Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಳಕೆಯಾಗದೇ ಹಿಂದುಳಿದ ಟ್ರಾನ್ಸಿಟ್...

ಬಳಕೆಯಾಗದೇ ಹಿಂದುಳಿದ ಟ್ರಾನ್ಸಿಟ್ ಹಾಸ್ಟೆಲ್‌ಗಳು !

ವಾರ್ತಾಭಾರತಿವಾರ್ತಾಭಾರತಿ3 Dec 2019 9:44 PM IST
share

ಬೆಂಗಳೂರು, ಡಿ.3: ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರು ವೃತ್ತಿಪರ ಕೋರ್ಸ್, ಉದ್ಯೋಗ ಸಂದರ್ಶನಕ್ಕೆ ಬಂದಾಗ ಉಳಿದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರಂಭಿಸಿರುವ ಟ್ರಾನ್ಸಿಟ್ ಹಾಸ್ಟೆಲ್‌ಗಳಲ್ಲಿ ಪ್ರವೇಶಪಡೆಯುವವರೇ ಇಲ್ಲದಂತಾಗಿದೆ.

ಇತ್ತೀಚಿನ ದಿನಗಳಲ್ಲಿ ಅಸುರಕ್ಷತೆಯಲ್ಲಿ ಹೆಣ್ಣು ಮಕ್ಕಳು ನಗರಗಳಲ್ಲಿ ಸಂಚರಿಸಲು ಸಂಕಷ್ಟಪಡುವಂತಾಗಿದೆ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ನಗರದ ವಿವಿಧ 12 ಕಡೆಗಳಲ್ಲಿ ಈ ಹಾಸ್ಟೆಲ್‌ಗಳನ್ನು ತೆರೆದಿದೆ. ಆದರೆ, ಇವುಗಳ ಸಮರ್ಪಕ ಬಳಕೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಉದ್ಯೋಗ ಸಂದರ್ಶನ, ವೃತಿಪರ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ವಿವಿಧ ಜಿಲ್ಲೆಗಳಿಂದ ಬರುವ ಯುವತಿಯರಿಗಾಗಿ ರಾಜಧಾನಿ ಬೆಂಗಳೂರಿನಲ್ಲಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ. ನಗರದಲ್ಲಿ ಖಾಸಗಿ ಪಿಜಿಗಳಲ್ಲಿ ಉಳಿಯಲು ಸಾವಿರಾರು ರೂ. ವೆಚ್ಚವಾಗುವುದರಿಂದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರು ಹಣ ಭರಿಸುವುದು ಕಷ್ಟ ಎಂದು ಈ ಹಾಸ್ಟೆಲ್ ವ್ಯವಸ್ಥೆ ನೀಡಲಾಗಿದೆ.

ಕಳೆದ ಆರು ತಿಂಗಳಲ್ಲಿ ಅಲ್ಲಿ ಪ್ರವೇಶ ಪಡೆದವರು ಕೇವಲ 24 ಮಂದಿ. ಅದರಲ್ಲೂ ಒಂಬತ್ತು ಹಾಸ್ಟೆಲ್‌ಗಳಲ್ಲಿ ಇದುವರೆಗೂ ಒಬ್ಬ ಮಹಿಳೆಯೂ ಪ್ರವೇಶ ಪಡೆದಿಲ್ಲ. ಒಂದು ಟ್ರಾನ್ಸಿಟ್ ಹಾಸ್ಟೆಲ್‌ನಲ್ಲಿ ಹತ್ತು ಮಂದಿ ಉಳಿದುಕೊಳ್ಳುವ ವ್ಯವಸ್ಥೆ ಇದ್ದು, ಊಟ, ಬಿಸಿ ನೀರು, ಭದ್ರತೆ ಸೇರಿ ಎಲ್ಲ ವ್ಯವಸ್ಥೆ ಇದೆ. ಆದರೆ, ಸೂಕ್ತ ಪ್ರಚಾರವಿಲ್ಲದೆ, ಎಲ್ಲವೂ ಖಾಲಿಯಿವೆ.

ದೊರೆಯುವ ಸೌಲಭ್ಯವೇನು?: ಎಲ್ಲ ವರ್ಗದ ಮಹಿಳೆಯರಿಗೂ ಮೂರು ದಿನಗಳು ತಂಗಲು ಅವಕಾಶ, ಉಚಿತ ಊಟ, ಉಪಾಹಾರ, ಟೀ, ಕಾಫಿ ಮತ್ತು ಸ್ನಾನಕ್ಕೆ ಬಿಸಿನೀರಿನ ಸೌಲಭ್ಯ, ವೈಯಕ್ತಿಕ ದಾಖಲಾತಿಗಳು ಹಾಗೂ ಇನ್ನಿತರೆ ವಸ್ತುಗಳನ್ನು ಇರಿಸಿಕೊಳ್ಳಲು ಭದ್ರತಾ ಕಪಾಟು ಸೌಲಭ್ಯ ದೊರೆಯಲಿದೆ. ಈ ಯೋಜನೆಯು ಒಂಟಿಯಾಗಿ ಬೆಂಗಳೂರಿಗೆ ಬರುವ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ.

ಹಾಸ್ಟೆಲ್‌ಗೆ ಸೇರುವುದು ಹೇಗೆ?: ಪ್ರವೇಶ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬೆಂಗಳೂರಿಗೆ ಬಂದು ಮಹಿಳೆಯರು ಹತ್ತಿರದ ವಸತಿ ಗೃಹಕ್ಕೆ ತೆರಳಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗೆ ಪರೀಕ್ಷೆಯ ಪ್ರವೇಶ ಪತ್ರದ ಪ್ರತಿ, ವಿಳಾಸ ಒಳಗೊಂಡ ಗುರುತಿನ ಚೀಟಿ, ಪೋಷಕರ ಫೋನ್ ನಂಬರ್, ವಿಳಾಸ ನೀಡಬೇಕು. ನೋಂದಣಿಯಾದ ನಂತರ ರೂಮ್ ದೊರೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X