Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ಭಯಾ ಹಂತಕರಿಗೆ ಶೀಘ್ರ ಗಲ್ಲು, ಆದರೆ...

ನಿರ್ಭಯಾ ಹಂತಕರಿಗೆ ಶೀಘ್ರ ಗಲ್ಲು, ಆದರೆ ತಿಹಾರ ಜೈಲಿನಲ್ಲಿ ಈ ಪ್ರಮುಖ ವ್ಯಕ್ತಿಯೇ ಇಲ್ಲ !

ವಾರ್ತಾಭಾರತಿವಾರ್ತಾಭಾರತಿ3 Dec 2019 9:31 PM IST
share
ನಿರ್ಭಯಾ ಹಂತಕರಿಗೆ ಶೀಘ್ರ ಗಲ್ಲು, ಆದರೆ ತಿಹಾರ ಜೈಲಿನಲ್ಲಿ ಈ ಪ್ರಮುಖ ವ್ಯಕ್ತಿಯೇ ಇಲ್ಲ !

ಹೊಸದಿಲ್ಲಿ, ಡಿ.3: ರಾಷ್ಟ್ರವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಅತ್ಯಾಚಾರ-ಹತ್ಯೆ ಪ್ರಕರಣದ ಅಪರಾಧಿಗಳಿಗೆ ಜೀವವುಳಿಸಿಕೊಳ್ಳುವ ಎಲ್ಲ ಮಾರ್ಗಗಳೂ ಮುಚ್ಚಿಕೊಳ್ಳುತ್ತಿದ್ದು, ಅವರು ನೇಣುಗಂಬವನ್ನೇರುವ ಮುಹೂರ್ತ ಸಮೀಪಿಸುತ್ತಿದೆ. ಇದು ದಿಲ್ಲಿಯ ತಿಹಾರ ಜೈಲಿನ ಅಧಿಕಾರಿಗಳಿಗೆ ತಲೆನೋವನ್ನು ತಂದಿದೆ,ಏಕೆಂದರೆ ಜೈಲಿನಲ್ಲಿ 'ಹ್ಯಾಂಗ್ ಮ್ಯಾನ್ 'ಅಥವಾ ವಧಾಕಾರ ಅಥವಾ ಅಪರಾಧಿಗಳನ್ನು ಗಲ್ಲಿಗೇರಿಸುವ ಸಿಬ್ಬಂದಿಯೇ ಇಲ್ಲ.

ಇನ್ನೊಂದು ತಿಂಗಳಲ್ಲಿ ಅಪರಾಧಿಗಳನ್ನು ಗಲ್ಲಿಗೇರಿಸಬಹುದಾಗಿದ್ದು,ಜೈಲಿನ ಹಿರಿಯ ಅಧಿಕಾರಿಗಳು ಎಲ್ಲ ಆಯ್ಕೆಗಳನ್ನೂ ಪರಿಶೀಲಿಸುತ್ತಿದ್ದಾರೆ. ಅವರನ್ನು ಗಲ್ಲಿಗೇರಿಸಲು ಅನುಮತಿ ನೀಡಿ ನ್ಯಾಯಾಲಯವು ಕಪ್ಪು ವಾರಂಟ್ ಹೊರಡಿಸಿದ ಬಳಿಕ ಯಾವುದೇ ದಿನ ಅವರು ನೇಣುಗಂಬವನ್ನೇರಬಹುದು. ರಾಷ್ಟ್ರಪತಿಗಳು ಈ ಅಪರಾಧಿಗಳ ದಯಾಭಿಕ್ಷೆ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಕಪ್ಪು ವಾರಂಟ್ ಹೊರಬೀಳಲಿದೆ.

ಈ ಹಿಂದೆ ಸಂಸತ್ ದಾಳಿ ಪ್ರಕರಣದಲ್ಲಿ ಅಫ್ಝಲ್ ಗುರುವನ್ನು ಗಲ್ಲಿಗೇರಿಸುವಾಗಲೂ ತಿಹಾರ್ ಜೈಲು ಅಧಿಕಾರಿಗಳು ಇಂತಹುದೇ ಸಮಸ್ಯೆಗೆ ಸಿಲುಕಿದ್ದರು. ಅಂದು ರಾತ್ರಿ ಬೆಳಗಾಗುವುದರಲ್ಲಿ ತ್ವರಿತ ಬೆಳವಣಿಗೆಗಳು ನಡೆದಿದ್ದು,ನೇಣುಗಂಬದ ಸನ್ನೆಯನ್ನು ಎಳೆಯಲು ಜೈಲಿನ ಅಧಿಕಾರಿಯೋರ್ವರು ಕೊನೆಗೂ ಒಪ್ಪಿಕೊಂಡಿದ್ದರು.

 ಈಗ ಅಧಿಕಾರಿಗಳು ಇತರ ಜೈಲುಗಳಲ್ಲಿ ವಧಾಕಾರ ಇದ್ದಾನೆಯೇ ಎಂದು ಅನಧಿಕೃತವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕಾರ್ಯಕ್ಕೆ ಯಾರಾದರೂ ಸಿಗುತ್ತಾರೆಯೇ ಎಂದು ಅವರು ಉತ್ತರ ಪ್ರದೇಶದ ಕೆಲವು ಹಳ್ಳಿಗಳನ್ನೂ ಜಾಲಾಡುತ್ತಿದ್ದಾರೆ. ತಿಹಾರ ಜೈಲಿನ ಕೊನೆಯ ವಧಾಕಾರ ಇದೇ ಪ್ರದೇಶಕ್ಕೆ ಸೇರಿದವನಾಗಿದ್ದ.

ಈ ಬಾರಿ ಅಧಿಕಾರಿಗಳು ವಧಾಕಾರನನ್ನು ನೇಮಕ ಮಾಡಿಕೊಳ್ಳದೆ ಒಂದು ಸಲಕ್ಕಾಗಿ ಆತನ ಸೇವೆಯನ್ನು ಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳುವ ಹೆಚ್ಚಿನ ಸಾಧ್ಯತೆಯಿದೆ. ಅಪರೂಪದಲ್ಲಿಯೇ ಅಪರೂಪದ ಪ್ರಕರಣಗಳಲ್ಲಿ ಮರಣ ದಂಡನೆಯನ್ನು ವಿಧಿಸುವುದರಿಂದ ಗಲ್ಲಿಗೇರಿಸುವ ಸಂದರ್ಭಗಳು ತೀರ ಕಡಿಮೆ. ಹೀಗಾಗಿ ಪೂರ್ಣಕಾಲಿಕ ವಧಾಕಾರನನ್ನು ಹೊಂದುವುದು ಕಾರ್ಯಸಾಧ್ಯವಲ್ಲ ಮತ್ತು ಈ ಹುದ್ದೆಗೆ ಸೂಕ್ತ ವ್ಯಕ್ತಿಯನ್ನು ಹುಡುಕುವುದೂ ಕಷ್ಟ ಎಂದು ಜೈಲು ಅಧಿಕಾರಿಯೋರ್ವರು ಹೇಳಿದರು.

ಈ ಬಾರಿ ದೋಷಿಗಳ ಪೈಕಿ ವಿನಯ ಶರ್ಮಾ ಮಾತ್ರ ದಯಾಭಿಕ್ಷೆ ಅರ್ಜಿಯನ್ನು ಸಲ್ಲಿಸಿದ್ದಾನೆ. ಇತರ ದೋಷಿಗಳಾದ ಮುಕೇಶ,ಪವನ್ ಮತ್ತು ಅಕ್ಷಯ ಅರ್ಜಿಗಳನ್ನು ಸಲ್ಲಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X