Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿಯೂ ಗಗನಕ್ಕೇರಿದ ಈರುಳ್ಳಿ...

ಶಿವಮೊಗ್ಗದಲ್ಲಿಯೂ ಗಗನಕ್ಕೇರಿದ ಈರುಳ್ಳಿ ಬೆಲೆ !

ವಾರ್ತಾಭಾರತಿವಾರ್ತಾಭಾರತಿ29 Nov 2019 6:46 PM IST
share
ಶಿವಮೊಗ್ಗದಲ್ಲಿಯೂ ಗಗನಕ್ಕೇರಿದ ಈರುಳ್ಳಿ ಬೆಲೆ !

ಶಿವಮೊಗ್ಗ, ನ. 29: ದೇಶದ ರಾಜಧಾನಿ ದೆಹಲಿ ಸೇರಿದಂತೆ, ರಾಜ್ಯಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದೆ. ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿಯೂ ಈರುಳ್ಳಿ ಬೆಲೆ ಏರುಗತಿಯಲ್ಲಿ ಸಾಗಿದೆ. ದರ ಹೆಚ್ಚಳವು ನಾಗರಿಕರ ಕಣ್ಣಲ್ಲಿ ನೀರು ತರಿಸಿದೆ!

ಜಿಲ್ಲೆಯಲ್ಲಿ ಈರುಳ್ಳಿ ಬೆಳೆ ಬೆಳೆಯುವುದಿಲ್ಲ. ಇದಕ್ಕೆ ಸಂಬಂಧಿಸಿದ ಪ್ರತ್ಯೇಕ ಮಾರುಕಟ್ಟೆಯೂ ಇಲ್ಲ. ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಮಾಹಿತಿ ಅನುಸಾರ, ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯ ಪ್ರದೇಶ ಶೂನ್ಯವಾಗಿದೆ. ಆದರೆ ಬೆರಳೆಣಿಕೆಯ ರೈತರು ಮಾತ್ರ ಬೆಳೆಯುತ್ತಾರೆ. ಅದನ್ನು ಸ್ಥಳೀಯವಾಗಿ ಮಾರಾಟ ಮಾಡುತ್ತಾರೆ. ಈ ಪ್ರಮಾಣ ನಗಣ್ಯವಾಗಿದೆ ಎಂದು ಕೆಲ ರೈತರು ಅಭಿಪ್ರಾಯಪಡುತ್ತಾರೆ. 

ಉಳಿದಂತೆ ಜಿಲ್ಲೆಗೆ ಬೆಂಗಳೂರು ಎಪಿಎಂಸಿ ಹಾಗೂ ನೆರೆ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬರುತ್ತದೆ. ಆದರೆ ದಿಢೀರ್ ಬೆಲೆ ಹೆಚ್ಚಳ ಕಾರಣದಿಂದ, ಕಳೆದ ಕೆಲ ದಿನಗಳಿಂದ ಜಿಲ್ಲೆಗೆ ಬರುತ್ತಿರುವ ಈರುಳ್ಳಿ ಪ್ರಮಾಣ ಕಡಿಮೆಯಾಗಿದೆ ಎಂದು ಸ್ಥಳೀಯ ವರ್ತಕರು ಮಾಹಿತಿ ನೀಡುತ್ತಾರೆ. 

ಏರಿಕೆ: ಶಿವಮೊಗ್ಗ ನಗರದಲ್ಲಿ ಉತ್ತಮ ಗುಣಮಟ್ಟದ ಕೆ.ಜಿ. ಈರುಳ್ಳಿಯ ಬೆಲೆ 120 ರಿಂದ 130 ರೂ.ಗಳಿದೆ. ಬೆಲೆ ಹೆಚ್ಚಳದ ಕಾರಣದಿಂದ ನಾಗರಿಕರು ಈರುಳ್ಳಿ ಖರೀದಿಗೆ ಹಿಂದೆ ಮುಂದೆ ನೋಡುವಂತಾಗಿದೆ. ಕೆಲ ತರಕಾರಿ ಮಾರಾಟ ಮಾಡುವ ವರ್ತಕರು ಈರುಳ್ಳಿ ವ್ಯಾಪಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ.

'ಕಳೆದ ಕೆಲ ತಿಂಗಳುಗಳ ಹಿಂದೆ ಸುರಿದ ಭಾರೀ ಮಳೆ ಹಾಗೂ ಉಂಟಾದ ಪ್ರವಾಹದಿಂದ, ಈರುಳ್ಳಿ ಉತ್ಪಾದನೆ ಕಡಿಮೆಯಾಗಿದೆ. ಇನ್ನೊಂದೆಡೆ ಬೇಡಿಕೆ ಹೆಚ್ಚಾಗಿದೆ. ಇದರಿಂದ ಈರುಳ್ಳಿ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದೆ. ಶಿವಮೊಗ್ಗ ಮಾರುಕಟ್ಟೆಗೆ ಹೊರ ಜಿಲ್ಲೆಗಳಿಂದ ಈರುಳ್ಳಿ ಬರುವುದರಿಂದ, ಇಲ್ಲಿನ ಬೆಲೆ ಇನ್ನಷ್ಟು ಹೆಚ್ಚುವಂತಾಗಿದೆ' ಎಂದು ವರ್ತಕರೋರ್ವರು ಅಭಿಪ್ರಾಯಪಡುತ್ತಾರೆ.

'ಬೆಲೆ ಹೆಚ್ಚಳದ ಕಾರಣದಿಂದ ಈರುಳ್ಳಿ ಖರೀದಿ ಕಡಿಮೆಗೊಳಿಸಲಾಗಿದೆ. ಕೆ.ಜಿ. ಖರೀದಿಸುತ್ತಿದ್ದವರು ಕಾಲು, ಅರ್ಧ ಕೆ.ಜಿ. ಕೊಂಡೊಯ್ಯುವಂತಾಗಿದೆ. ಯಾವಾಗ ಬೆಲೆ ಕಡಿಮೆಯಾಗಲಿದೆಯೋ ಎನ್ನುವಂತಾಗಿದೆ' ಎಂದು ಗ್ರಾಹಕರೋರ್ವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X