Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ತೆಂಗಿನ ಹಾಲಿನ ಆರೋಗ್ಯಲಾಭಗಳು ಗೊತ್ತೇ?

ತೆಂಗಿನ ಹಾಲಿನ ಆರೋಗ್ಯಲಾಭಗಳು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ28 Nov 2019 8:56 PM IST
share
ತೆಂಗಿನ ಹಾಲಿನ ಆರೋಗ್ಯಲಾಭಗಳು ಗೊತ್ತೇ?

ಚೆನ್ನಾಗಿ ಬೆಳೆದ ತೆಂಗಿನ ಕಾಯಿಯ ತುರಿಯನ್ನು ಹಿಂಡಿ ಹಾಲು ತೆಗೆಯಲಾಗುತ್ತದೆ. ಇದು ವಿವಿಧ ವಿಟಾಮಿನ್‌ಗಳು ಮತ್ತು ಖನಿಜಗಳನ್ನು ಹೇರಳವಾಗಿ ಹೊಂದಿದ್ದು,ಲ್ಯಾಕ್ಟೋಸ್ ಅಥವಾ ಡೇರಿ ಉತ್ಪನ್ನಗಳಿಗೆ ಅಸಹಿಷ್ಣುತೆಯನು ್ನ ಹೊಂದಿದವರಿಗೆ ಹೇಳಿ ಮಾಡಿಸಿದಂತಿದೆ. ತೆಂಗಿನ ಹಾಲಿನ ಆರೋಗ್ಯಲಾಭಗಳು ಇಲ್ಲಿವೆ...

► ತೂಕ ಇಳಿಸಲು ನೆರವಾಗುತ್ತದೆ

ತೆಂಗಿನ ಹಾಲು ಮಧ್ಯಮ ಸರಣಿಯ ಟ್ರೈಗ್ಲಿಸರೈಡ್‌ಗಳನ್ನು ಒಳಗೊಂಡಿರುವುದರಿಂದ ಶರೀರದ ತೂಕವನ್ನು ಇಳಿಸಲು ನೆರವಾಗುತ್ತದೆ. ಇತರ ಕೊಬ್ಬುಗಳಿಗೆ ಹೋಲಿಸಿದರೆ ಈ ಗ್ಲಿಸರೈಡ್‌ಗಳು ತೂಕವನ್ನು ಇಳಿಸಲು ಮತ್ತು ಸೊಂಟದ ಸುತ್ತಳತೆಯನ್ನು ಕಡಿಮೆ ಮಾಡಲು ಪೂರಕವಾಗಿವೆ.

► ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ತೆಂಗಿನ ಹಾಲಿನಲ್ಲಿರುವ ಲಾರಿಕ್ ಆಮ್ಲವು ಶರೀರದ ರೋಗ ನಿರೋಧಕ ವ್ಯವಸ್ಥೆಯನ್ನು ಬಲಗೊಳಿಸುತ್ತದೆ. ಸೂಕ್ಷ್ಮಜೀವಿ ನಿರೋಧಕ ಮತ್ತು ಉರಿಯೂತ ನಿರೋಧಕ ಗುಣಗಳಿಂದಾಗಿ ಅದು ಬ್ಯಾಕ್ಟೀರಿಯಾಗಳು ವೃದ್ಧಿಗೊಳ್ಳುವುದನ್ನು ತಡೆಯುತ್ತದೆ ಮತ್ತು ಶರೀರವನ್ನು ವಿವಿಧ ಬ್ಯಾಕ್ಟೀರಿಯಾ ಸೋಂಕುಗಳಿಂದ ರಕ್ಷಿಸುತ್ತದೆ.

► ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ

ಇದರಲ್ಲಿರುವ ಲಾರಿಕ್ ಆಮ್ಲವು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ತೆಂಗಿನ ಗಂಜಿಯ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡಿ ಒಳ್ಳೆಯ ಕೊಲಸ್ಟ್ರಾಲ್‌ನ್ನು ಹೆಚ್ಚಿಸುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ.

► ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ

ತೆಂಗಿನ ಹಾಲು ಪೊಟ್ಯಾಷಿಯಂ, ಸೋಡಿಯಂ, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಖನಿಜಗಳನ್ನು ಒಳಗೊಂಡಿರುವದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಲು ನೆರವಾಗುತ್ತದೆ. ರಕ್ತ ಪರಿಚಲನೆಯನ್ನು ಹೆಚ್ಚಿಸುವ ಅದು ರಕ್ತನಾಳಗಳ ಸಂಕುಚನವನ್ನು ತಡೆಯುತ್ತದೆ ಮತ್ತು ಅವುಗಳಲ್ಲಿ ತಡೆಗಳು ನಿರ್ಮಾಣಗೊಳ್ಳದಂತೆ ನೋಡಿಕೊಳ್ಳುತ್ತದೆ.

► ಮಧುಮೇಹವನ್ನು ನಿಯಂತ್ರಿಸುತ್ತದೆ

ತೆಂಗಿನ ಹಾಲಿನಲ್ಲಿಯ ಮಧ್ಯಮ ಸರಣಿಯ ಫ್ಯಾಟಿ ಆ್ಯಸಿಡ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ತಗ್ಗಿಸಲು ನೆರವಾಗುತ್ತವೆ. ನಿಯಮಿತವಾಗಿ ಈ ಹಾಲನ್ನು ಸೇವಿಸುತ್ತಿದ್ದರೆ ಮಧುಮೇಹಕ್ಕೆ ಗುರಿಯಗುವ ಅಪಾಯದಿಂದ ದೂರವಿರಬಹುದು.

► ಉರಿಯೂತವನ್ನು ತಡೆಯುತ್ತದೆ

ತೆಂಗಿನ ಹಾಲಿನಲ್ಲಿರುವ ಲಾರಿಕ್ ಆಮ್ಲದ ಉರಿಯೂತ ನಿರೋಧಕ ಗುಣವು ಸಂಧಿವಾತ,ಸ್ನಾಯು ನೋವು ಮತ್ತು ಇತರ ನೋವುಗಳೊಂದಿಗೆ ಗುರುತಿಸಿಕೊಂಡಿರುವ ಉರಿಯೂತವನ್ನು ಕಡಿಮೆಗೊಳಿಸುವಲ್ಲಿ ನೆರವಾಗುತ್ತದೆ.

► ಜೀರ್ಣಕ್ರಿಯೆಗೆ ನೆರವಾಗುತ್ತದೆ.

ತೆಂಗಿನ ಹಾಲಿನ ಸೇವನೆಯಿಂದ ಜೀರ್ಣಕ್ರಿಯೆಯು ಉತ್ತಮಗೊಳ್ಳುತ್ತದೆ. ಹೀಗಾಗಿ ಲ್ಯಾಕ್ಟೋಸ್ ಅಸಹಿಷ್ಣುತೆ ಹೊಂದಿರುವವರು ಈ   ಹಾಲನ್ನು ಸೇವಿಸಬಹುದು. ತೆಂಗಿನ ಹಾಲು ಕರುಳಿನಲ್ಲಿಯ ಒಳ್ಳೆಯ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಕರುಳಿನ ಆರೋಗ್ಯವನ್ನ ಹೆಚ್ಚಿಸುತ್ತದೆ

► ತೆಂಗಿನ ಹಾಲು ಸೇವನೆಯ ಅಡ್ಡಪರಿಣಾಮಗಳು

ತೆಂಗಿನ ಕಾಯಿಗೆ ಅಲರ್ಜಿ ಹೊಂದಿರುವವರು ತೆಂಗಿನ ಹಾಲನ್ನು ಸೇವಿಸಿದರೆ ಪ್ರತಿಕೂಲ ಅಡ್ಡ ಪರಿಣಾಮಗಳು ಉಂಟಾಗುತ್ತವೆ. ಈ ಹಾಲು ಅಧಿಕ ಕ್ಯಾಲೊರಿಗಳು ಮತ್ತು ಕೊಬ್ಬುಗಳನ್ನು ಹೊಂದಿರುವುದರಿಂದ ಅತಿಯಾಗಿ ಸೇವಿಸಿದರೆ ದೇಹತೂಕ ಹೆಚ್ಚಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X