Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನಲ್ಲಿ ಧಿಡೀರ್ ಮಳೆ: ಬೆಳೆ...

ಮಲೆನಾಡಿನಲ್ಲಿ ಧಿಡೀರ್ ಮಳೆ: ಬೆಳೆ ಸಂರಕ್ಷಣೆಗೆ ಪರದಾಡುತ್ತಿರುವ ಕೃಷಿಕರು

ವಾರ್ತಾಭಾರತಿವಾರ್ತಾಭಾರತಿ1 Dec 2019 11:47 PM IST
share
ಮಲೆನಾಡಿನಲ್ಲಿ ಧಿಡೀರ್ ಮಳೆ: ಬೆಳೆ ಸಂರಕ್ಷಣೆಗೆ ಪರದಾಡುತ್ತಿರುವ ಕೃಷಿಕರು

ಚಿಕ್ಕಮಗಳೂರು, ಡಿ.1: ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬಿಡುವು ನೀಡಿದ್ದ ಮಳೆ ರವಿವಾರ ಮಲೆನಾಡಿನ ಕೆಲ ಭಾಗಗಳಲ್ಲಿ ಧಾರಾಕಾರವಾಗಿ ಸುರಿದಿದ್ದರೆ, ಜಿಲ್ಲೆಯ ಬಯಲುಸೀಮೆ ತಾಲೂಕುಗಳ ವ್ಯಾಪ್ತಿಯಲ್ಲಿ ದಟ್ಟ ಮೋಡ ಅವರಿಸಿ ಕೆಲ ಹೊತ್ತು ತುಂತುರು ಮಳೆಯಾದ ಬಗ್ಗೆ ವರದಿಯಾಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ಮಲೆನಾಡಿನಲ್ಲಿ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ.

ಕಳೆದ ಆಗಸ್ಟ್ ತಿಂಗಳಲ್ಲಿ ಜಿಲ್ಲಾದ್ಯಂತ ಭಾರೀ ಅನಾಹುತಗಳನ್ನು ಸೃಷ್ಟಿಸಿದ್ದ ಮಳೆ ನಂತರ ಆಗ್ಗಾಗ್ಗೆ ಸುರಿದು ಮಾಯಾವಾಗಿತ್ತು. ಮಳೆಯಿಂದ ಸಂಭವಿಸಿದ ಅನಾಹುತಗಳಿಂದಾಗಿ ಸಾವಿರಾರು ಜನರು ನಿರಾಶ್ರಿತರಾಗಿದ್ದರು. ಎರಡು ತಿಂಗಳಿನಿಂದ ಮಳೆ ಸಂಪೂರ್ಣವಾಗಿ ಬಿಡುವು ನೀಡಿದ್ದರಿಂದ ಅಸ್ತವ್ಯಸ್ತಗೊಂಡಿದ್ದ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಆದರೆ ಕಳೆದೊಂದು ವಾರದಿಂದ ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇದರಿಂದಾಗಿ ಮಲೆನಾಡಿನ ಕಾಫಿ, ಅಡಿಕೆ ಬೆಳೆಗಾರರು ಮಳೆಯ ಭೀತಿಯಲ್ಲಿದ್ದು, ರವಿವಾರ ಬೆಳಗ್ಗೆ ಹಾಗೂ ಸಂಜೆ ಧಾರಾಕಾರ ಮಳೆ ಸುರಿದ ಪರಿಣಾಮ ಮಲೆನಾಡಿನ ಕಾಫಿ, ಅಡಿಕೆ ಬೆಳೆಗಾರರು ತಲೆಮೇಲೆ ಕೈಹೊತ್ತು ಕೂರುವಂತಾಗಿದೆ.

ರವಿವಾರ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ದಟ್ಟ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಬೆಳಗ್ಗೆ ಸುಮಾರು 10ರ ಸಮಯದಲ್ಲಿ ಮಲೆನಾಡಿನ ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯಲ್ಲಿ ದಿಢೀರನೆ ಮಳೆ ಸುರಿಯಿತು. ಆದರೆ ಚಿಕ್ಕಮಗಳೂರು, ಕಡೂರು, ತರಿಕೆರೆ ತಾಲೂಕುಗಳ ವ್ಯಾಪ್ತಿಯಲ್ಲಿ ರವಿವಾರ ಮೋಡಕವಿದ ವಾತಾವರಣ ಇದ್ದರೂ ಆಗಾಗ್ಗೆ ತುಂತುರು ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ಸುಮಾರು ಅರ್ಧ ಗಂಟೆ ಸಾಧಾರಣ ಮಳೆ ಸುರಿದಿದ್ದು, ಸಂಜೆವರೆಗೂ ಮೋಡ ಕವಿದ ವಾತಾವರಣ ಮಾತ್ರ ಇತ್ತು.

ರವಿವಾರ ಜಿಲ್ಲೆಯ ಮಲೆನಾಡು ಭಾಗದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಸುರಿದ ಧಾರಾಕಾರ ಮಳೆ ಈ ಭಾಗದ ಅಡಿಕೆ, ಕಾಫಿ ಬೆಳೆಗಾರರನ್ನು ಕಂಗಾಲು ಮಾಡಿದೆ. ಪ್ರಸಕ್ತ ಮಲೆನಾಡಿನಲ್ಲಿ ಕಾಫಿ, ಅಡಿಕೆ ಕಟಾವು ಕೃಷಿ ಕೆಲಸ ನಡೆಯುತ್ತಿದ್ದು, ಕಟಾವು ಮಾಡಿದ ಅಡಿಕೆ ಹಾಗೂ ಕಾಫಿ ಬೆಳೆಯ ಸಂಸ್ಕರಣೆಗೆ ಮಳೆ ಅಡ್ಡಿಯಾಗಿದೆ. ಕಳೆದೊಂದು ವಾರದಿಂದ ಮಲೆನಾಡಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿರುವುದರಿಂದ ಅಡಿಕೆ ಒಣಗಿಸುವ, ಸಂಸ್ಕರಣೆ ಮಾಡುವ ಪ್ರಕ್ರಿಯೆಗೆ ಭಾರೀ ಹಿನ್ನಡೆಯಾಗಿದೆ. 

ಮಲೆನಾಡಿನಲ್ಲಿ ಅಡಿಕೆ ಬೇಯಿಸಿ ಸಂಸ್ಕರಣೆ ಮಾಡುವ ಪದ್ಧತಿ ಇದ್ದು, ಇದೀಗ ಭಾರೀ ಪ್ರಮಾಣದಲ್ಲಿ ಅಡಿಕೆ ಬೆಳೆಗಾರರು ಅಡಿಕೆ ಕಟಾವು ಮಾಡಿ ಸಂಸ್ಕರಣೆ ಮಾಡುತ್ತಿದ್ದಾರೆ. ಅಡಿಕೆ ಸಂಸ್ಕರಣೆಗೆ ಬಿಸಿಲು ಅತ್ಯಗತ್ಯವಾಗಿದ್ದು, ಕಳೆದೊಂದು ವಾರದಿಂದ ಮಲೆನಾಡಿನಲ್ಲಿ ಬಿಸಿಲು ಮಾಯವಾಗಿರುವುದರಿಂದ ಬೇಯಿಸಿದ ಅಡಿಕೆಯನ್ನು ಒಣಗಿಸಲು ಸಾಧ್ಯವಾಗದೆ ಅಡಿಕೆ ಕೊಳೆಯಲಾರಂಭಿಸಿದೆ. ರವಿವಾರ ಧಾರಾಕಾರ ಮಳೆಯಾದ ಪರಿಣಾಮ ಕಟಾವು ಮಾಡಿದ ಹಾಗೂ ಬೇಯಿಸಿದ ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಭೀತಿ ಅಡಿಕೆ ಬೆಳೆಗಾರರನ್ನು ಆವರಿಸಿಕೊಂಡಿದೆ. 

ಕಾಫಿ ಬೆಳೆಗಾರರ ಪರಸ್ಥಿತಿಯೂ ಇದೇ ಆಗಿದ್ದು, ಇದೀಗ ಅರೇಬಿಕಾ ಕಾಫಿ ಕಟಾವು ನಡೆಯುತ್ತಿದೆ. ಆದರೆ ಮೋಡ ಹಾಗೂ ಮಳೆಯಿಂದಾಗಿ ಕಾಫಿ ಒಣಗಿಸಲು ಬಿಸಿಲು ಇಲ್ಲದೆ ಕಾಫಿ ಬೆಳೆಯೂ ನಾಶವಾಗುವ ಹಾಗೂ ಅಕಾಲಿಕ ಮಳೆಯಿಂದಾಗಿ ಕಾಫಿ ಗಿಡಗಳಲ್ಲಿ ಅಕಾಲಿಕವಾಗಿ ಹೂ ಕಟ್ಟುವ ಆತಂಕ ಕಾಫಿ ಬೆಳೆಗಾರರನ್ನು ಕಾಡುತ್ತಿದೆ. ಇನ್ನು ಭತ್ತ ಬೆಳೆದಿರುವ ರೈತರೂ ಅಕಾಲಿಕ ಮಳೆಗೆ ಆತಂಕಗೊಂಡಿದ್ದು, ಕಟಾವಿಗೆ ಬಂದಿರುವ ಭತ್ತದ ಪೈರುಗಳು ಮಳೆಗೆ ಸಿಕ್ಕಿ ಭತ್ತ ಉದುರುವ, ಬೀಜ ಮೊಳಕೆ ಒಡೆಯುವ ಹಾಗೂ ಪೈರುಗಳು ವಿವಿಧ ರೋಗಳಿಗೆ ತುತ್ತಾಗುವ ಭೀತಿಯಿಂದ ನಲುಗಿ ಹೋಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಮಲೆನಾಡು ನಿರಂತರವಾಗಿ ಅತಿವೃಷ್ಟಿಗೆ ತುತ್ತಾಗಿದೆ. ಭಾರೀ ಮಳೆಯಿಂದಾಗಿ ಕಾಫಿ, ಅಡಿಕೆ, ಕಾಳು ಮೆಣಸು ಹಾಗೂ ಭತ್ತದ ಗದ್ದೆಗಳು ವಿವಿದ ಕೊಳೆ ರೋಗಗಳಿಗೆ ತುತ್ತಾಗಿವೆ. ಅತಿವೃಷ್ಟಿಯಿಂದಾಗಿ ಸತತ ಬೆಳೆ ನಷ್ಟ ಅನುಭವಿಸಿ ಆದಾಯವನ್ನು ಕಳೆದುಕೊಂಡಿರುವ ರೈತರು, ಬೆಳೆಗಾರರು ಅಳಿದುಳಿದ ಬೆಳೆ ರಕ್ಷಣೆ ಮಾಡಿಕೊಳ್ಳಲು ಪರದಾಡುತ್ತಿದ್ದಾರೆ. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದಿರುವುದು ಒಂದೆಡೆಯಾದರೆ ಉಳಿದಿರುವ ಬೆಳೆಗಳನ್ನು ರಕ್ಷಣೆ ಮಾಡಲು, ಕೊಯ್ಲು, ಕಟಾವು, ಸಂಸ್ಕರಣೆ ಮಾಡಲು ಪ್ರತಿಕೂಲ ಹವಾಮಾನ, ಅಕಾಲಿಕ ಮಳೆ ಅಡ್ಡಗಾಲು ಹಾಕಿರುವುದು ಮಲೆನಾಡಿನ ರೈತರ ಬದುಕನ್ನು ಹೈರಾಣಾಗಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X