Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಧುಮೇಹಿಗಳಲ್ಲಿ ದೃಷ್ಟಿ ಕಳೆದುಕೊಳ್ಳುವ...

ಮಧುಮೇಹಿಗಳಲ್ಲಿ ದೃಷ್ಟಿ ಕಳೆದುಕೊಳ್ಳುವ ಅಪಾಯ: ಇದರಿಂದ ಪಾರಾಗುವುದು ಹೇಗೆ ?

ವಾರ್ತಾಭಾರತಿವಾರ್ತಾಭಾರತಿ1 Dec 2019 6:15 PM IST
share
ಮಧುಮೇಹಿಗಳಲ್ಲಿ ದೃಷ್ಟಿ ಕಳೆದುಕೊಳ್ಳುವ ಅಪಾಯ: ಇದರಿಂದ ಪಾರಾಗುವುದು ಹೇಗೆ ?

ಮಧುಮೇಹಿಗಳು ಇತರರಿಗೆ ಹೋಲಿಸಿದರೆ ಅಂಧತ್ವಕ್ಕೆ ಗುರಿಯಾಗುವ ಸಾಧ್ಯತೆ 25 ಪಟ್ಟು ಹೆಚ್ಚಿರುತ್ತದೆ ಎನ್ನುತ್ತಾರೆ ತಜ್ಞರು. ವಿವಿಧ ಕಣ್ಣಿನ ಕಾಯಿಲೆಗಳು ಮಧುಮೇಹದೊಂದಿಗೆ ಗುರುತಿಸಿಕೊಂಡಿವೆ. ವಯಸ್ಕರಲ್ಲಿ ಅಂಧತ್ವಕ್ಕೆ ಪ್ರಮುಖ ಕಾರಣಗಳಲ್ಲಿ ಮಧುಮೇಹವೂ ಒಂದಾಗಿದೆ. ಮಧುಮೇಹಿಗಳ ರಕ್ತದಲ್ಲಿಯ ಹೆಚ್ಚಿನ ಸಕ್ಕರೆ ಮಟ್ಟವು ಕಣ್ಣಿನ ಅಕ್ಷಿಪಟಲಕ್ಕೆ ಹಾನಿಯನ್ನುಂಟು ಮಾಡುತ್ತದೆ ಮತ್ತು ಇದು ಡಯಾಬಿಟಿಕ್ ರೆಟಿನೋಪತಿ,ಮ್ಯಾಕ್ಯುಲರ್ ಎಡಿಮಾ, ಕ್ಯಾಟರಾಕ್ಟ್ ಮತ್ತು ಗ್ಲುಕೋಮಾಕ್ಕೆ ಕಾರಣವಾಗುತ್ತದೆ.

ಮಧುಮೇಹದಂತಹ ದೀರ್ಘಕಾಲಿಕ ಕಾಯಿಲೆಗಳು ಕಣ್ಣುಗಳು ಸೇರಿದಂತೆ ಶರೀರದ ವಿವಿಧ ಭಾಗಗಳಿಗೆ ಹಾನಿಯನ್ನುಂಟು ಮಾಡುತ್ತವೆ. ರಕ್ತದಲ್ಲಿಯ ಅಧಿಕ ಸಕ್ಕರೆ ಮಟ್ಟವು ನಾವು ಹೊರಜಗತ್ತನ್ನು ನೋಡುವಂತೆ ಮಾಡುವ ಅಕ್ಷಿಪಟಲಕ್ಕೆ ಹಾನಿಯನ್ನುಂಟು ಮಾಡುತ್ತದೆ. ಕಣ್ಣಿನಲ್ಲಿ ಹೆಚ್ಚಿನ ಒತ್ತಡವು ಗ್ಲಾಕೋಮಾಕ್ಕೆ ಕಾರಣವಾಗುತ್ತದೆ ಮತ್ತು ಕೆಲವೊಮ್ಮೆ ಕಣ್ಣಿನ ಒಂದು ಭಾಗವು ಅಕ್ಷಿಪಟಲದ ಮೇಲೆ ಬೆಳಕನ್ನು ಕೇಂದ್ರೀಕರಿಸಲು ನೆರವಾಗುವ ಮಸೂರದ ಮೇಲೆ ಮೋಡ ಮುಸುಕಿದಂತೆ ಮಾಡುತ್ತದೆ ಮತ್ತು ಇದು ಕ್ಯಾಟರಾಕ್ಟ್ ಅಥವಾ ಮೋತಿಬಿಂದುವನ್ನು ಉಂಟು ಮಾಡುತ್ತದೆ. ಮಧುಮೇಹ ಇಂತಹ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿದೆ.

ಹೆಚ್ಚಿನ ಜನರಿಗೆ ಮಧುಮೇಹದ ಈ ಗಂಭೀರ ಪರಿಣಾಮಗಳು ಮತ್ತು ಕಣ್ಣಿನ ಸಮಸ್ಯೆಗಳ ಹೆಚ್ಚಿನ ಅಪಾಯದ ಬಗ್ಗೆ ಅರಿವಿರುವುದಿಲ್ಲ ಎನ್ನುವುದನ್ನು ವೈದ್ಯಕೀಯ ಅಧ್ಯಯನಗಳು ತೋರಿಸಿವೆ. ರಕ್ತದಲ್ಲಿಯ ಸಕ್ಕರೆ ಮಟ್ಟ,ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಮೂಲಕ ಈ ಸಮಸ್ಯೆಗಳನ್ನು ನಿಭಾಯಿಸಬಹುದು ಮತ್ತು ತಡೆಗಟ್ಟಬಹುದು ಎನ್ನುವುದು ಸಮಾಧಾನಕರ ಸಂಗತಿಯಾಗಿದೆ. ಅಗತ್ಯ ಕ್ರಮಗಳನ್ನು ಅನುಸರಿಸುವ ಮತ್ತು ತಿಂಗಳಿಗೊಮ್ಮೆ ಕಣ್ಣಿನ ಸಮಗ್ರ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮಧುಮೇಹದ ಹಾನಿಕಾರಕ ಪರಿಣಾಮಗಳಿಗೆ ಕಡಿವಾಣ ಹಾಕಬಹುದು.

ಡಯಾಬಿಟಿಕ್ ರೆಟಿನೋಪತಿ ಬಗ್ಗೆ ಆರಂಭದಲ್ಲಿಯೇ ಕಾಳಜಿ ವಹಿಸಿದರೆ ಲೇಸರ್ ಶಸ್ತ್ರಚಿಕಿತ್ಸೆಯ ಮೂಲಕ ಅದನ್ನು ಗುಣಪಡಿಸಬಹುದಾಗಿದೆ. ಹಾನಿಕಾರಕ ವಿಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿಕೊಳ್ಳುವುದು ಮುಖ್ಯವಾಗಿದೆ. ದೃಷ್ಟಿಯು ಮಸುಕಾದರೆ ಅದನ್ನು ಔಷಧಿಗಳಿಂದ ಅಥವಾ ಕನ್ನಡಕವನ್ನು ಬದಲಿಸುವ ಮೂಲಕ ನಿವಾರಿಸಿಕೊಳ್ಳಬಹುದು.

ಮಧುಮೇಹದಿಂದ ಬಳುತ್ತಿರುವ ಮಹಿಳೆಯರು ಗರ್ಭಧಾರಣೆಗೆ ಮುನ್ನ ಕಣ್ಣಿನ ಸಮಗ್ರ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯವಾಗಿದೆ.

 ಟೈಪ್ 1 ಮತ್ತು ಟೈಪ್ 2 ಮಧುಮೇಹಗಳಿಗೆ ಚಿಕಿತ್ಸೆ ಪಡೆಯದಿದ್ದರೆ ಅಥವಾ ನಿಯಂತ್ರಿಸದಿದ್ದರೆ ಮೂತ್ರಪಿಂಡಗಳು, ಕಣ್ಣುಗಳು,ನರಗಳು ಮತ್ತು ಇತರ ಅಂಗಗಳಿಗೆ ಹಾನಿಯುಂಟಾಗುವ ಅಪಾಯವಿದೆ. ದೃಷ್ಟಿಯ ಸಣ್ಣ ಸಮಸ್ಯೆಯಿಂದ ಆರಂಭಗೊಂಡು ಅಂತಿಮವಾಗಿ ರೋಗಿಯು ಕಣ್ಣಿನ ದೃಷ್ಟಿಯನ್ನೇ ಕಳೆದುಕೊಳ್ಳಬಹುದು. ಹೀಗಾಗಿ ಮಧುಮೇಹಿಗಳು ದೃಷ್ಟಿ ಮಸುಕಾದರೆ ಅಥವಾ ಇತರ ದೃಷ್ಟಿ ಬದಲಾವಣೆಗಳು ಕಂಡು ಬಂದರೆ ಯಾವುದೇ ಸಂದರ್ಭದಲ್ಲಿಯೂ ಅದನ್ನು ಕಡೆಗಣಿಸಕೂಡದು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳದಿದ್ದರೆ ಮತ್ತು ಜೀವನಶೈಲಿಯನ್ನು ಬದಲಿಸಿಕೊಳ್ಳದಿದ್ದರೆ ಅಂಧತ್ವವನ್ನು ಅನುಭವಿಸಬೇಕಾದೀತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X