆ ಜಾರಿಗೆ ಬಂದರೆ ಸ್ಥಳೀಯರು ಕೆಲಸ‌ ಕಳೆದುಕೊಳ್ಳಲಿದ್ದಾರೆ. ಡಿಸೆಂಬರ್ ಒಂದರಿಂದ ಫಾಸ್ಟ್ ಟ್ಯಾಗ್ ಮಾತ್ರವಲ್ಲ, ಟೋಲ್ ಗೇಟೇ ಇರದು ಎಂದು ಎಚ್ಚರಿಸಿದರು.

ತಾಲೂಕು ಪಂ. ಸದಸ್ಯರಾದ ಪದ್ಮಾವತಿ, ಸುರೇಖ ಚಂದ್ರಹಾಸ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಉಮ್ಮರ್ ಪಜೀರ್, ಬ್ಲಾಕ್ ಕಾಂಗ್ರೆಸ್ ಕೋಟೆಕಾರ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಅಹ್ಮದ್ ಜಮಾಲ್ ಅಜ್ಜಿನಡ್ಕ, ಮುಖಂಡರಾದ ರಿಯಾಝ್ ಮಲಾರ್, ಸುನಿತಾ ಲೋಬೋ, ಅಬ್ದುಲ್ ಖಾದರ್, ಚಾಂದಿನಿ ಹರೀಶ್, ಹೇಮ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X