Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ಐಆರ್...

ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು: ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Dec 2019 7:29 PM IST
share
ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು: ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಬೆಂಗಳೂರು, ಡಿ.2: ರಾಜ್ಯದ ಹದಿನೈದು ಕ್ಷೇತ್ರಗಳ ಉಪಚುನಾವಣೆಗೆ ಡಿ.5ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಬಹಿರಂಗ ಪ್ರಚಾರಕ್ಕೆ ನಾಳೆ(ಡಿ.3) ಸಂಜೆ 6 ಗಂಟೆಗೆ ತೆರೆಬೀಳಲಿದೆ. ಡಿ.4ರಂದು ಅಭ್ಯರ್ಥಿಗಳು ಮನೆ-ಮನೆಗೆ ತೆರಳಿ ಮತಯಾಚನೆ ಮಾಡಲು ಅವಕಾಶವಿದೆ. ಮತದಾನ ಆರಂಭಕ್ಕೂ 48 ಗಂಟೆ ಮೊದಲು ಮತಯಾಚನೆ ಕೊನೆಗೊಳಿಸಬೇಕು ಎಂದು ಚುನಾವಣಾ ಆಯೋಗದ ಸೂಚನೆ ನೀಡಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಸೋಮವಾರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.11ರಿಂದ ಆರಂಭವಾದ ಉಪಚುನಾವಣಾ ಪ್ರಕ್ರಿಯೆ, ಕಳೆದ ಹತ್ತು ದಿನಗಳಲ್ಲಿ ಬಿರುಸು ಪಡೆದಿತ್ತು. ಪ್ರಮುಖ ಎದುರಾಳಿಗಳಾದ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್, ಜೆಡಿಎಸ್ ಘಟಾನುಘಟಿ ಮುಖಂಡರು ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ.

ಮತದಾರರಲ್ಲದವರು ಡಿ.3ರ ಸಂಜೆ 6ರ ಬಳಿಕ ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಕ್ಷೇತ್ರದಿಂದ ಹೊರಗೆ ಕಳುಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಟೇಲ್, ವಸತಿ ಗೃಹ, ಪಕ್ಷದ ಕಚೇರಿಗಳ ಮೇಲೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ನಿಗಾ ಇಡಲಿದ್ದಾರೆ. ಉಚಿತ ಊಟ, ವಸತಿ ಹಾಗೂ ವಾಹನದ ವ್ಯವಸ್ಥೆ ಕಲ್ಪಿಸಿ ಆಮಿಷವೊಡ್ಡಿದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಸಂಜೀವ್ ಕುಮಾರ್ ಎಚ್ಚರಿಸಿದರು.

ಮತದಾನದ ಮುನ್ನಾದಿನ ಕ್ಷೇತ್ರದಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ. ಐವರಿಗಿಂತ ಹೆಚ್ಚಿನ ಜನ ಗುಂಪುಗೂಡುವಂತಿಲ್ಲ. ಮನೆಮನೆಗೆ ತೆರಳಿ ಮತಯಾಚನೆ ಮಾಡುವವರು ನಿಯಮ ಪಾಲಿಸುವುದು ಕಡ್ಡಾಯ. ಮೆರವಣಿಗೆ, ಜಾಥಾಗಳಿಗೆ ಅವಕಾಶವಿಲ್ಲ. ಧ್ವನಿವರ್ಧಕ ಬಳಸಲು ಜಿಲ್ಲಾಡಳಿತ ಅನುಮತಿ ನೀಡುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ವಿನಾಯಿತಿ ಸಿಗಲಿದೆ ಎಂದರು.

ಲಂಚ, ಅನುಚಿತ ವರ್ತನೆ, ಮತದಾರರ ಮೇಲೆ ಪ್ರಭಾವ ಬೀರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವ್ಯಕ್ತಿಗತ ಟೀಕೆ ಮಾಡುವಂತಿಲ್ಲ. ಮತಗಟ್ಟೆಯ ನೂರು ಮೀಟರ್ ಅಂತರದೊಳಗೆ ಚುನಾವಣಾ ಪ್ರಚಾರ ಕೈಗೊಳ್ಳುವಂತಿಲ್ಲ ಎಂಬ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತ್ತೀಚೆಗೆ ಚುನಾವಣಾ ಬಹಿರಂಗ ಪ್ರಚಾರದ ವೇಳೆ ‘ಲಿಂಗಾಯತ ಮತಗಳು ಬೇರೆ ಕಡೆ ಹೋಗಬಾರದು’ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರತಿಪಕ್ಷಗಳು ನೀಡಿದ್ದ ದೂರನ್ನು ಸ್ವೀಕರಿಸಿದ್ದು, ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ

-ಸಂಜೀವ್ ಕುಮಾರ್, ಮುಖ್ಯ ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X