Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರಗಳು ಹೆಚ್ಚುತ್ತಿದ್ದರೂ...

ಅತ್ಯಾಚಾರಗಳು ಹೆಚ್ಚುತ್ತಿದ್ದರೂ ಬಳಕೆಯಾಗದೆ ಧೂಳು ತಿನ್ನುತ್ತಿದೆ ನಿರ್ಭಯಾ ನಿಧಿ

ವಾರ್ತಾಭಾರತಿವಾರ್ತಾಭಾರತಿ3 Dec 2019 10:58 PM IST
share
ಅತ್ಯಾಚಾರಗಳು ಹೆಚ್ಚುತ್ತಿದ್ದರೂ ಬಳಕೆಯಾಗದೆ ಧೂಳು ತಿನ್ನುತ್ತಿದೆ ನಿರ್ಭಯಾ ನಿಧಿ

ಹೊಸದಿಲ್ಲಿ, ಡಿ.3: ತೆಲಂಗಾಣದಲ್ಲಿ 26ರ ಹರೆಯದ ಪಶುವೈದ್ಯೆಯ ಘೋರ ಅತ್ಯಾಚಾರ-ಹತ್ಯೆ ಘಟನೆಯ ವಿರುದ್ಧ ಹೆಚ್ಚುತ್ತಿರುವ ಆಕ್ರೋಶದ ನಡುವೆಯೇ ಐದು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ ಕೇಂದ್ರ ಗೃಹ ಸಚಿವಾಲಯದಿಂದ ತಮಗೆ ಮಂಜೂರು ಮಾಡಲಾದ ನಿರ್ಭಯಾ ನಿಧಿಯಲ್ಲಿ ಚಿಕ್ಕಾಸನ್ನೂ ಬಳಕೆ ಮಾಡಿಕೊಂಡಿಲ್ಲ ಎಂದು ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದೆ.

ನವಂಬರ್ 2019ಕ್ಕೆ ಇದ್ದಂತೆ ಅಂಕಿಸಂಖ್ಯೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸದನದಲ್ಲಿ ಮಂಡಿಸಿದ್ದು,ಗೃಹಸಚಿವಾಲಯವು ನಿರ್ಭಯಾ ನಿಧಿಯಡಿ ಮಹಿಳೆಯರ ಸುರಕ್ಷತೆಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಂಜೂರು ಮಾಡಿರುವ ಹಣದಲ್ಲಿ ಶೇ.91ಕ್ಕೂ ಹೆಚ್ಚಿನ ಮೊತ್ತ ಬಳಕೆಯೇ ಆಗಿಲ್ಲ. ಸಚಿವಾಲಯವು ಹಂಚಿಕೆ ಮಾಡಿದ್ದ 1,672 ಕೋ.ರೂ.ಗಳ ಪೈಕಿ ಕೇವಲ 147 ಕೋ.ರೂ.ಬಳಕೆಯಾಗಿದೆ.

ಈ ಪೈಕಿ 183 ಕೋ.ರೂ.ಗಳನ್ನು ಮಹಾರಾಷ್ಟ್ರ,ಮಣಿಪುರ,ಮೇಘಾಲಯ,ಸಿಕ್ಕಿಂ,ತ್ರಿಪುರಾ ಹಾಗೂ ದಮನ್ ಮತ್ತು ದಿಯುಗೆ ಮೀಸಲಿಡಲಾಗಿತ್ತು. ಈ ಹಣವು ಮಹಿಳೆಯರ ಸುರಕ್ಷತೆಗಾಗಿ ಕ್ರಮಗಳಿಗೆ ಬಳಕೆಯಾಗಬೇಕಿತ್ತು. ಆದರೆ ಅಷ್ಟೂ ಹಣ ಬಳಕೆಯಾಗದೇ ಹಾಗೆಯೇ ಉಳಿದುಕೊಂಡಿದೆ. ಮಹಾರಾಷ್ಟ್ರವೊಂದಕ್ಕೇ ಸುಮಾರು 103 ಕೋ.ರೂ.ಗಳನ್ನು ನೀಡಲಾಗಿತ್ತು. ಹೈದರಾಬಾದ್ ಬಳಿ ಪಶುವೈದ್ಯೆಯ ಅತ್ಯಾಚಾರ-ಹತ್ಯೆಯ ಬಳಿಕ ಪ್ರತಿಭಟನೆಗಳು ಮತ್ತು ರಾಜಕೀಯ ಕೆಸರೆರಚಾಟಕ್ಕೆ ಸಾಕ್ಷಿಯಾಗಿರುವ ತೆಲಂಗಾಣ ತನಗೆ ನೀಡಲಾಗಿದ್ದ 103 ಕೋ.ರೂ.ಗಳಲ್ಲಿ ಕೇವಲ 4.19 ಕೋ.ರೂ. (ಶೇ.4) ಬಳಸಿಕೊಂಡಿದ್ದರೆ, ಭಾರತದ ಅತ್ಯಾಚಾರಗಳ ರಾಜಧಾನಿಯಾಗಿರುವ ದಿಲ್ಲಿ ತನಗೆ ಮಂಜೂರಾಗಿದ್ದ 390 ಕೋ.ರೂ.ಗಳ ಕೇವಲ ಶೇ.5ರಷ್ಟನ್ನು ಮಾತ್ರ ಬಳಸಿದೆ.

ನಿಧಿ ಬಳಕೆಯಲ್ಲಿ ಹಿಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮತ್ತು ಕೇರಳಗಳೂ ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X