Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯೆಯ ಅತ್ಯಾಚಾರ, ಕೊಲೆಗೆ ಖಂಡನೆ:...

ವೈದ್ಯೆಯ ಅತ್ಯಾಚಾರ, ಕೊಲೆಗೆ ಖಂಡನೆ: ದಾವಣಗೆರೆಯಲ್ಲಿ ಎಐಎಂಎಸ್ಎಸ್, ಎಐಡಿಎಸ್ಒ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Dec 2019 11:58 PM IST
share
ವೈದ್ಯೆಯ ಅತ್ಯಾಚಾರ, ಕೊಲೆಗೆ ಖಂಡನೆ: ದಾವಣಗೆರೆಯಲ್ಲಿ ಎಐಎಂಎಸ್ಎಸ್, ಎಐಡಿಎಸ್ಒ ಪ್ರತಿಭಟನೆ

ದಾವಣಗೆರೆ, ಡಿ.3: ಹೈದರಬಾದ್ ನಲ್ಲಿ ನಡೆದ ಡಾ.ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್ ಆಶ್ರಯದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ಇಲ್ಲಿನ ಗಾಂಧಿವೃತ್ತದಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.  

ಈ ವೇಳೆ ಎಐಎಂಎಸ್‍ಎಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ ಕುಕ್ಕವಾಡ ಮಾತನಾಡಿ, ಸಮಾಜದಲ್ಲಿ ದಿನೇ ದಿನೇ ಇಂತಹ ಘಟನೆಗಳು ಹೆಚ್ಚಾಗುತ್ತವೆ. ಇದು ಸರ್ಕಾರಗಳ ಮತ್ತು ನ್ಯಾಯಾಲಯಗಳ ನಿರ್ಲಕ್ಷತನವನ್ನು ತೋರಿಸುತ್ತದೆ. ನಿರ್ಭಯಾ ಘಟನೆ ನಡೆದ ನಂತರ ಜಸ್ಟಿಸ್ ವರ್ಮಾ ಆಯೋಗ ಶಿಫಾರಸ್ಸು ಮಾಡಿದ ಸಲಹೆಗಳನ್ನು ಇದುವರೆಗೂ ಜಾರಿಗೊಳಿಸಿಲ್ಲ, ಅಪರಾಧಿಗಳಿಗೆ ಶಿಕ್ಷೆಯಾಗುತ್ತಿಲ್ಲ, ಇಂತಹ ಘಟನೆಗಳಿಂದ ಸಮಾಜ ಇನ್ನು ಅದೋಗತಿಗೆ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿವೈಓನ ಜಿಲ್ಲಾ ಉಪಾಧ್ಯಕ್ಷ ಮಧುತೋಗಲೇರಿ ಮಾತನಾಡಿ, ನಮ್ಮ ದೇಶದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ, ಅತ್ಯಾಚಾರ ನಡೆದ ನಂತರ ಆರೋಪಿಗಳಿಗೆ ರಕ್ಷಣೆ ಸಿಗುತ್ತಿದೆ. ಇದು ನಮ್ಮ ದೇಶದ ದುರಂತ. ಇಂತಹ ವ್ಯವಸ್ಥೆಯಲ್ಲಿ ನಮ್ಮ ಹೆಣ್ಣು ಮಕ್ಕಳು ಬದುಕುತ್ತಿದ್ದಾರೆ. ಕೊಳೆತ ಸಮಾಜವನ್ನು ಕಿತ್ತು ಹಾಕಿ ಮಹಿಳೆಯರನ್ನು ಗೌರವಿಸುವ ಸಮಾಜವನ್ನು ನಾವೆಲ್ಲರು ಸೇರಿ ಕಟ್ಟಬೇಕಿದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಭಾರತಿ ಮಾತನಾಡಿ, ಯುವಕರ ನೈತಿಕ ಬೆನ್ನಲುಬನ್ನು ಮುರಿಯುವ ಉದ್ದೇಶದಿಂದ ಸರ್ಕಾರಗಳು ಅಶ್ಲೀಲ ಸಿನಿಮಾ, ಸಾಹಿತ್ಯ ಹರಿಬಿಡುತ್ತವೆ. ಇಂತಹ ಘಟನೆಗಳಿಗೆ ಸರ್ಕಾರಗಳೇ ನೇರಹೊಣೆ, ಚುನಾವಣಾ ರಾಜಕೀಯದಲ್ಲಿ ಮುಳುಗಿರುವ ಸರ್ಕಾರಗಳು ಮಹಿಳೆಯರಿಗೆ ಭದ್ರತೆ ನೀಡುವಲ್ಲಿ ವಿಫಲವಾಗಿವೆ ಎಂದರು.

ಪಿ.ಪರಶುರಾಮ್, ಅಶ್ವಿನಿ, ಸೌಮ್ಯ, ನಾಗಜ್ಯೋತಿ, ಪೂಜಾ, ತಿಪ್ಪೇಸ್ವಾಮಿ ಬನಶ್ರೀ, ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X