Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೋಸ್ಕೋಸ್ ಪಿಯು ಕಾಲೇಜು ನೂತನ ಕ್ಯಾಂಪಸ್...

ಬೋಸ್ಕೋಸ್ ಪಿಯು ಕಾಲೇಜು ನೂತನ ಕ್ಯಾಂಪಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Nov 2019 10:39 PM IST
share
ಬೋಸ್ಕೋಸ್ ಪಿಯು ಕಾಲೇಜು ನೂತನ ಕ್ಯಾಂಪಸ್ ಉದ್ಘಾಟನೆ

ಮಂಗಳೂರು, ನ.28: ಬೋಸ್ಕೋಸ್ ಪದವಿ ಪೂರ್ವ ಕಾಲೇಜಿನ ನೂತನ ಕ್ಯಾಂಪಸ್ ನಗರದ ಹರಿಪದವು ಬ್ಲೂಬೆರ್ರಿ ಹಿಲ್ಸ್‌ನಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ನೂತನ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಮುಖ್ಯಅತಿಥಿ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ, ಕಠಿಣ ಪರಿಶ್ರಮ ಮತ್ತು ಬದ್ಧತೆಯಿಂದ ವೃತ್ತಿಪರ ಯಶಸ್ಸು ಲಭಿಸುತ್ತದೆ. ಸಂತೃಪ್ತಿ ನಿಷ್ಠೆ ಹಾಗೂ ದಯಾಪರ ನಡವಳಿಕೆಯಿಂದ ಯಶಸ್ಸು ಸುಲಭ ಸಾಧ್ಯವಾಗುತ್ತದೆ ಎಂದರು.

ಪಿಯುಸಿ ಪ್ರತಿಯೋರ್ವ ವಿದ್ಯಾರ್ಥಿಯ ಜೀವನದಲ್ಲಿ ಅತ್ಯಂತ ಮಹತ್ವವಾದ ಘಟ್ಟವಾಗಿದೆ. ಜತೆಗೆ ಅಷ್ಟೇ ಸವಾಲಿನದ್ದಾಗಿದೆ. ಈ ಅವಧಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುವುದು ಅಗತ್ಯ. ಈ ಕ್ಯಾಂಪಸ್‌ನ ಶಿಕ್ಷಣ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ ಎಂದು ಹೇಳಿದರು.

ಬೋಸ್ಕೋ ಅವರು ಉತ್ತಮ ವಾಗ್ಮಿ, ಉಪನ್ಯಾಸಕ, ಬರಹಗಾರರಾಗಿದ್ದು, ಹೆಸರಾಂತ ಶಿಕ್ಷಣಪ್ರೇಮಿಯಾಗಿದ್ದಾರೆ. ಉತ್ತಮ ಗುಣಮಟ್ಟದ ಜ್ಞಾನವನ್ನು ಪರಿಣಾಮಕಾರಿ ಹಂಚುವ ಹಾಗೂ ಕಲಿಕೆ ಜತೆ ವಿದ್ಯಾರ್ಥಿಗಳಲ್ಲಿ ಉತ್ತಮ ಭಾವನೆ ಬೆಳೆಸುವ ಶಕ್ತಿಯನ್ನು ಅವರು ಹೊಂದಿದ್ದಾರೆ ಎಂದು ಶ್ಲಾಘಿಸಿದರು.

ಮುಖ್ಯಅತಿಥಿ ಮಂಗಳೂರು ಪಿಯು ಮಂಡಳಿ ಉಪ ನಿರ್ದೇಶಕ ವಾಸುದೇವ ಕಾಮತ್ ಮಾತನಾಡಿ, ಬೋಸ್ಕೋಸ್ ಸಂಸ್ಥೆಯ ಹಿಂದಿನ ಶಕ್ತಿ ಬೋಸ್ಕೋ ಅವರು ಗಣಿತ ಪ್ರೊಫೆಸರರಾಗಿ ವಿದ್ಯಾರ್ಥಿ ಸ್ನೇಹಿಯಾಗಿದ್ದರು. ಅವರ ಪುಸ್ತಕಗಳು ಕೂಡ ಅಷ್ಟೇ ಜನಪ್ರಿಯವಾಗಿದ್ದವು. ಆದ್ದರಿಂದಲೇ ಅವರು ಹಾಗೂ ಅವರ ಸಂಸ್ಥೆಯು ಸಮಾಜಕ್ಕೆ ಒಂದು ದೊಡ್ಡ ಆಸ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಬೋಸ್ಕೋಸ್ ಎಜುಕೇಶನ್ ಟ್ರಸ್ಟ್ ಎಕ್ಸಿಕ್ಯೂಟಿವ್ ಟ್ರಸ್ಟಿ ಪ್ರೊ.ಎಸ್.ಎಸ್.ಬೋಸ್ಕೋ ಮಾತನಾಡಿ, ಮಂಗಳೂರು ಮಹಾನಗರ ವ್ಯಾಪ್ತಿಯಲ್ಲೇ ಸಂಸ್ಥೆಗೆ ಸುಸಜ್ಜಿತ, ವಿದ್ಯಾರ್ಥಿ ಸ್ನೇಹಿ ಕ್ಯಾಂಪಸ್ ನಿರ್ಮಿಸುವ ಉದ್ದೇಶ ಹರಿಪದವಿನಲ್ಲಿ ಸಾಕಾರಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ನೂತನ ಕ್ಯಾಂಪಸ್‌ನಲ್ಲಿ ಡಿಜಿಟಲ್ ಇ-ಲರ್ನಿಂಗ್ ಸೌಲಭ್ಯ ಒಳಗೊಂಡಿರುವ ಸುಸಜ್ಜಿತ ತರಗತಿ ಕೊಠಡಿ, ಪ್ರಯೋಗಶಾಲೆ, ಗ್ರಂಥಾಲಯ, ಆಪ್ತ ಸಮಾಲೋಚನೆ ವಿಭಾಗ, ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಹಾಸ್ಟೆಲ್, ಆಟದ ಮೈದಾನ, ಕಲಿಕೆಗೆ ಪೂರಕ ವಾತಾವರಣವನ್ನು ಕ್ಯಾಂಪಸ್ ಹೊಂದಿದೆ ಎನ್ನುವುದು ನಮ್ಮ ಸಂತೋಷ ಹೆಚ್ಚಿಸಿದ ಸಂಗತಿ ಎಂದರು.

ಸಂತ ಅಲೋಶಿಯಸ್‌ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಸುದೀರ್ಘ 35 ವರ್ಷಗಳ ಅನುಭವ, ಬಳಿಕ 2016 ರಲ್ಲಿ ಬೋಸ್ಕೋಸ್ ಪಿಯು ಕಾಲೇಜು  ಸ್ಥಾಪನೆ, ಪಿಯು ಫಲಿತಾಂಶ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಅವರು ಸ್ಮರಿಸಿಕೊಂಡರು.

ಬೋಸ್ಕೋಸ್ ಎಜುಕೇಶನ್ ಟ್ರಸ್ಟ್ ಎಕ್ಸಿಕ್ಯೂಟಿವ್ ಟ್ರಸ್ಟಿ ಪ್ರೊ.ಎಸ್.ಎಸ್.ಬೋಸ್ಕೋ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ವ್ಯವಸ್ಥೆಯ ಭಾಗವಾಗಿ ರೀನು ಎಸ್.ಜೆ.ಫೆರ್ನಾಂಡೊ ಮಾತನಾಡಿದರು.

ಟ್ರಸ್ಟ್‌ನ ಚೇರ್‌ಪರ್ಸನ್ ಇಜಿತಿನ್ ಬೋಸ್ಕೊ ಉಪಸ್ಥಿತರಿದ್ದರು. ಪ್ರಿನ್ಸಿಪಾಲ್ ಪ್ರದೀಪ್ ಕುಮಾರ್ ಸ್ವಾಗತಿಸಿದರು. ಸುಧೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X