Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡವ -ಶ್ರೀಮಂತರ ಮಧ್ಯೆ ಕಂದಕ ನಿರ್ಮಾಣ:...

ಬಡವ -ಶ್ರೀಮಂತರ ಮಧ್ಯೆ ಕಂದಕ ನಿರ್ಮಾಣ: ಡಾ.ಮೋಹನ್ ಆಳ್ವ

ವಾರ್ತಾಭಾರತಿವಾರ್ತಾಭಾರತಿ1 Dec 2019 7:50 PM IST
share
ಬಡವ -ಶ್ರೀಮಂತರ ಮಧ್ಯೆ ಕಂದಕ ನಿರ್ಮಾಣ: ಡಾ.ಮೋಹನ್ ಆಳ್ವ

ಉಡುಪಿ, ಡಿ.1: ದೇಶದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದರೂ ಸಮಾಜದಲ್ಲಿ ಸಾಕಷ್ಟು ಕಂದಕಗಳು ನಿರ್ಮಾಣವಾಗುತ್ತಿವೆ. ಬಡವರು ಹಾಗೂ ಶ್ರೀಮಂತರ ಮಧ್ಯೆ ಬಹಳ ದೊಡ್ಡ ಅಂತರ ಕಾಣುತ್ತಿದ್ದೇವೆ. ಇದನ್ನು ಹೋಗಲಾಡಿಸಲು ಸರಕಾರ, ಸ್ವಾಮೀಜಿ ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದ್ದಾರೆ.

ಉಡುಪಿ ಹೋಟೆಲ್ ಸ್ವದೇಶ್ ಹೆರಿಟೇಜ್ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್‌ನ ವಿಂಶತಿ ಸಂಭ್ರಮ -2019 ಕಾರ್ಯಕ್ರಮದಲ್ಲಿ ಲೇಖಕ ತಾರಾನಾಥ ಮೇಸ್ತ, ನಿತ್ಯಾನಂದ ಒಳ ಕಾಡು ಕುರಿತು ಬರೆದ ‘ಆಪದ್ಭಾಂಧವ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಸಮಾಜ ಮತ್ತು ಧರ್ಮ ಎಂಬ ಪದವನ್ನು ಇಂದು ದುರುಪಯೋಗ ಮಾಡ ಲಾಗುತ್ತಿದೆ. ಜಾತಿಯನ್ನು ಸಮಾಜದ ಜೊತೆ ಸೇರಿಸಿ ದುರ್ಬಳಕೆ ಮಾಡುತ್ತಿ ರುವುದು ಸರಿಯಲ್ಲ. ಜಾತಿಯನ್ನು ಸಮಾಜ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರ ಒಳಗೊಳ್ಳುವಿಕೆಯೇ ಸಮಾಜದ ಪರಿಕಲ್ಪನೆಯಾಗಿದೆ. ಅದೇ ರೀತಿ ಎಲ್ಲ ಸಮುದಾಯಗಳು ಸೇರಿರುವ ಧರ್ಮವೇ ನಿಜವಾದ ಸಮಾಜ ಎಂದು ಅವರು ಅಭಿಪ್ರಾಯ ಪಟ್ಟರು.

ಇಂದು ಆಧುನಿಕ ಶಾಲಾ ಪಠ್ಯ ಪುಸ್ತಕಗಳ ಅಧ್ಯಯನ ಸಮಾಜದ ಪರಿಕಲ್ಪನೆ ಕೊಡುವುದಿಲ್ಲ. ಇವು ಮೆದುಳಿನ ಜ್ಞಾನವನ್ನು ವೃದ್ಧಿಸುತ್ತದೆಯೇ ಹೊರತು ಮನಸ್ಸನ್ನು ಅರಳಿಸುವ ಕೆಲಸ ಮಾಡುವುದಿಲ್ಲ. ಬಯಲು ಶಾಲೆಗಳು ಸಮಾಜದ ಪರಿಕಲ್ಪನೆಯನ್ನು ಮೂಡಿಸುವ ಕಾರ್ಯ ಮಾಡುತ್ತದೆ. ಬದ್ಧತೆ ಇರುವವರು ತೆಗೆದುಕೊಳ್ಳುವ ವಿಚಾರ ಹಾಗೂ ಕೈಗೊಳ್ಳುವ ಕಾರ್ಯ ಜೀವಂತ ವಾಗಿರುತ್ತದೆ ಎಂದು ಅವರು ತಿಳಿಸಿದರು.

ಸಾಲುಮರದ ತಿಮ್ಮಕ್ಕರಂತೆ ಸಾಧನೆ ಮಾಡಿರುವ ನಿತ್ಯಾನಂದ ಒಳಕಾಡು ಅವರ ಜೀವನ ಯಶೋಗಾಥೆಯು ಪಠ್ಯವಾಗಬೇಕು. ಕೇವಲ ಹಣದಿಂದ ಋಣ ತೀರಿಸಲು ಸಾಧ್ಯವಿಲ್ಲ. ಕಠಿಣ ಪರಿಶ್ರಮ ಮಾಡಿದಾಗ ಮಾತ್ರ ಸಮಾಜದ ಋಣ ತೀರಿಸಲು ಸಾಧ್ಯ. ನಾವು ಸಮಾಜದಿಂದ ಪಡೆದ ಸಂಪತ್ತನ್ನು ಸಮಾಜಕ್ಕೆ ವಾಪಸ್ಸು ನೀಡಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಬಿಲ್ಡರ್ಸ್‌ ಅಸೋಸಿ ಯೇಶನ್ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್ ಮಾತನಾಡಿ, ಸಮಾಜ ಸೇವೆಯಲ್ಲಿ ನಿತ್ಯಾನಂದ ಒಳಕಾಡು ಮಾಡಿರುವ ಸಾಧನೆಯು ಗಿನ್ನಿಸ್ ದಾಖಲೆಗದೆ ಸೇರ ಬೇಕಾಗಿದೆ. ಇಂದು ಎಲ್ಲ ಕ್ಷೇತ್ರಗಳಲ್ಲೂ ಪೈಪೋಟಿ ಎಂಬುದು ಇದೆ. ಆದರೆ ಸ್ಪರ್ಧೆ ಇಲ್ಲದಿರುವ ಏಕೈಕ ಕ್ಷೇತ್ರ ಅಂದರೆ ಸಮಾಜ ಸೇವೆ ಮಾತ್ರ. ಇದರಲ್ಲಿ ಯಾರು ಸ್ಪರ್ಧೆ ಒಡ್ಡಲು ಬರುವುದಿಲ್ಲ ಎಂದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್‌ನ ಅಧ್ಯಕ್ಷ ಎಂ. ನಾಗೇಶ್ ಹೆಗ್ಡೆ ವಹಿಸಿದ್ದರು. ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಕೃತಿ ಪರಿಚಯ ಮಾಡಿದರು. ಸನ್ಮಾರ್ಗ ಪತ್ರಿಕೆಯ ಸಂಪಾದಕ ಏ.ಕೆ.ಕುಕ್ಕಿಲ, ಲೇಖಕ ತಾರಾನಾಥ ಮೇಸ್ತ ಉಪಸ್ಥಿತರಿದ್ದರು.

ನಾಗರಿಕ ಸಮಿತಿ ಟಸ್ಟ್ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಸುದೇವ ಭಟ್ ಪೆರಂಪಳ್ಳಿ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X