ಮದ್ಯದಂಗಡಿ ಮುಚ್ಚಲು ಆದೇಶ
ಮಂಗಳೂರು, ನ. 29: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ನ. 24ರಿಂದ ಉತ್ಸವಾದಿ ಕಾರ್ಯಕ್ರಮ ನಡೆಯುತ್ತಿದೆ. ಶಾಂತಿ-ಸುವ್ಯವಸ್ಥೆ ದೃಷ್ಟಿಯಿಂದ ನ.30ರಿಂದ ಡಿ.2ರವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ಡಿ.2ರವರೆಗೆ ನಡೆಯಲಿವೆ. ಮುಖ್ಯ ರಥೋತ್ಸವಗಳು ನ.30ರಿಂದ ಡಿ.2ರವರೆಗೆ ನಡೆಯಲಿದೆ. ಈ ಸಮಯದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್ಗಳನ್ನು ನ.30ರಂದು ಬೆಳಗ್ಗೆ 6ರಿಂದ ಡಿ.2ರ ಮಧ್ಯರಾತ್ರಿ 12ರವರೆಗೆ ಮುಚ್ಚಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.
Next Story





