ಪ್ರಧಾನ ಮಂತ್ರಿ ಆವಾಝ್ ಯೋಜನೆ : ಅರ್ಜಿ ಆಹ್ವಾನ
ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಇದ್ದು, ಮನೆ ಇಲ್ಲದವರಿಗೆ ಮನೆ ನಿರ್ಮಿಸಿಕೊಳ್ಳಲು ಪ್ರಧಾನ ಮಂತ್ರಿ ಆವಾಝ್ ಯೋಜನೆಯಲ್ಲಿ 1,50,000 ರೂ. ಸಹಾಯಧನ ಮಂಜೂರಾಗಲಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸದಾಗಿ ಮನೆ ನಿರ್ಮಿಸಿಕೊಳ್ಳುವುದಾದಲ್ಲಿ ಅಂತಹ ಕುಟುಂಬವು ಸ್ವಂತ ಹೆಸರಿನಲ್ಲಿ ನಿವೇಶನ ಹೊಂದಿರಬೇಕು ಅಥವಾ ಕಚ್ಚಾ ಮನೆ ಹೊಂದಿರಬೇಕು. ಫಲಾನುಭವಿಯು ಫೋಟೋ, ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಖಾತೆಯ ವಿವರಗಳು ಹಾಗೂ ತನ್ನ ಹೆಸರಿನಲ್ಲಿ ಈಗಾಗಲೇ ಪಕ್ಕಾ ಮನೆ ಇಲ್ಲವೆಂದು ಅಫಿಡೇವಿಟ್ಗಳನ್ನು ಉಳ್ಳಾಲ ನಗರಸಭೆಗೆ ಸಲ್ಲಿಸಬೇಕು. ಉಳ್ಳಾಲ ನಗರಸಭಾ ವ್ಯಾಪ್ತಿಯ ವಸತಿ ರಹಿತ ಕುಟುಂಬಗಳು ಕೂಡ ಈ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಬಹುದಾಗಿದೆ ಎಂದು ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Next Story