85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಎಚ್.ಎಸ್.ವೆಂಕಟೇಶ್ಮೂರ್ತಿ ಆಯ್ಕೆ

ಬೆಂಗಳೂರು, ಡಿ.4: ಕಲಬುರಗಿಯಲ್ಲಿ 2020 ಫೆಬ್ರವರಿ 5, 6 ಮತ್ತು 7ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ಸಾಹಿತಿ ಎಚ್.ಎಸ್.ವೆಂಕಟೇಶ್ಮೂರ್ತಿ ಆಯ್ಕೆಯಾಗಿದ್ದಾರೆ.
ಎಚ್ಎಸ್ವಿ ಎಂದೇ ಖ್ಯಾತರಾಗಿರುವ ಎಚ್.ಎಸ್.ವೆಂಕಟೇಶ ಮೂರ್ತಿ ಅವರು ಹುಟ್ಟೂರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗ್ಗೆರೆ. ಅವರು ಕವಿತೆ, ನಾಟಕ, ಕಾದಂಬರಿ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.
Next Story





