Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯಾಯದಾನ ವ್ಯವಸ್ಥೆಯ ಮೌಲ್ಯ, ಘನತೆ...

ನ್ಯಾಯದಾನ ವ್ಯವಸ್ಥೆಯ ಮೌಲ್ಯ, ಘನತೆ ಕಾಪಾಡಲು ನ್ಯಾ. ಕಡ್ಲೂರು ಸತ್ಯನಾರಾಯಣಾಚಾರ್ಯ ಕರೆ

ವಕೀಲರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ3 Dec 2019 9:51 PM IST
share
ನ್ಯಾಯದಾನ ವ್ಯವಸ್ಥೆಯ ಮೌಲ್ಯ, ಘನತೆ ಕಾಪಾಡಲು ನ್ಯಾ. ಕಡ್ಲೂರು ಸತ್ಯನಾರಾಯಣಾಚಾರ್ಯ ಕರೆ

ಮಂಗಳೂರು, ಡಿ.3: ಪ್ರಜಾಸತ್ತಾತ್ಮಕ ಸಮಾಜದಲ್ಲಿ ನ್ಯಾಯದಾನ ಶ್ರೇಷ್ಠ ಪ್ರಕ್ರಿಯೆಯಾಗಿದೆ. ಇದರಲ್ಲಿ ನ್ಯಾಯವಾದಿಗಳ ಪಾತ್ರವೂ ಅತಿ ಮಹತ್ವದ್ದಾಗಿದೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜೊತೆಗೆ ಪವಿತ್ರವಾದ ವಕೀಲ ವೃತ್ತಿಯ ಮೌಲ್ಯ ಹಾಗೂ ಘನತೆಯನ್ನು ಎತ್ತಿಹಿಡಿಯಲು ವಕೀಲರ ಸಮುದಾಯ ವಿಶೇಷ ಆದ್ಯತೆ ನೀಡಬೇಕು ಎಂದು ದ.ಕ. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ ಕರೆ ನೀಡಿದರು.

ಮಂಗಳೂರು ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯ ಕಟ್ಟಡದ 6ನೇ ಅಂತಸ್ತಿನ ಸಭಾಭವನದಲ್ಲಿ ಮಂಗಳವಾರ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕವಾಗಿ ನ್ಯಾಯವಾದಿಗಳಿಗೆ ವಿಶೇಷ ಮಹತ್ವ ಮತ್ತು ಗೌರವ ಇದೆ. ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ನೆಲೆಯಲ್ಲಿ ವಕೀಲರು ವಿಶೇಷ ಪಾತ್ರ ನಿರ್ವಹಿಸುತ್ತಾರೆ. ಈ ಕಾರಣಕ್ಕೆ ವಕೀಲ ಸಮುದಾಯದ ಮೇಲೆ ಗುರುತರವಾದ ಜವಾಬ್ದಾರಿ ಇದೆ ಮತ್ತು ಇದರ ಅರಿವು ಪ್ರತಿಯೊಬ್ಬ ನ್ಯಾಯವಾದಿಯಲ್ಲೂ ಇರಬೇಕು ಎಂದು ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣ ಆಚಾರ್ಯ ಹೇಳಿದರು.

ನ್ಯಾಯಾಂಗ ವ್ಯವಸ್ಥೆ ಎಂಬುದು ನಿಂತ ನೀರಲ್ಲ. ಅದು ಚಲನಶೀಲವಾಗಿದೆ. ಈ ವ್ಯವಸ್ಥೆಯಲ್ಲಿ ಬೆಳವಣಿಗೆ ಆಗುವುದಿದ್ದರೂ ಅದರಲ್ಲಿ ವಕೀಲರ ಪಾತ್ರ ಅತ್ಯಂತ ಗಮನಾರ್ಹವಾಗಿರುತ್ತದೆ. ತಮ್ಮ ವೃತ್ತಿಗೆ ಯಾವುದೇ ಧಕ್ಕೆ ಬರದಂತೆ ನ್ಯಾಯದಾನದ ವ್ಯವಸ್ಥೆಯಲ್ಲಿ ಸಕಾರಾತ್ಮಕವಾಗಿ ಪಾಲ್ಗೊಂಡಾಗ ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಮೇಲಸ್ತರಕ್ಕೆ ಏರಬಲ್ಲುದು ಎಂದು ನ್ಯಾಯಾಧೀಶ ಕಡ್ಲೂರು ಅಭಿಪ್ರಾಯಪಟ್ಟರು.

‘ಪ್ರಜಾಪ್ರಭುತ್ವ ಭಾರತದಲ್ಲಿ ವಕೀಲರ ಪಾತ್ರ’ ಎಂಬ ವಿಚಾರದ ಕುರಿತು ಉಪನ್ಯಾಸ ನೀಡಿದ ಹಿರಿಯ ನ್ಯಾಯವಾದಿ ಜಿ.ಕೆ. ಪರಮೇಶ್ವರ ಜೊಯಿಸ ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ.

ವೈಜ್ಞಾನಿಕವಾಗಿಯೂ, ತಾಂತ್ರಿಕವಾಗಿಯೂ ನಡೆದಿರುವ ಪ್ರಗತಿ ನ್ಯಾಯಾಂಗ ವ್ಯವಸ್ಥೆಯಲ್ಲೂ ಬಂದಿದೆ. ಇದರಿಂದ ವಕೀಲರ ಕಾರ್ಯನಿರ್ವಹಣೆಯಲ್ಲೂ ಬದಲಾವಣೆ ಆಗಿದೆ. ಹೊಸ ತಂತ್ರಜ್ಞಾನಕ್ಕೆ ಒಗ್ಗಿಕೊಂಡ ಹಾಗೂ ಹೊಸ ಹೊಸ ಅನ್ವೇಷಣೆಗಳ ವೃತ್ತಿಬದುಕನ್ನು ನಡೆಸುವ ಯುವ ವಕೀಲರಿಗೆ ಇಲ್ಲಿ ವಿಫುಲವಾದ ಅವಕಾಶಗಳ ಬಾಗಿಲು ತೆರೆದಿದೆ ಎಂದು ಹೇಳಿದರು.

ಹಿರಿಯ ವಕೀಲ, ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಂ ಮಾತನಾಡಿ, ಮಂಗಳೂರು ವಕೀಲರ ಸಂಘಕ್ಕೆ ದೇಶದಲ್ಲಿ ಉನ್ನತ ಸ್ಥಾನಮಾನವಿದೆ. ಇಲ್ಲಿ ಕಾರ್ಯನಿರ್ವಹಿಸಿದ ಹಲವು ಖ್ಯಾತನಾಮ ವಕೀಲರು ದೇಶದ ಬೇರೆ ಬೇರೆ ಭಾಗದಲ್ಲಿ ಕರ್ತವ್ಯ ನಿರ್ವಹಿಸಿ ದೇಶದ ನ್ಯಾಯಾಂಗ ವ್ಯವಸ್ಥೆಗೆ ಅಪಾರ ಮೌಲ್ಯ ಘನತೆ, ಮತ್ತು ಗೌರವವನ್ನು ತಂದುಕೊಟ್ಟಿದ್ದಾರೆ. ಇದು ನಮಗೆ ಸದಾ ಹೆಮ್ಮೆಯ ವಿಷಯ ಎಂದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಿ.ಜಿನೇಂದ್ರ ಕುಮಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ವಂದಿಸಿದರು. ವಿಕ್ರಂ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X