Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಜಾಪ್ರಭುತ್ವ ಜಾತೀಯತೆ, ಕೋಮುವಾದದಿಂದ...

ಪ್ರಜಾಪ್ರಭುತ್ವ ಜಾತೀಯತೆ, ಕೋಮುವಾದದಿಂದ ನರಳುತ್ತಿದೆ: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Nov 2019 11:16 PM IST
share
ಪ್ರಜಾಪ್ರಭುತ್ವ ಜಾತೀಯತೆ, ಕೋಮುವಾದದಿಂದ ನರಳುತ್ತಿದೆ: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು, ನ.27: ಇಂದಿನ ವ್ಯವಸ್ಥೆಯಲ್ಲಿ ಪ್ರಜಾಪ್ರಭುತ್ವವು ಜಾತೀಯತೆ ಹಾಗೂ ಕೋಮುವಾದಗಳಿಂದ ನರಳುತ್ತಿದೆ ಎಂದು ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬುದ್ಧ ಬಸವ ಗಾಂಧೀ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂವಿಧಾನದ ಆಶಯಗಳನ್ನೊತ್ತಿರುವ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಜಾತ್ಯತೀತತೆ, ಸೌಹಾರ್ದತೆಯನ್ನು ಪ್ರತಿಪಾದಿಸಿದೆ. ಆದರೆ, ಇಂದಿನ ವ್ಯವಸ್ಥೆಯು ಅದನ್ನು ಜಾತೀಯತೆಯಿಂದ ನರಳುವಂತೆ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಸಂವಿಧಾನ ರಚನೆ ಸಂದರ್ಭದಲ್ಲಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಬಹು ಭಾಷೆ, ಸಂಸ್ಕೃತಿ, ಧರ್ಮ, ಜಾತಿಗಳನ್ನು ಒಳಗೊಂಡ ಬಹುತ್ವವನ್ನು ಪ್ರತಿಪಾದಿಸುವ ಸಂವಿಧಾನ ನೀಡಿದ್ದಾರೆ. ಆದರೆ, ಇಂದಿನ ಅಧಿಕಾರ ವರ್ಗವು ಪ್ರಜಾಪ್ರಭುತ್ವದ ಆಶಯಗಳನ್ನೇ ನಾಶ ಮಾಡಲು ಹೊರಟಿದ್ದಾರೆ ಎಂದರು.

ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜಕಾರಣದ ದಿಢೀರ್ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಮಾರಕವಾದುವು. ಸಾಮಾಜಿಕ ನ್ಯಾಯ, ಸ್ವಾತಂತ್ರ, ಸಮಾನತೆ, ಸೌಹಾರ್ದತೆಯ ಸಂವಿಧಾನ ನಮ್ಮದಾಗಿದ್ದು, ಪ್ರಜಾಪ್ರಭುತ್ವ ಉಳಿಯಬೇಕಿದೆ ಎಂದು ತಿಳಿಸಿದರು.

ಯುವ ಕವಿಗಳು ಕೀಳರಿಮೆ ಬಿಡಬೇಕು. ಯಾವುದೇ ಕೆಲಸದಲ್ಲಿದ್ದರೂ, ಕವಿತೆ, ಕತೆ ಬರೆಯುವ ಆಸ್ತಕಿ ಇದ್ದರೆ ಬರೆಯಬೇಕು. ಓದುವುದರಿಂದ ಬರಹಗಾರ ಆಗಲಾರರು. ಹಾಗಂತ ಓದದೇ ಬರೆಯಲಾರ. ಕಾವ್ಯಕ್ಕೆ ಅನುಭವ ಮತ್ತು ಅಭಿವ್ಯಕ್ತಿ ಎರಡು ಮುಖ್ಯ. ಆಗ ಉತ್ತಮ ಕೃತಿ ಬರೆಯಲು ಸಾಧ್ಯ ಎಂದು ನುಡಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬೈರಮಂಗಲ ರಾಮೇಗೌಡ ಮಾತನಾಡಿ, ಕಾವ್ಯಾಸಕ್ತರು ಒಂದು ಬಾರಿ ಓದಿದ ನಂತರ ಪದೇ ಪದೇ ಓದಬೇಕು ಎನ್ನಿಸುವಂತಹ ಕವಿತೆಗಳನ್ನು ಕವಿಗಳು ರಚಿಸಬೇಕು. ಕವಿಗಳು ಸಂವೇದನಾಶೀಲರಾಗಿ ಕವಿತೆ ರಚಿಸಬೇಕು. ಇತ್ತೀಚಿಗೆ ಯುವ ಕವಿಗಳು ಸಾಹಿತ್ಯ ಕ್ಷೇತ್ರಕ್ಕೆ ಬರುತ್ತಿರುವುದು ಉತ್ತಮ ಬೆಳವಣಿಗೆ. ಕಾವ್ಯ ಕಮ್ಮಟಗಳು ಯುವಕರನ್ನು ಕಾವ್ಯ ರಚನೆ ಕಡೆ ಆಕರ್ಷಿಸುತ್ತಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಪಾಂಡುರಂಗಪ್ಪ ಚಕ್ರವರ್ತಿ ಅವರ ಕಾವ್ಯ ಚಿಗುರು, ಶಂಶುದ್ದೀನ್ ಎಂ.ಶ್ರವಣಗೆರೆ ಅವರ ಉಳಿದಿರುವುದೆ ನಮ್ಮ ದೇಹಗಳು ಮಾತ್ರ; ಬನ್ನಿ- ತಿನ್ನಿ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ನೃತ್ಯ ನಿರ್ದೇಶಕ ನಾರಾಯಣ ಸಿಂಗ್‌ಗೆ ಡಾ. ಬಿ.ವಿ.ಹಂಸಕುಮಾರಿ ಮೇ.ಚ. ಕೋಟಪ್ಪದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ಟ್ರಸ್ಟ್‌ನ ಡಾ.ಎಸ್.ರಾಮಲಿಂಗೇಶ್ವರ ಸೇರಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X