Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮದ ವಿಚಾರದಲ್ಲಿ ಸುಪ್ರೀಂ...

ಧರ್ಮದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗಿಂತ ಸಂತರೇ ಸುಪ್ರೀಂ: ಪುರಿ ಶ್ರೀನಿಶ್ಚಲಾನಂದ ಸರಸ್ವತಿ ಸ್ವಾಮೀಜಿ

ಅಯೋಧ್ಯೆ ತೀರ್ಪಿನ ಬಗ್ಗೆ ಪೇಜಾವರಶ್ರೀ ಜೊತೆ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ27 Nov 2019 9:42 PM IST
share
ಧರ್ಮದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗಿಂತ ಸಂತರೇ ಸುಪ್ರೀಂ: ಪುರಿ ಶ್ರೀನಿಶ್ಚಲಾನಂದ ಸರಸ್ವತಿ ಸ್ವಾಮೀಜಿ

ಉಡುಪಿ, ನ.27: ಸ್ವತಂತ್ರ ಭಾರತದಲ್ಲಿ ಮುಸ್ಲಿಮ್ ಸಮುದಾಯದ ಮೂವರನ್ನು ರಾಷ್ಟ್ರಪತಿ, ಒಬ್ಬರನ್ನು ಗೃಹ ಸಚಿವ, ಒಬ್ಬರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಹಲವು ಮಂದಿಯನ್ನು ಮುಖ್ಯಮಂತ್ರಿ, ರಾಜ್ಯ ಪಾಲರನ್ನಾಗಿ ಮಾಡಿದ್ದೇವೆ. ಹಿಂದುಗಳ ಉದಾರತೆಯನ್ನು ದೌರ್ಬಲ್ಯ ಎಂದು ತಿಳಿದುಕೊಳ್ಳಬಾರದು. ದೇಶದ ಯಾವ ಭಾಗದಲ್ಲೂ ಬಾಬರ್ ಹೆಸರಿನಲ್ಲಿ ಮಸೀದಿ ನಿರ್ಮಿಸಲು ಅವಕಾಶ ನೀಡಬಾರದು ಎಂದು ಪುರಿ ಗೋವರ್ಧನ ಪೀಠದ ಶ್ರೀನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಇಂದು ಉಡುಪಿಗೆ ಆಗಮಿಸಿದ ಪುರಿ ಸ್ವಾಮೀಜಿ, ಪೇಜಾವರ ಮಠದಲ್ಲಿ ಸಂಜೆ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ, ರಾಮಮಂದಿರದ ಕುರಿತು ಮಾತುಕತೆ ನಡೆಸಿದರು.

ಅಯೋಧ್ಯೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪು ಒಪ್ಪಲು ಸಾಧ್ಯವಿಲ್ಲ. ಬಾಬರಿ ಮಸೀದಿ ನಿರ್ಮಿಸಲು ಭೂಮಿ ನೀಡಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್‌ಗಿಂತ ಸಂಸತ್ ಮೇಲೆಯಾದರೆ, ಧರ್ಮದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗಿಂತ ಸಂತರೇ ಸುಪ್ರೀಂ ಆಗಿದ್ದೇವೆ ಎಂದರು.

ಲಾಭಕ್ಕಾಗಿ ರಾಜಕಾರಣಿಗಳು ಏನು ಬೇಕಾದರೂ ಮಾಡುತ್ತಾರೆ. ಅದರ ಪರಿಣಾಮವೇ ಈ ತೀರ್ಪು ಬಂದಿದೆ. ಕೇಂದ್ರದಲ್ಲಿ ಬಹುಮತ ಪಡೆದಿರುವ ಬಿಜೆಪಿ ಸುಪ್ರೀಂ ಕೋರ್ಟ್ ತೀರ್ಪುನ್ನು ತಿರಸ್ಕರಿಸಿ ಸಂಸತ್ತಿನಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕೆ ಯಾವುದೇ ಭೂಮಿ ನೀಡುವುದಿಲ್ಲ ಎಂಬುದಾಗಿ ಹೊಸ ನಿರ್ಣಯ ಮಾಡಬೇಕು. ಈ ವಿಚಾರದಲ್ಲಿ ರಾಜಕಾರಣಿಗಳನ್ನು ಎಚ್ಚರಿಸುವ ಹಾಗೂ ಮಾರ್ಗದರ್ಶನ ನೀಡುವ ಕಾರ್ಯವನ್ನು ಸಂತರು ಮಾಡಬೇಕು ಎಂದು ಅವರು ತಿಳಿಸಿದರು.

ನರಸಿಂಹ ರಾವ್ ಪ್ರಧಾನಿಯಾಗಿದ್ದ ಕಾಲದಲ್ಲಿ ನಡೆದ ರಾಜಿ ಸೂತ್ರಕ್ಕೆ ನನ್ನ ಸಮ್ಮತಿ ಇರಲಿಲ್ಲ. ಆ ವಿಚಾರದಲ್ಲಿ ಸಂತರು ಮಧ್ಯಪ್ರವೇಶಿಸಬಾರದಿತ್ತು. ಇಲ್ಲದಿದ್ದರೆ ರಾಮಮಂದಿರ ಕುರಿತ ಇಂದಿನ ನಿರ್ಣಯಗಳು ಅಂದೇ ಆಗುತ್ತಿತ್ತು ಎಂದ ಅವರು ಆಡಳಿತ ನಡೆಸುವವರಲ್ಲಿ ರಾಜಕೀಯ ನೀತಿಯ ಕೊರತೆ ಎದ್ದು ಕಾಣುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪೇಜಾವರ ಸ್ವಾಮೀಜಿ ಮಾತನಾಡಿ, ಈ ವಿಚಾರದಲ್ಲಿ ನಮಗೆ ಸೀಮಿತ ಅಧಿಕಾರ ಮಾತ್ರ ಇದೆ. ಯಾವುದೇ ನಿರ್ಧಾರ ಕೈಗೊಳ್ಳಲು ನಮಗೆ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನಂತೆ ನಡೆದುಕೊಳ್ಳಬೇಕಾಗಿದೆ. ಸಂತರೆಲ್ಲ ಒಂದಾಗಬೇಕು. ರಾಮಮಂದಿರ ನಿರ್ಮಾಣ ಸಂಕಲ್ಪವನ್ನು ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಿ ಗೋವರ್ಧನ ಪೀಠದ ಕಿರಿಯ ಯತಿ ನಿರ್ವಿಕಲ್ಪಾನಂದ ಸ್ವಾಮೀಜಿ, ಉಡುಪಿ ಶಾಸಕ ಕೆ.ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಪುರಿ ಸ್ವಾಮೀಜಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರನ್ನು ಸ್ವಾಗತಿಸಿದರು. ನಂತರ ಸ್ವಾಮೀಜಿಯನ್ನು ಶಾಲು ಹೊದಿಸಿ ಗೌರವಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X