Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದರ್ಗಾ ಆಡಳಿತಾಧಿಕಾರಿ ವಿರುದ್ಧ ಉಳ್ಳಾಲ...

ದರ್ಗಾ ಆಡಳಿತಾಧಿಕಾರಿ ವಿರುದ್ಧ ಉಳ್ಳಾಲ ಜಮಾಅತ್ ಸಂರಕ್ಷಣಾ ಸಮಿತಿಯಿಂದ ಹಕ್ಕೊತ್ತಾಯ

ವಾರ್ತಾಭಾರತಿವಾರ್ತಾಭಾರತಿ1 Dec 2019 10:41 PM IST
share
ದರ್ಗಾ ಆಡಳಿತಾಧಿಕಾರಿ ವಿರುದ್ಧ ಉಳ್ಳಾಲ ಜಮಾಅತ್ ಸಂರಕ್ಷಣಾ ಸಮಿತಿಯಿಂದ ಹಕ್ಕೊತ್ತಾಯ

ಉಳ್ಳಾಲ : ಅಧಿಕಾರಿದಲ್ಲಿದ್ದ ವೇಳೆ  ಭ್ರಷ್ಟಾಚಾರದ ಪಟ್ಟಿಯಲ್ಲಿ ಸೇರಿ ವಜಾಗೊಂಡಿದ್ದ ಅಧಿಕಾರಿಯನ್ನು ಉಳ್ಳಾಲ ದರ್ಗಾದ ಆಡಳಿತಾಧಿಕಾರಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದರಿಂದ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣ ಸಂಸ್ಥೆಗಳ ಬಗ್ಗೆ ಉಳ್ಳಾಲದ ಜನರಲ್ಲಿ ಆತಂಕದ ಮನೆ ಮಾಡಿದೆ ಎಂದು ಸಾಮಾಜಿಕ ಮುಖಂಡ ಫಾರೂಕ್ ಉಳ್ಳಾಲ್ ಖೇದ ವ್ಯಕ್ತಪಡಿಸಿದರು.

ದರ್ಗಾ ಆಡಳಿತಾಧಿಕಾರಿ ನೇಮಕದ ವಿರುದ್ಧ ಉಳ್ಳಾಲ ಜಮಾಅತ್ ಸಂರಕ್ಷಣಾ ಸಮಿತಿಯಿಂದ ರವಿವಾರ ಉಳ್ಳಾಲ  ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತನ್ನದೇ ಆದ ಇತಿಹಾಸವಿರುವ ಉಳ್ಳಾಲ ದರ್ಗಾ  ದ.ಕ. ಜಿಲ್ಲೆಯಲ್ಲಿ ಸರ್ವಧರ್ಮ ಸಮನ್ವಯತೆಯ ಕೇಂದ್ರವಾಗಿದ್ದು,  ಕಳೆದ ಮೂರುವರೆ ವರ್ಷಗಳಿಂದ ಅಬ್ದುಲ್ ರಶೀದ್ ನೇತೃತ್ವದಲ್ಲಿ ಉಳ್ಳಾಲದ ವಿವಿಧ ಮೊಹಲ್ಲಾಗಳ 55 ಪ್ರತಿನಿಧಿಗಳನ್ನು ನೇಮಕ ಮಾಡಿದ್ದಾರೆ. ಇದೀಗ ಅಧಿಕಾರ ದಲ್ಲಿದ್ದಾಗ ಭ್ರಷ್ಟಾಚಾರ ನಡೆಸಿ ವಜಾಗೊಂಡ ನಿವೃತ್ತ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಕ‌ ಮಾಡಿರುವುದು, ಉಳ್ಳಾಲದ ಸರ್ವ ಧರ್ಮೀಯರಲ್ಲೂ  ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಜನರ ನೋವಿಗೆ ಸ್ಪಂದಿಸಿ ಹಕ್ಕೊತ್ತಾಯ ಸಭೆ ನಡೆಸಲಾಗಿದೆ.  ಜನರ ನೋವನ್ನು ಮುಖ್ಯಮಂತ್ರಿ, ಸಂಸದರು, ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು  ಅರ್ಥಮಾಡಿಕೊಂಡು ಆಡಳಿತಾಧಿಕಾರಿಯನ್ನು ತಕ್ಷಣ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಬಳಿಕ ಉಳ್ಳಾಲ ಠಾಣೆಯ ಎಸ್.ಐ. ಜಿ.ವಿ.ಕಾಂತಿ ಅವರಿಗೆ ಮನವಿ ಸಲ್ಲಿಸಲಾಯಿತು.

ಉಳ್ಳಾಲ ಜಮಾಅತ್ ಸಂರಕ್ಷಣಾ ಸಮಿತಿ ಸಂಚಾಲಕ ಯು.ಎಚ್.ಅಲ್ತಾಫ್ ಹಳೆಕೋಟೆ, ಪ್ರಮುಖರಾದ ಎ.ಕೆ.ಮೊಯಿದ್ದೀನ್,  ಅಯೂಬ್ ಮಂಚಿಲ, ಹಮೀದ್, ಮುಸ್ತಫಾ ಅಬ್ದುಲ್ಲಾ, ಅಬ್ಬಾಸ್ ಕೋಟೆಪುರ, ಯು.ಕೆ.ಮುಸ್ತಫಾ ಎವರೆಸ್ಟ್, ಅಮೀರ್ ಹಾಜಿ, ಆಸಿಫ್ ಅಬ್ದುಲ್ಲಾ, ನಗರಸಭಾ ಮಾಜಿ ಅಧ್ಯಕ್ಷ ಹುಸೈನ್ ಕುಂಞಿಮೋನು, ಸದಸ್ಯ ಬಶೀರ್, ಅಬ್ಬಾಸ್ ಕೆನರಾ, ಜಮಾಲಿಯ ಖಾದರ್, ಮುಹಿಯುದ್ದೀನ್ ಪೇಟೆ, ಅಶ್ರಫ್ ಕೋಟೆಪುರ, ಇಲ್ಯಾಸ್ ಹಾಜಬ್ಬ, ನಝೀರ್ ಕೋಟೆಪುರ, ಇಮ್ತಿಯಾಝ್ ಕೋಡಿ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X