Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಭೇದಿಸಿದ...

ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಭೇದಿಸಿದ ಸಿಸಿಬಿ ಪೊಲೀಸರು: 1 ಕೋಟಿ ರೂ. ಮೌಲ್ಯದ ಮಾಲು ಜಪ್ತಿ

ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ29 Nov 2019 2:06 PM IST
share
ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಭೇದಿಸಿದ ಸಿಸಿಬಿ ಪೊಲೀಸರು: 1 ಕೋಟಿ ರೂ. ಮೌಲ್ಯದ ಮಾಲು ಜಪ್ತಿ

ಬೆಂಗಳೂರು, ನ.29: ಕೆನಡಾ ದೇಶದಿಂದ ಭಾರತಕ್ಕೆ ಮಾದಕ ದ್ರವ್ಯಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಭೇದಿಸಿರುವ ಸಿಸಿಬಿ ಪೊಲೀಸರು, ಸುಮಾರು 1 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪಶ್ಚಿಮ ಬಂಗಾಳ ಮೂಲದ ಅತೀಫ್ ಸಲೀಂ(26) ಮತ್ತು ರೋಹಿತ್ ದಾಸ್(26) ಎಂಬವರು ಬಂಧಿತ ಆರೋಪಿಗಳೆಂದು ಅವರು ತಿಳಿಸಿದರು.

ಆರೋಪಿ ಅತೀಫ್ ಸಲೀಂ, ಡಾರ್ಕ್ ವೆಬ್ ಹೆಸರಿನಲ್ಲಿ ವೆಬ್‌ಸೈಟ್ ಸೃಷ್ಟಿಸಿಕೊಂಡು, ಇದರ ಮೂಲಕ ಕೆನಡಾ ದೇಶದ ಹೈಡ್ರೋ ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು ಸಂಪರ್ಕಿಸುತ್ತಿದ್ದ. ತದನಂತರ, ವಿಕ್ಕರ್ ಮಿ (wickr me) ಎಂಬ ಆ್ಯಪ್ ಮುಖಾಂತರ ಪರಸ್ಪರ ಸಂಪರ್ಕ ಸಾಧಿಸಿ ಮಾದಕ ವಸ್ತುಗಳಿರುವ ಹೈಡ್ರೋ ಗಾಂಜಾ, ಗಾಂಜಾ ಚಾಕೋಲೇಟ್ ಮತ್ತು ಆಶಿಷ್ ಆಯಿಲ್, ಇ-ಸಿಗರೇಟ್ ಟ್ಯೂಬ್‌ಗಳನ್ನು ಖರೀದಿಸುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದರು.

ಕೆನಡಾದಲ್ಲಿರುವ ವ್ಯಕ್ತಿ ಸೂಚಿಸುವ ಗಿರಾಕಿಗಳ ವಿಳಾಸಗಳಿಗೆ ಮಾದಕ ವಸ್ತುಗಳನ್ನು ಅಮೆಜಾನ್ ಹೆಸರಿನ ಚೀಲಗಳಲ್ಲಿ ಕಟ್ಟಿಕೊಂಡು ಕೊರಿಯರ್ ಮೂಲಕ ಬೆಂಗಳೂರು ಸೇರಿದಂತೆ ಹಲವು ನಗರಗಳಿಗೆ ಕಳುಹಿಸುತ್ತಿದ್ದ. ಇದಕ್ಕಾಗಿ, ಮಾದಕ ವಸ್ತುಗಳ ಮಾರಾಟದ ಒಂದು ಪಾಲು ಲಾಭವನ್ನು ಆತ ತೆಗೆದುಕೊಳ್ಳುತ್ತಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ ಎಂದು ಆಯುಕ್ತರು ಹೇಳಿದರು.

ಕೆನಡಾದಿಂದ ರವಾನೆ: ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಬರದಂತೆ ಮಕ್ಕಳ ಹಾಲಿನ ಪುಡಿ ಡಬ್ಬಗಳಲ್ಲಿ ರಹಸ್ಯವಾಗಿ ಹೈಡ್ರೋ ಗಾಂಜಾವನ್ನು ಅಡಗಿಸಿಟ್ಟು ಕೆನಡಾದಿಂದ ಕೊರಿಯರ್ ಮೂಲಕ ಭಾರತಕ್ಕೆ ರವಾನಿಸಲಾಗುತ್ತಿತ್ತು. ಈ ರೀತಿ, ಬರೋಬ್ಬರಿ 2.750 ಕೆಜಿ ತೂಕದ ಹೈಡ್ರೋ ಗಾಂಜಾ ಇರುವ 14 ಚೀಲಗಳನ್ನು ಹಾಲಿನ ಡಬ್ಬಗಳಲ್ಲಿ ಅಡಗಿಸಿದ್ದು, ಸಾವಿರಾರು ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದರು ಎನ್ನುವುದು ಗೊತ್ತಾಗಿದೆ ಎಂದರು.

ಆರೋಪಿಯು ಮಾದಕ ವ್ಯಸನಿಗಳಾಗುವ ವ್ಯಕ್ತಿಗಳಿಗೆ ಮಾದಕ ವಸ್ತುವಿನ ಚಟ ಅಂಟಿಸಲು ಗಾಂಜಾ ಫ್ಲೇವರ್‌ನ ಚಾಕ್‌ಲೇಟ್ ಮತ್ತು ಪೆಪ್ಪರ್ ಮೆಂಟ್(ಜೆಲ್ಲಿ)ಗಳನ್ನು ಕೆನಡಾದಿಂದ ಖರೀದಿಸಿದ್ದ. ಈ ಸಂಬಂಧ 12 ಚಾಕ್‌ಲೇಟ್ ಪ್ಯಾಕೇಟ್‌ಗಳನ್ನು ಜಪ್ತಿ ಮಾಡಲಾಗಿದೆ. ಅದೇ ರೀತಿ, ಹ್ಯಾಶಿಷ್ ಆಯಿಲ್ ಒಳಗೊಂಡ ವೀಡ್ ಫ್ಲೇವರ್‌ನ 100 ಸಿಗರೇಟು(900 ಗ್ರಾಂ) ಟ್ಯೂಬ್, ಗಾಂಜಾ ಎಲೆಗಳನ್ನು ಪುಡಿ ಮಾಡಲು ಬಳಸುವ 3 ಚಿಕ್ಕ ಗಾಂಜಾ ಕ್ರಷರ್ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಆರೋಪಿ ಅತೀಫ್ ಸಲೀಂನಿಂದ ಒಂದು ಕಾರು, ಬೈಕ್, 1 ಲಕ್ಷ ರೂ.ನಗದು ಜಪ್ತಿ ಮಾಡಲಾಗಿದ್ದು, ಎಲ್ಲ ಮಾದಕ ವಸ್ತುಗಳ ಒಟ್ಟು ಮೌಲ್ಯ 1 ಕೋಟಿ ರೂ. ಆಗಿದ್ದು, ಈ ಸಂಬಂಧ ಆರೋಪಿಗಳ ವಿರುದ್ಧ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ಕುಲ್‌ದೀಪ್ ಕುಮಾರ್ ಜೈನ್ ಸೇರಿದಂತೆ ಪ್ರಮುಖರಿದ್ದರು.

‘ಅಮೆಜಾನ್ ವಿರುದ್ಧ ಕ್ರಮ’

ಕಾನೂನು ಬಾಹಿರ ಮಾದಕ ವಸ್ತು ಸಾಗಾಟ ಆರೋಪದಡಿ ಅಮೆಜಾನ್ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಈ ಸಂಬಂಧ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X