Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರಪತಿ ಭವನಕ್ಕಿಂತ ವಿಸ್ತಾರವಾಗಿ...

ರಾಷ್ಟ್ರಪತಿ ಭವನಕ್ಕಿಂತ ವಿಸ್ತಾರವಾಗಿ ರಾಮಮಂದಿರ ನಿರ್ಮಾಣವಾಗಲಿ: ಪುರಿ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ28 Nov 2019 8:40 PM IST
share
ರಾಷ್ಟ್ರಪತಿ ಭವನಕ್ಕಿಂತ ವಿಸ್ತಾರವಾಗಿ ರಾಮಮಂದಿರ ನಿರ್ಮಾಣವಾಗಲಿ: ಪುರಿ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ

ಉಡುಪಿ, ನ.28: ಜಗತ್ತಿನ ಮೊದಲ ರಾಜಧಾನಿಯಾಗಿದ್ದ ಅಯೋಧ್ಯೆಯಲ್ಲಿ ಭಾರತದ ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರಪತಿ ಭವನಕ್ಕಿಂತ ವಿಸ್ತಾರವಾಗಿ ರಾಮಮಂದಿರವನ್ನು ನಿರ್ಮಿಸಬೇಕು ಎಂದು ಪುರಿ ಗೋವರ್ಧನ ಪೀಠದ ಶ್ರೀನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ಮಂಚಿಯಲ್ಲಿ ವಾಸ್ತವ್ಯ ಹೂಡಿರುವ ಮನೆಯಲ್ಲಿ ಇಂದು ಕರೆದ ಸುದ್ದಿಗೋಷ್ಟಿ ಯಲ್ಲಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಮನು ಚಕ್ರವರ್ತಿ ನಿರ್ಮಿಸಿದ ಅಯೋಧ್ಯೆ, ಇಡೀ ಜಗತ್ತಿನ ಮೊದಲ ರಾಜಧಾನಿಯಾಗಿತ್ತು. ಆದರೆ ಅಯೋಧ್ಯೆ ವಿವಾದದ ಸಂದರ್ಭದಲ್ಲಿ ನ್ಯಾಯವಾದಿ ಗಳು ಕೋರ್ಟ್‌ನಲ್ಲಿ ಈ ವಿಚಾರಕ್ಕೆ ಹೆಚ್ಚು ಒತ್ತು ನೀಡಿರಲಿಲ್ಲ. ಹಾಗಾಗಿ ಈ ವಿಚಾರ ಸುಪ್ರೀಂ ಕೋರ್ಟ್‌ನ ತೀರ್ಪಿನಲ್ಲಿ ನಿರ್ಲಕ್ಷಕ್ಕೆ ಒಳಗಾಗಿತ್ತು ಎಂದರು.

ಭಾರತದ ರಾಜಧಾನಿ ದೆಹಲಿಯಲ್ಲಿರುವ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಅವರ ಭವನ 300ಕ್ಕೂ ಅಧಿಕ ಎಕರೆ ವಿಸ್ತಿರ್ಣವಾದ ಭೂಮಿಯಲ್ಲಿ ರುವಾಗ ಇಡೀ ಜಗತ್ತಿನ ಪ್ರಭು ರಾಮನಿಗೆ ಮಂದಿರವು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಆಗಬೇಕು. ಆದುದರಿಂದ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣವನ್ನು ಒಪ್ಪಲು ಸಾಧ್ಯವಿಲ್ಲ. ಒಂದು ವೇಳೆ ಇಲ್ಲಿ ಬಾಬರಿ ಮಸೀದಿ ನಿರ್ಮಾಣವಾದರೆ ಮತ್ತೊಂದು ಪಾಕಿಸ್ತಾನ ಸೃಷ್ಠಿಯಾಗಬಹುದು. ಇದು ಹಿಂದು, ಮುಸ್ಲಿಮ್ ಮಾತ್ರವಲ್ಲ ಇಡೀ ದೇಶಕ್ಕೆ ಒಳ್ಳೆಯದಲ್ಲ ಎಂದು ಅವರು ತಿಳಿಸಿದರು.

ಅಯೋಧ್ಯೆ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ನಾನು ಒಪ್ಪುವುದಿಲ್ಲ. ಇಲ್ಲಿ ಮಸೀದಿ ನಿರ್ಮಿಸಲು ಅವಕಾಶ ಕೊಟ್ಟರೆ ನಮ್ಮ ದೇಶದಲ್ಲಿ ಇನ್ನೊಂದು ಮಕ್ಕಾ ನಿರ್ಮಾಣವಾಗುತ್ತದೆ. ಸುಪ್ರೀಂ ಕೋರ್ಟ್ ಈ ರೀತಿ ತೀರ್ಪು ನೀಡಲು ಪ್ರಧಾನಿ ನರೇಂದ್ರ ಮೋದಿ ಪ್ರಭಾವ ಇದೆಯೇ ಎಂಬ ಸಂಶಯ ಕಾಡುತ್ತದೆ ಎಂದು ಅವರು ಹೇಳಿದರು.

ಗಾಂಧೀಜಿಯ ಹೋರಾಟಕ್ಕೆ ಮಣಿದು ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ ನೀಡಿದರೂ, ಇದರಿಂದ ನಾವು ದೇಶ ಇಬ್ಘಾಗ ಹಾಗೂ ಸುಭಾಷ್ ಚಂದ್ರ ಬೋಸ್‌ರಂತಹ ನಾಯಕರನ್ನು ಕಳೆದುಕೊಳ್ಳಬೇಕಾಯಿತು. ಈಗಿನ ಸ್ವಾತಂತ್ರ ಭಾರತದಲ್ಲಿ ಅಯೋಧ್ಯೆ, ಕಾಶಿ, ಮಧುರ ಸೇರಿದಂತೆ ಪುಣ್ಯಭೂಮಿಗಳು ಹಿಂದು ಗಳಿಗೆ ಸೇರಿದ್ದಾಗಿದೆ. ಇದರಲ್ಲಿ ಯಾರಿಗೂ ಪಾಲು ಕೊಡಲು ಆಗುವುದಿಲ್ಲ. ಈ ಜಾಗ ನಮಗೆ ಸಿಗಲೇ ಬೇಕು. ಈ ವಿಚಾರದಲ್ಲಿ ನ್ಯಾಯ ತೀರ್ಮಾನ ನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಕೃಷಿಗೆ ಪೂರಕವಾಗಿರುವ ಗೋವನ್ನು ಕೇವಲ ವಾಣಿಜ್ಯ ಉದ್ದೇಶದಿಂದ ಮಾತ್ರ ನೋಡಲಾಗುತ್ತಿದೆ. ಗೋವಿನ ರಕ್ಷಣೆಯಿಂದ ಕೃಷಿ ಮತ್ತು ವಾಣಿಜ್ಯ ಎರಡೂ ಕ್ಷೇತ್ರಗಳಿಗೂ ಬಹಳಷ್ಟು ಪ್ರಯೋಜನ ಆಗಲಿದೆ. ಆದುದರಿಂದ ಈ ದೇಶದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಆದರೆ ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ನಿರಾಸಕ್ತಿ ತೋರಿಸುತ್ತಿವೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X