Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗುವಾಹಟಿಯ ಕ್ರೀಡಾಂಗಣದ ಬಗ್ಗೆ ಫಿಫಾ...

ಗುವಾಹಟಿಯ ಕ್ರೀಡಾಂಗಣದ ಬಗ್ಗೆ ಫಿಫಾ ನಿಯೋಗ ಮೆಚ್ಚುಗೆ

ಅಂಡರ್-17 ವನಿತೆಯರ ವಿಶ್ವಕಪ್

ವಾರ್ತಾಭಾರತಿವಾರ್ತಾಭಾರತಿ28 Nov 2019 11:51 PM IST
share
ಗುವಾಹಟಿಯ ಕ್ರೀಡಾಂಗಣದ ಬಗ್ಗೆ ಫಿಫಾ ನಿಯೋಗ ಮೆಚ್ಚುಗೆ

ಗುವಾಹಟಿ, ನ.28: ಮುಂದಿನ ವರ್ಷ ಅಂಡರ್ -17 ವನಿತೆಯರ ವಿಶ್ವಕಪ್ ಟೂರ್ನಿಯನ್ನು ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿ ಗುವಾಹಟಿಯ ಇಂದಿರಾ ಗಾಂಧಿ ಅಥ್ಲೆಟಿಕ್ ಇಂಟರ್‌ನ್ಯಾಶನಲ್ ಸ್ಟೇಡಿಯಂ ಹಾಗೂ ಅಲ್ಲಿರುವ ತರಬೇತಿ ಸೌಲಭ್ಯಗಳ ಬಗ್ಗೆ ಸ್ಥಳೀಯ ಸಂಘಟನಾ ಸಮಿತಿ (ಎಲ್‌ಒಸಿ) ಸದಸ್ಯರೊಂದಿಗೆ ಫಿಫಾ ನಿಯೋಗ ಗುರುವಾರ ಪರಿಶೀಲನೆ ನಡೆಸಿದೆ.

ಗುವಾಹಟಿ ಕ್ರೀಡಾಂಗಣದಲ್ಲಿರುವ ಸೌಲಭ್ಯಗಳ ಬಗ್ಗೆ ಫಿಫಾ ಪ್ರತಿನಿಧಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ. ಫಿಫಾ ಅಂಡರ್ -17 ವನಿತೆಯರ ವಿಶ್ವಕಪ್‌ಗಾಗಿ ಗುವಾಹಟಿ ಕ್ರೀಡಾಂಗಣವನ್ನು ಆಯ್ಕೆ ಮಾಡಿದರೆ ಯಶಸ್ವಿಯಾಗಬಹುದು. 2017ರಲ್ಲಿ ಇಲ್ಲಿ ಫಿಫಾ ಅಂಡರ್ -17 ಪುರುಷರ ವಿಶ್ವಕಪ್‌ನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು ಎಂದು ಫಿಫಾ ನಿಯೋಗದ ಸದಸ್ಯೆ ಆಲಿವರ್ ವೊಗ್ಟ್ ಅವರು ಹೇಳಿದ್ದಾರೆ.

ದೇಶದ ಈ ಭಾಗದಲ್ಲಿ ಫುಟ್ಬಾಲ್‌ನ ಉತ್ಸಾಹ ನಮಗೆ ತಿಳಿದಿದೆ ಮತ್ತು ನಾವು ಯಶಸ್ಸನ್ನು ಪುನರಾವರ್ತಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ಧಾರೆ. ಎಲ್‌ಒಸಿಯ ಟೂರ್ನಮೆಂಟ್ ಡೈರೆಕ್ಟರ್ ರೋಮಾ ಖನ್ನಾ ‘‘ಗುವಾಹಟಿಗೆ ಮರಳುವುದು ನಿಜಕ್ಕೂ ಒಳ್ಳೆಯದು. ನಮಗೆ ತಿಳಿದಿರುವಂತೆ ಈ ಪ್ರದೇಶವು ಫುಟ್ಬಾಲ್‌ನತ್ತ ಹೆಚ್ಚಿನ ಒಲವು ಹೊಂದಿದೆ. ಪ್ರತಿಭಾವಂತ ಫುಟ್ಬಾಲ್ ಆಟಗಾರರು ಇದ್ದಾರೆ. ನಾವು 2017 ರಲ್ಲಿ ಅಪೂರ್ವವಾಗಿ ಪಂದ್ಯಾವಳಿಯನ್ನು ಸಂಘಟಿಸಿದ್ದೇವೆ. ಆದರೆ ಅದು ಮಾನದಂಡ. ಎಲ್ಲರ ಬೆಂಬಲ ಇನ್ನೂ ಉತ್ತಮವಾಗಿರಬೇಕು. 2017 ರಿಂದ ಮೂಲಸೌಕರ್ಯಗಳನ್ನು ಹೊಂದಿದೆ. ಆದರೆ ಕೆಲವು ಮಾರ್ಪಾಡುಗಳ ಅಗತ್ಯವಿದೆ’’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ಮೂಲಸೌಕರ್ಯಗಳು ಇರುವುದರಿಂದ ಮಹಿಳಾ ಫುಟ್ಬಾಲ್ ವಿಶ್ವಕಪ್ ಆಯೋಜಿಸಲು ಸುಲಭವಾಗಲಿದೆ. ಅಂಡರ್-19 ವಿಶ್ವಕಪ್ ದೇಶದಲ್ಲಿ ಮಹಿಳಾ ಫುಟ್ಬಾಲ್‌ಗೆ ಹೊಸ ಆಯಾಮವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ನಾವು ಎಲ್ಲಾ ಮಧ್ಯಸ್ಥಗಾರರ ಬೆಂಬಲದೊಂದಿಗೆ ನಾವು ಅದನ್ನು ಮಾಡಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಅಸ್ಸಾಂನ ಕ್ರೀಡಾ ಮತ್ತು ಯುವ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಜೋಶಿ ಈ ಪಂದ್ಯಾವಳಿ ಗುವಾಹಟಿಯಲ್ಲಿ ನಡೆಸಲು ಮುಖ್ಯಮಂತ್ರಿ ಮತ್ತು ಅಸ್ಸಾಂ ಸರಕಾರ ಬಹಳ ಉತ್ಸುಕವಾಗಿದೆ ಮತ್ತು ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು ಸಂಪೂರ್ಣ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.

 ಒಡಿಶಾದ ರಾಜಧಾನಿಯಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಲು ಫಿಫಾ-ಎಲ್‌ಒಸಿ ನಿಯೋಗ ಶುಕ್ರವಾರ ಭುವನೇಶ್ವರಕ್ಕೆ ಪ್ರಯಾಣಿಸಲಿದೆ. ಫಿಫಾ ಅಂಡರ್ -17 ವನಿತೆಯರ ವಿಶ್ವಕಪ್ ಫುಟ್ಬಾಲ್ 2020 ನವೆಂಬರ್ 2 ರಿಂದ 21 ರ ತನಕ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X