Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾಕ್ರೋನ್‌ರ ಮೆದುಳು ಸತ್ತಿದೆ: ನ್ಯಾಟೊ...

ಮ್ಯಾಕ್ರೋನ್‌ರ ಮೆದುಳು ಸತ್ತಿದೆ: ನ್ಯಾಟೊ ಶೃಂಗ ಸಮ್ಮೇಳನಕ್ಕೆ ಮುನ್ನ ಟರ್ಕಿ ಅಧ್ಯಕ್ಷರ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ30 Nov 2019 8:26 PM IST
share
ಮ್ಯಾಕ್ರೋನ್‌ರ ಮೆದುಳು ಸತ್ತಿದೆ: ನ್ಯಾಟೊ ಶೃಂಗ ಸಮ್ಮೇಳನಕ್ಕೆ ಮುನ್ನ ಟರ್ಕಿ ಅಧ್ಯಕ್ಷರ ಹೇಳಿಕೆ

ಇಸ್ತಾಂಬುಲ್ (ಟರ್ಕಿ), ನ. 30: ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ (ನ್ಯಾಟೊ) ಸಾಯುತ್ತಿದೆ ಎಂಬುದಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ನೀಡಿರುವ ಎಚ್ಚರಿಕೆಯು ‘ರೋಗಗ್ರಸ್ತ ಮತ್ತು ಹಗುರ’ ತಿಳುವಳಿಕೆಯನ್ನು ತೋರಿಸುತ್ತದೆ ಎಂದು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್ ಹೇಳಿದ್ದಾರೆ. ‘‘ನಿಮ್ಮ ಮೆದುಳು ಸತ್ತಿದೆಯೇ ಎನ್ನುವುದನ್ನು ನೀವು ತಪಾಸಣೆ ಮಾಡಬೇಕು’’ ಎಂದು ಅವರು ಫ್ರಾನ್ಸ್ ಅಧ್ಯಕ್ಷರಿಗೆ ಸೂಚಿಸಿದ್ದಾರೆ.

ಈ ಹೇಳಿಕೆಗೆ ತಕ್ಷಣ ಫ್ರಾನ್ಸ್‌ನ ವಿದೇಶ ಸಚಿವಾಲಯವು ಆಕ್ಷೇಪ ವ್ಯಕ್ತಪಡಿಸಿದೆ ಹಾಗೂ ಇದು ಫ್ರಾನ್ಸ್ ಅಧ್ಯಕ್ಷರಿಗೆ ಮಾಡಿದ ಅವಮಾನ ಎಂದಿದೆ. ಪ್ಯಾರಿಸ್‌ನಲ್ಲಿರುವ ಟರ್ಕಿ ರಾಯಭಾರಿಯನ್ನು ಕರೆಸಿಕೊಂಡ ಸಚಿವಾಲಯವು ಈ ಬಗ್ಗೆ ಪ್ರತಿಭಟನೆ ಸಲ್ಲಿಸಿತು.

ನ್ಯಾಟೊ ಉತ್ತರ ಅಮೆರಿಕ ಮತ್ತು ಯುರೋಪ್‌ನ 29 ದೇಶಗಳ ಸೇನಾ ಮಿತ್ರಕೂಟವಾಗಿದೆ. 1949 ಎಪ್ರಿಲ್ 4ರಂದು ಜಾರಿಗೆ ಬಂದ ಒಪ್ಪಂದದ ಪ್ರಕಾರ, ಸಂಘಟನೆಯ ಯಾವುದೇ ಸದಸ್ಯ ದೇಶದ ಮೇಲೆ ಸಂಘಟನೆಗೆ ಹೊರತಾದ ಯಾವುದೇ ದೇಶವು ದಾಳಿ ನಡೆಸಿದರೆ, ಸಂತ್ರಸ್ತ ದೇಶದ ಕೋರಿಕೆಯ ಮೇರೆಗೆ ಇತರ ಸದಸ್ಯ ದೇಶಗಳು ಆ ದೇಶದ ರಕ್ಷಣೆಗೆ ಧಾವಿಸಬೇಕಾಗುತ್ತದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಡಿಯಲ್ಲಿ ಅಮೆರಿಕದ ಅನಿಶ್ಚಿತ ನಿಲುವು ಹಾಗೂ ಟರ್ಕಿಯೊಂದಿಗೆ ಹಳಸಿದ ಸಂಬಂಧದ ಹಿನ್ನೆಲೆಯಲ್ಲಿ, ನ್ಯಾಟೊದ ಮೆದುಳು ಸತ್ತಿದೆ ಎಂಬುದಾಗಿ ಮ್ಯಾಕ್ರೋನ್ ಹೇಳಿದ್ದರು.

ಬ್ರಿಟನ್‌ನಲ್ಲಿ ಡಿಸೆಂಬರ್ 4ರಂದು ನಡೆಯಲಿರುವ ನ್ಯಾಟೊ ಶೃಂಗ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಈ ಬೆಳವಣಿಗೆಗಳು ನಡೆದಿವೆ.

‘‘ನಾನು ಟರ್ಕಿಯಿಂದ ಮ್ಯಾಕ್ರೋನ್‌ರನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನ್ಯಾಟೊ ಶೃಂಗ ಸಮ್ಮೇಳನದಲ್ಲೂ ಹೇಳಲಿದ್ದೇನೆ: ನಿಮ್ಮ ಮೆದುಳು ಸತ್ತಿದೆಯೇ ಎನ್ನುವುದನ್ನು ನೀವು ಮೊದಲು ತಪಾಸಣೆ ಮಾಡಿ’’ ಎಂದು ಎರ್ದೊಗಾನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X