Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೂಂಡಾಗಿರಿ ನಡೆಸಿದವರ...

ಗೂಂಡಾಗಿರಿ ನಡೆಸಿದವರ ಹುಟ್ಟಡಗಿಸುತ್ತೇನೆ: ಸಿಎಂ ಯಡಿಯೂರಪ್ಪ ಗರಂ

ವಾರ್ತಾಭಾರತಿವಾರ್ತಾಭಾರತಿ27 Nov 2019 6:05 PM IST
share
ಗೂಂಡಾಗಿರಿ ನಡೆಸಿದವರ ಹುಟ್ಟಡಗಿಸುತ್ತೇನೆ: ಸಿಎಂ ಯಡಿಯೂರಪ್ಪ ಗರಂ

ಬೆಂಗಳೂರು, ನ. 27: ಇಲ್ಲಿನ ಹೊಸಕೋಟೆ ತಾಲೂಕಿನ ಖಾಜಿ ಹೊಸಹಳ್ಳಿಯಲ್ಲಿ ನಿನ್ನೆ ರಾತ್ರಿ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಪಕ್ಷೇತರ ಅಭ್ಯರ್ಥಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಗೂಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಬುಧವಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಗೂಂಡಾಗಿರಿ ನಡೆಸಿದವರ ಹುಟ್ಟು ಅಡಗಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿಸಿದರು.

17 ಮಂದಿ ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ನಾನು ಸಿಎಂ ಆಗುವಂತೆ ಆಯಿತು. ಪ್ರಚಾರದಲ್ಲಿ ವಿಪಕ್ಷಗಳು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಬದಲಿಗೆ ಈ ಸರಕಾರ ತೆಗೆಯುವ ಮಾತನಾಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಆಧಾರದ ಮೇಲೆ ನಮ್ಮ ಸರಕಾರ ಆಡಳಿತ ನಡೆಸುತ್ತಿದೆ ಎಂದು ಬಿಎಸ್‌ವೈ ಹೇಳಿದರು.

ಹೊಸಕೋಟೆ ಕ್ಷೇತ್ರ ಮಾದರಿ ಕ್ಷೇತ್ರ ಆಗಬೇಕು. ಎಂಟಿಬಿ ನಾಗರಾಜ್ ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದ ಯಡಿಯೂರಪ್ಪ, ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಅನುದಾನದ ಅಗತ್ಯವಿದ್ದರೂ ನೀಡಲು ನಾನು ಸಿದ್ಧ ಎಂದು ಭರವಸೆ ನೀಡಿದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಪ್ರವಾಹ ಸಂತ್ರಸ್ತರಿಗೆ ಸಹಾಯ ಆಗಬೇಕೆಂದರೆ ಸರಕಾರ ಇರಬೇಕೆಂದು ಹೇಳುತ್ತಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಇದೀಗ ತಮ್ಮ ಹೇಳಿಕೆ ಬದಲಿಸಿದ್ದಾರೆ. ಸಿದ್ದರಾಮಯ್ಯನವರ ಆಟ ಮುಗಿದಿದೆ. ಇನ್ನು ಜೆಡಿಎಸ್ ಶಾಸಕರು ಈಗಾಗಲೇ ಕಿಟ್ ಸಿದ್ದಪಡಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಇರಬಾರದು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಸ್ ನಡೆಸಿವೆ. ಆದರೆ, ಡಿಸೆಂಬರ್ 9ರ ಉಪಚುನಾವಣೆ ಫಲಿತಾಂಶದ ಬಳಿಕ ಇವರ ಎಲ್ಲ ಲೆಕ್ಕಾಚಾರ ತಲೆಕೆಳಗಾಗಲಿದೆ ಎಂದ ಅವರು, ಕಾಂಗ್ರೆಸ್ ಪಕ್ಷ ಇಲ್ಲಿ ಕುಕ್ಕರ್ ಹಂಚುತ್ತಿದೆ. ಅದು ಪಕ್ಷೇತರ ಅಭ್ಯರ್ಥಿ ಚಿಹ್ನೆ. ಡಿಸೆಂಬರ್ 5ಕ್ಕೆ ಕುಕ್ಕರ್ ಸಿಡಿಯಲಿದೆ ಎಂದು ಲೇವಡಿ ಮಾಡಿದರು.

ಹೆಬ್ಬಾಳದಲ್ಲಿ ಪತಿ ಶಾಸಕ, ಹೊಸಕೋಟೆ ಕ್ಷೇತ್ರದಲ್ಲಿ ಅವರ ಪತ್ನಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಡಿ.9ರ ಫಲಿತಾಂಶದ ಬಳಿಕ ಎಲ್ಲ ಗಂಟುಮೂಟೆ ಕಟ್ಟಿಕೊಂಡು ಹೋಗಲಿದ್ದಾರೆಂದ ಅಶೋಕ್, ಬಚ್ಚೇಗೌಡ ಸೋತಾಗ ಬಿಜೆಪಿಗೆ ಕರೆತಂದು ಮಂತ್ರಿ ಮಾಡಲಾಗಿತ್ತು. ಆದರೆ ಈಗ ಅವರು ಕ್ಷೇತ್ರದಲ್ಲಿ ಕಾಣದೆ ದ್ರೋಹ ಮಾಡುತ್ತಿದ್ದಾರೆ. ಅಪ್ಪ-ಮಕ್ಕಳ ನಾಟಕ ಅಂತ್ಯವಾಗಲಿದೆ ಎಂದರು.

ಅನಿಶ್ಚಿತ ಆಡಳಿತ ಅಂತ್ಯ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಹಿನ್ನೆಲೆಯಲ್ಲಿ ಹುಟ್ಟಿಕೊಂಡ ದಿಕ್ಕು-ದೆಸೆ, ಗೊತ್ತು-ಗುರಿ ಇಲ್ಲದ ಸರಕಾರ 14 ತಿಂಗಳ ಅನಿಶ್ಚಿತ ಆಡಳಿತ ಅಂತ್ಯವಾಗಿದೆ. ಇದೀಗ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಎಸ್ಸೆಂ ಕೃಷ್ಣ ಹೇಳಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಗಲಾಟೆ, ಹೊಡೆದಾಟಕ್ಕೆ ಹೆಸರಾಗಿದ್ದ ಹೊಸಕೋಟೆ ಕ್ಷೇತ್ರದ ಇದೀಗ ಬದಲಾಗಿದೆ. ಎಂಟಿಬಿ ನಾಗರಾಜ್ ಶಾಸಕರಾದ ಬಳಿಕ ಕ್ಷೇತ್ರದಲ್ಲಿ ಶಾಂತಿ ನೆಲೆಸಿದೆ. ಬಿಜೆಪಿ ಸರಕಾರ ಜಾತಿ ಆಧಾರದಲ್ಲಿ ರಾಜಕಾರಣ ಮಾಡಲಿಲ್ಲ. ಎಲ್ಲ ಸಮುದಾಯದವರಿಗೆ ಹಣ ನೀಡಿದವರು ಯಡಿಯೂರಪ್ಪ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X