Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಜಿಡಿಪಿ ಕುಸಿತವಾಗಿದ್ದರೂ ಜಾಗತಿಕವಾಗಿ...

'ಜಿಡಿಪಿ ಕುಸಿತವಾಗಿದ್ದರೂ ಜಾಗತಿಕವಾಗಿ ಭಾರತದ ಬೆಳವಣಿಗೆ ಗಮನಾರ್ಹ'

ಕೇಂದ್ರ ಸಹಾಯಕ ಹಣಕಾಸು ಸಚಿವ ಅನುರಾಗ್ ಠಾಕೂರ್

ವಾರ್ತಾಭಾರತಿವಾರ್ತಾಭಾರತಿ30 Nov 2019 10:55 PM IST
share
ಜಿಡಿಪಿ ಕುಸಿತವಾಗಿದ್ದರೂ ಜಾಗತಿಕವಾಗಿ ಭಾರತದ ಬೆಳವಣಿಗೆ ಗಮನಾರ್ಹ

ಮಂಗಳೂರು, ನ.30: ಜಿಡಿಪಿ ಕುಸಿತದ ಕುರಿತಂತೆ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸಂಖ್ಯೆಯಲ್ಲಿ ಯಾವುದೇ ನಿರಾಕರಣೆ ಇಲ್ಲ. ಆದರೆ ಜಾಗತಿಕವಾಗಿ ಭಾರತದ ಬೆಳವಣಿಗೆ ಗಮನಾರ್ಹ ಎಂದು ಕೇಂದ್ರದ ಸಹಾಯಕ ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಜಿಡಿಪಿ ಕುಸಿತದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ಮಂಗಳೂರು ಲಿಟರರಿ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಮಂಗಳೂರು ಲಿಟ್ ಫೆಸ್ಟ್‌ನಲ್ಲಿ ಆರ್ಥಿಕ ಪರಿಸ್ಥಿತಿ ಕುರಿತು ಲೆಕ್ಕ ಪರಿಶೋಧಕ ವಿವೇಕ್ ಮಲ್ಯರ ಜತೆಗಿನ ಸಂವಾದದಲ್ಲಿ ಈ ಪ್ರತಿಕ್ರಿಯೆ ನೀಡಿದರು.

ಭಾರತದ ಜಿಡಿಪಿ ಕುಸಿತದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಪತ್ರಿಕೆಗಳಲ್ಲಿ ಅಂಕಿಅಂಶಗಳು ಪ್ರಕಟವಾಗಿವೆ. ಇವೆಲ್ಲಾ ಆವರ್ತನದ ಘಟನೆಯೇ ಹೊರತು ಬೇರೇನಲ್ಲ. ಆದರೆ ಭಾರತದ ಆರ್ಥಿಕತೆಯು ರಚನಾತ್ಮಕವಾಗಿ ಗಟ್ಟಿಯಾಗಿದೆ. ಅದಕ್ಕಾಗಿಯೇ ಜಗತ್ತು ನಮ್ಮ ಮೇಲೆ ವಿಶ್ವಾಸವಿರಿಸಿದೆ. ಅದರಿಂದಾಗಿಯೇ 64.7 ಮಿಲಿಯ ಡಾಲರ್ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಮಗೆ ದೊರಕಿದೆ. 2013ರಲ್ಲಿ ನಮ್ಮ ಬೆಳವಣಿಗೆ ಶೇ.4.2ರಿಂದ 4.3 ಆಗಿತ್ತು. ಆ ಬಳಿಕ ಕಳೆದ ಐದು ವರ್ಷಗಳ ಅವಧಿಯಲ್ಲಿ ಈ ಬೆಳವಣಿಗೆ ದರವನ್ನು ಶೇ. 7.5 ಅಂದಾಜಿಸಲಾಗಿದೆ. ವಿದೇಶಿ ವಿನಿಮಯ ಸಂಗ್ರಹ ಚಾರಿತ್ರಿಕವಾಗಿ ಅತ್ಯಧಿಕ 447 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದೆ. ಭಾರತ ಆರ್ಥಿಕ ಬೆಳವಣಿಗೆ ಬಗ್ಗೆ ನಾವು ವಿಶ್ವಾಸವನ್ನು ಇರಿಸೇಕಾಗಿದೆ ಎಂದು ಅವರು ಹೇಳಿದರು.

2025ಕ್ಕೆ 5 ಟ್ರಿಲಿಯನ್ ಆರ್ಥಿಕತೆಯಾಗುವ ಗುರಿಯನ್ನು ಇರಿಸಲಾಗಿದೆ, ಅದರತ್ತ ನಾವು ಸರಿಯಾದ ಹೆಜ್ಜೆಯನ್ನೇ ಇರಿಸಿದ್ದೇವೆ, ಕಳೆದ ಐದು ವರ್ಷದಲ್ಲಿ ನಮ್ಮ ಆರ್ಥಿಕತೆ 1.8 ಟ್ರಿಲಿಯನ್‌ನಿಂದ 2.8 ಟ್ರಿಲಿಯನ್‌ಗೆ ಕ್ಷಿಪ್ರವಾಗಿ ಬೆಳೆದಿದೆ ಎಂದವರು ವಿಶ್ಲೇಷಿಸಿದರು.

10 ಸಾರ್ವಜನಿಕ ರಂಗದ ಬ್ಯಾಂಕ್‌ಗಳ ವಿಲೀನ ಮೂಲಕ 4ಕ್ಕೆ ತರಲಾಗಿದ್ದು, ಬ್ಯಾಂಕ್‌ಗಳ ಬಂಡವಾಳ ವಿಸ್ತಾರಗೊಂಡಿದೆ, ಕೇಂದ್ರವು ಬ್ಯಾಂಕ್‌ಗಳಿಗೆ 2.5 ಲಕ್ಷ ಕೋಟಿ ರೂ.ಮೊತ್ತವನ್ನು ಒದಗಿಸಿದ್ದು, ಹೆಚ್ಚಿನ ಸಾಲ ವಿತರಣೆ ಮೂಲಕ ಮಾರುಕಟ್ಟೆಯಲ್ಲಿ ಹೆಚ್ಚು ದುಡ್ಡಿನ ಹರಿದಾಟವಾಗುವ ಬಗ್ಗೆ ಕ್ರಮ ಜರಗಿಸಲಾಗಿದೆ. ಹೊಸ ಕೈಗಾರಿಕೆಗಳಿಗೆ ಕಾರ್ಪೊರೇಟ್ ತೆರಿಗೆಯನ್ನು ಶೇ.30ರಿಂದ 15ಕ್ಕೆ ಇಳಿಸಲಾಗಿದೆ. ಹಾಲಿ ಇರುವ ಕೈಗಾರಿಕೆಗಳಿಗೆ ತೆರಿಗೆಯನ್ನು ಶೇ.30ರಿಂದ ಶೇ.22ಕ್ಕೆ ಇಳಿಸಲಾಗಿದೆ ಎಂದರು.

ಜಿಎಸ್‌ಟಿ ಹಾಗೂ ನೋಟು ಅಮಾನ್ಯೀಕರಣ ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ಹೆಜ್ಜೆ ಎಂದು ಬಣ್ಣಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಜನರು ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಿದ್ದಾರೆ. ತೆರಿಗೆ ಸಂಗ್ರಹ 7.4 ಲಕ್ಷ ಕೋಟಿ ರೂ.ಗಳಿಂದ 11.40 ಲಕ್ಷ ಕೋಟಿ ರೂ.ಗೆ ತಲಪಿದೆ ಎಂದು ಹೇಳಿದರು.

ಲಾಭದಲ್ಲಿದ್ದ ಬಿಪಿಸಿಎಲ್ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿರುವ ಕುರಿತಂತೆ ಸಾರ್ವಜನಿಕರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಅನುರಾಗ್ ಠಾಕೂರ್, ಸರಕಾರಿ ಒಡೆತನದ ಕಂಪನಿಗಳನ್ನು ಖಾಸಿಗಯವರಿಗೆ ಮಾರಾಟ ಮಾಡುವ ಕ್ರಮವನ್ನು ಸಮರ್ಥಿಸಿಕೊಂಡರು.

ನಷ್ಟವನ್ನುಂಟುಮಾಡುವ ಯಾವುದನ್ನಾದರೂ ನೀವು ಖರೀದಿಸುತ್ತೀರಾ ಎಂದು ಪ್ರಶ್ನಿಸಿದರಲ್ಲದೆ, ಖಾಸಗಿ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಹಾಗಾಗಿ ಸರಕಾರ ಮೂಲಭೂತ ಸೌಕರ್ಯಕ್ಕೆ ಹೂಡಿಕೆ ಮಾಡುವ ನಿಟ್ಟಿನಲ್ಲಿ ಇಂತಹ ಕಂಪನಿಗಳ ಮೇಲುಸ್ತುವಾರಿಯನ್ನು ಮಾತ್ರವೇ ವಹಿಸಿಕೊಂಡು ಮಾರಾಟಕ್ಕೆ ಮುಂದಾಗಿದೆ. ಮುಂದೆ ಭಾರತದ ಶಿಪ್ಪಿಂಗ್ ಕಾರ್ಪೊರೇಶನ್, ನಾರ್ತ್ ಈಸ್ಟರ್ನ್ ಇಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್ ಕೂಡಾ ಈ ಮಾರಾಟದ ಹಾದಿಯಲ್ಲಿವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X