Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ತಂದೆ ಅಸಾಧಾರಣ ಧೈರ್ಯಶಾಲಿ ಆದರೆ…:...

ನನ್ನ ತಂದೆ ಅಸಾಧಾರಣ ಧೈರ್ಯಶಾಲಿ ಆದರೆ…: ಕೇಂದ್ರವನ್ನು ಟೀಕಿಸಿದ ರಾಹುಲ್ ಬಜಾಜ್ ಕುರಿತು ಪುತ್ರ ರಾಜೀವ್

ವಾರ್ತಾಭಾರತಿವಾರ್ತಾಭಾರತಿ2 Dec 2019 10:54 PM IST
share
ನನ್ನ ತಂದೆ ಅಸಾಧಾರಣ ಧೈರ್ಯಶಾಲಿ ಆದರೆ…: ಕೇಂದ್ರವನ್ನು ಟೀಕಿಸಿದ ರಾಹುಲ್ ಬಜಾಜ್ ಕುರಿತು ಪುತ್ರ ರಾಜೀವ್

 ಹೊಸದಿಲ್ಲಿ,ನ.22: ಮೋದಿ ಸರಕಾರದ ವಿರುದ್ಧ ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಅಸಮಾಧಾನ ವ್ಯಕ್ತಪಡಿಸಿ, ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರ ಪುತ್ರ ರಾಜೀವ್ ಬಜಾಜ್ ಅವರು, ‘ನನ್ನ ತಂದೆ ಅಸಾಧಾರಣ ಧೈರ್ಯಶಾಲಿ’ ಎಂದು ಬಣ್ಣಿಸಿದ್ದಾರೆ. ‘‘ಆದರೆ ಅವರೊಂದಿಗೆ ಧ್ವನಿಗೂಡಿಸಲು ಉದ್ಯಮರಂಗದ ಯಾರೂ ಮುಂದೆ ಬರುತ್ತಿಲ್ಲ ಹಾಗೂ ಅವರು ತಮಗೆ ಅನುಕೂಲಕರವಾಗುವಂತೆ ಬದಿಯಲ್ಲಿದ್ದುಕೊಂಡು ಹುರಿದುಂಬಿಸುತ್ತಿರುತ್ತಾರೆ’’ ಎಂದವರು ಬೇಸರ ವ್ಯಕ್ತಪಡಿಸಿದ್ದಾರೆ

ರಾಹುಲ್ ಬಜಾಜ್ ಅವರು ಶನಿವಾರ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ದೇಶದಲ್ಲಿ ಪ್ರಸಕ್ತ ಭೀತಿಯ ವಾತಾವರಣವಿದ್ದು, ಜನರು ಸರಕಾರವನ್ನು ಟೀಕಿಸಲು ಭಯಪಡುತ್ತಿದ್ದಾರೆ ಎಂದಿದ್ದರು. ಸರಕಾರವು ಯಾವುದೇ ಟೀಕೆಯನ್ನು ಒಪ್ಪಿಕೊಳ್ಳುತ್ತದೆಯೆಂಬ ಆತ್ಮವಿಶ್ವಾಸದ ಕೊರತೆ ಭಾರತೀಯ ಉದ್ಯಮಪತಿಗಳನ್ನು ಕಾಡುತ್ತಿದೆ ಎಂದು ಹೇಳಿದ್ದರು.

ಇಕನಾಮಿಕ್ ಟೈಮ್ಸ್ ಪತ್ರಿಕೆಗೆ ಇಂದು ನೀಡಿದ ಸಂದರ್ಶನದಲ್ಲಿ ರಾಜೀವ್ ಬಜಾಜ್ ಅವರು, ತನ್ನ ತಂದೆಯು ಅವರ ಮನಸ್ಸಿನಲ್ಲಿದ್ದುದನ್ನು ಹೇಳುವುದಕ್ಕೆ ಯಾವತ್ತೂ ಹಿಂಜರಿಯುತ್ತಿರಲಿಲ್ಲವೆಂದು ಪ್ರಶಂಸಿಸಿದ್ದಾರೆ. ಆದರೆ ‘‘ ಸೂಕ್ಷ್ಮವಾದ ಮತ್ತು ವಸ್ತುನಿಷ್ಠ’ ವಿಷಯವನ್ನು ಅವರು ಸೂಕ್ತವಾದ ವೇದಿಕೆಯಲ್ಲಿ ಎತ್ತಿದ್ದಾರೆಯೇ ಎಂಬ ಬಗ್ಗೆ ತನಗೆ ಖಾತರಿಯಿಲ್ಲವೆಂದು ರಾಜೀವ್ ಹೇಳಿದ್ದಾರೆ.

‘‘ನನ್ನ ತಂದೆ ಇಂತಹ ಅವಕಾಶ ದೊರೆತಾಗ ಅದನ್ನು ಸಂಭ್ರಮಿಸುತ್ತಾರೆ. ಆದ ಕಾರ್ಪೋರೇಟ್ ವಲಯದ ಸಾಧಕರ ಸಾಧನೆಯನ್ನು ಸಂಭ್ರಮಿಸುವಂತಹ ಸಾರ್ವಜನಿಕ ಸಮಾರಂಭದಲ್ಲಿ ಇಂತಹ ಸಂವೇದನಕಾರಿ ವಿಷಯವನ್ನು ಪ್ರಸ್ತಾವಿಸುವುದು ಔಚಿತ್ಯಪೂರ್ಣವೇ ಎಂಬುದು ನನಗೆ ಖಾತರಿಯಿಲ್ಲ’’ ಎಂದವರು ಹೇಳಿದ್ದಾರೆ.

ತನ್ನ ತಂದೆಯ ದಿಟ್ಟತನವನ್ನು ರಾಜೀವ್ ಬಜಾಜ್ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ ಆದರೆ, ‘ಧೈರ್ಯವೆಂಬುದು ಕೆಲವೊಮ್ಮೆ ಭಂಡತನವೂ ಆದಾಗ ಬದುಕು ಕಠಿಣವಾಗಬಹುದು’ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ.

ತನಗೆ ಕೇಂದ್ರ ಸರಕಾರದ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಹೆಚ್ಚಿನ ಒಡನಾಟವಿಲ್ಲವೆಂದು ಸ್ಪಷ್ಟಪಡಿಸಿದ ರಾಜೀವ್ ಬಜಾಜ್ ನಗದು ಅಮಾನ್ಯತೆಯ ನ್ನು ವಿರೋಧಿಸಿ 2017ರ ಫೆಬ್ರವರಿಯಲ್ಲಿ ಮಾತನಾಡಿದ್ದಕ್ಕಾಗಿ ತಾನು ತೀವ್ರವಾಗಿ ಟೀಕೆಗೊಳಗಾಗಿದ್ದೆ ಎಂದವರು ಹೇಳಿದ್ದಾರೆ.

ತನ್ನ ಹೇಳಿಕೆಯ ಬಗ್ಗೆ ಉದ್ಯಮರಂಗದ ಹಲವಾರು ಮಂದಿ ತೀವ್ರ ಆತಂಕವನ್ನು ವ್ಯಕ್ತಪಡಿಸಿದ್ದರಾದರೂ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ನೀತಿ ಆಯೋಗದ ಅಧ್ಕಕ್ಷ ಅಮಿತಾಭ್ ಕಾಂತ್ ಅವರು, ಕಳೆದ 8 ವರ್ಷಗಳಿಂದ ಕೇಂದ್ರದ ಒಪ್ಪಿಗೆಗೆ ಕಾಯುತ್ತಿದ್ದ ಬಜಾಜ್ ಆಟೋ ಸಂಸ್ಥೆಯ ವಾಹನ ಕ್ಯೂಟ್‌ಗೆ ತಕ್ಷಣವೇ ಅನುಮೋದನೆ ನೀಡಿದ್ದರು ಎಂದು ರಾಜೀವ್ ಬಜಾಜ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X