Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಮೆ ಬೇಟೆ : ಬಾಲಕ ಸಹಿತ ಮೂವರ ಬಂಧನ

ಆಮೆ ಬೇಟೆ : ಬಾಲಕ ಸಹಿತ ಮೂವರ ಬಂಧನ

ಆಲೂರಿನಲ್ಲಿ 35 ಜೀವಂತ, 15 ಸತ್ತ ಆಮೆಗಳ ಚಿಪ್ಪು, ಬೈಕ್ ವಶ

ವಾರ್ತಾಭಾರತಿವಾರ್ತಾಭಾರತಿ3 Dec 2019 7:35 PM IST
share
ಆಮೆ ಬೇಟೆ : ಬಾಲಕ ಸಹಿತ ಮೂವರ ಬಂಧನ

ಕೊಲ್ಲೂರು, ಡಿ.3: ಆಲೂರು ಗ್ರಾಮದ ಕಳಿ ಎಂಬಲ್ಲಿರುವ ನದಿಯಲ್ಲಿ ಡಿ. 3ರಂದು ಬೆಳಗಿನ ಜಾವ ಆಮೆ ಮತ್ತು ಕೂಮಾಗಳನ್ನು ಬೇಟೆಯಾಡುತ್ತಿದ್ದ ಆರೋಪದಲ್ಲಿ  ಮೂವರನ್ನು ಕೊಲ್ಲೂರು ವನ್ಯಜೀವಿ ಇಲಾಖೆ ತಂಡ ಬಂಧಿಸಿದೆ.

ಬಂಧಿತರನ್ನು ಕೊಲೂರು ಸೌರ್ಪಣಿಕ ಸ್ನಾನಘಟ್ಟದ ಬಳಿಯ ನಿವಾಸಿ ಶೀನ ಕೊರಗ (38), ಕೊಲ್ಲೂರು ಕಲ್ಯಾಣಿಗುಡ್ಡೆ ಚಂದ್ರ ಕೊರಗ(38) ಮತ್ತು ಅಪ್ರಾಪ್ತ ವಯಸ್ಸಿನ ಬಾಲಕ ಎಂದು ಗುರುತಿಸಲಾಗಿದೆ. ಇವರೆಲ್ಲರು ಸಂಬಂಧಿಕರಾ ಗಿದ್ದು, ಆಹಾರಕ್ಕಾಗಿ ಆಮೆಗಳನ್ನು ಬೇಟೆಯಾಡುತ್ತಿದ್ದರೆನ್ನಲಾಗಿದೆ.

ಬಂಧಿತರಿಂದ 9 ಆಮೆ, 26 ಕೂಮಗಳು (ಇಂಡಿಯನ್ ಬ್ಲಾಕ್ ಟರ್ಟಲ್) ಸೇರಿದಂತೆ ಒಟ್ಟು 35 ಜೀವಂತ ಆಮೆಗಳನ್ನು ಮತ್ತು ಮನೆಯಲ್ಲಿ ಸುಟ್ಟು ತಿಂದಿರುವ ಆಮೆಗಳ 15 ಚಿಪ್ಪುಗಳನ್ನು (ಶೀನ ಮನೆಯಿಂದ 10 ಮತ್ತು ಚಂದ್ರ ಮನೆಯಿಂದ 5 ಚಿಪ್ಪು) ಹಾಗೂ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿ. 2ರಂದು 15 ಆಮೆಗಳನ್ನು ಹಿಡಿದು ಮನೆಗೆ ಕೊಂಡೊಯ್ದು ತಿಂದಿದ್ದು, ಇಂದು ಕೂಡ ಅದೇ ನದಿಯಲ್ಲಿ ಆಮೆ ಹಿಡಿಯಲು ಬಂದಿದ್ದರು. ಈ ಸಂದರ್ಭ ಗಸ್ತು ತಿರುಗುತ್ತಿದ್ದ ಕೊಲ್ಲೂರು ವನ್ಯಜೀವಿ ಇಲಾಖೆಯ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಈ ಕೃತ್ಯ ಬೆಳಕಿಗೆ ಬಂತೆನ್ನಲಾಗಿದೆ.

ವಶಪಡಿಸಿಕೊಂಡಿರುವ ಆಮೆಯು ಶೆಡ್ಯೂಲ್ ಒಂದು ಭಾಗ ಎರಡರ ಪ್ರಕಾರ ಹೆಚ್ಚಿನ ಸಂರಕ್ಷಣೆ ಇರುವ ಪ್ರಾಣಿಯಾಗಿದ್ದು, ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯಿದೆ 1972 ಪ್ರಕಾರ ಕೇಸು ದಾಖಲಿಸಿ, ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಕೊಲ್ಲೂರು ವಲಯ ಅರಣ್ಯಾಧಿಕಾರಿ ರಾಘವೇಂದ್ರ ಗಣಪತಿ ನಾಯ್ಕಾ ನಿರ್ದೇಶನದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ದಯಾನಂದ ಕೆ., ಸಿದ್ದೇಶ್ವರ ಕುಂಬಾರ, ಅರಣ್ಯ ರಕ್ಷಕರಾದ ದೇವಿಪ್ರಸಾದ್, ವಿವೇಕ ಮತ್ತು ಇಡೂರು ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X