Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಯಿಘರ್ ಮುಸ್ಲಿಮರ ದಮನ ಖಂಡಿಸಿ ಅಮೆರಿಕ...

ಉಯಿಘರ್ ಮುಸ್ಲಿಮರ ದಮನ ಖಂಡಿಸಿ ಅಮೆರಿಕ ಹೌಸ್‌ನಿಂದ ಮಸೂದೆ ಅಂಗೀಕಾರ

ಚೀನಾ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ4 Dec 2019 7:30 PM IST
share
ಉಯಿಘರ್ ಮುಸ್ಲಿಮರ ದಮನ ಖಂಡಿಸಿ ಅಮೆರಿಕ ಹೌಸ್‌ನಿಂದ ಮಸೂದೆ ಅಂಗೀಕಾರ

ವಾಶಿಂಗ್ಟನ್, ಡಿ. 4: ಅಲ್ಪಸಂಖ್ಯಾತ ಉಯಿಘರ್ ಮುಸ್ಲಿಮರನ್ನು ಚೀನಾ ನಡೆಸಿಕೊಳ್ಳುತ್ತಿರುವ ವಿಚಾರದಲ್ಲಿ, ಆ ದೇಶದೊಂದಿಗೆ ಕಠಿಣವಾಗಿ ವ್ಯವಹರಿಸಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರಿಗೆ ಕರೆ ನೀಡುವ ಮಸೂದೆಯೊಂದನ್ನು ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮಂಗಳವಾರ ಅಗಾಧ ಬಹುಮತದಿಂದ ಅನುಮೋದಿಸಿದೆ.

ಈ ವಿಷಯದಲ್ಲಿ ಚೀನಾದ ಹಿರಿಯ ಅಧಿಕಾರಿಗಳ ವಿರುದ್ಧ ದಿಗ್ಬಂಧನಗಳನ್ನು ವಿಧಿಸುವಂತೆ ಮಸೂದೆಯು ಅಮೆರಿಕ ಅಧ್ಯಕ್ಷರನ್ನು ಒತ್ತಾಯಿಸುತ್ತದೆ.

‘ಉಯಿಘರ್ ಆ್ಯಕ್ಟ್ ಆಫ್ 2019’ ಮಸೂದೆಯು, ಪಶ್ಚಿಮದ ಕ್ಸಿನ್‌ಜಿಯಾಂಗ್ ವಲಯದಲ್ಲಿ ಚೀನಾ ನಡೆಸಿದ ದಮನ ಕಾರ್ಯಾಚರಣೆಯ ವೇಳೆ ನಡೆದಿದೆಯೆನ್ನಲಾದ ‘ಸಾರಾಸಗಟು ಮಾನವಹಕ್ಕು ಉಲ್ಲಂಘನೆಗಳನ್ನು’ ಖಂಡಿಸುತ್ತದೆ. ಈ ವಲಯದಲ್ಲಿ ಸುಮಾರು 10 ಲಕ್ಷ ಉಯಿಘರ್ ಮುಸ್ಲಿಮರು ಹಾಗೂ ಇತರ ಮುಸ್ಲಿಮ್ ಪಂಗಡಗಳ ಜನರನ್ನು ‘ಮರು-ಶಿಕ್ಷಣ ಶಿಬಿರ’ಗಳೆನ್ನಲಾದ ಶಿಬಿರಗಳಲ್ಲಿ ಕೂಡಿ ಹಾಕಲಾಗಿದೆ.

407-1 ಮತಗಳ ಅಗಾಧ ಅಂತರದಿಂದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಅಂಗೀಕಾರಗೊಂಡ ಮಸೂದೆಯು, ಸೆಪ್ಟಂಬರ್‌ನಲ್ಲಿ ಸೆನೆಟ್‌ನಲ್ಲಿ ಅಂಗೀಕಾರಗೊಂಡ ಮಸೂದೆಯ ಸುಧಾರಿತ ಹಾಗೂ ಬಲಿಷ್ಠ ರೂಪವಾಗಿದೆ. ಈ ಮಸೂದೆಯ ಎರಡು ರೂಪಗಳನ್ನು ಸಮೀಕರಿಸಿ ಒಂದಾಗಿ ಮಾಡಿ ಅಧ್ಯಕ್ಷರ ಅಂಕಿತಕ್ಕಾಗಿ ಕಳುಹಿಸಲಾಗುವುದು.

ಅಮೆರಿಕ ಸಂಸತ್ತು ಈಗಾಗಲೇ ಹಾಂಕಾಂಗ್ ಪ್ರಜಾಪ್ರಭುತ್ವ ಪರ ಹೋರಾಟವನ್ನು ಬೆಂಬಲಿಸಿ ಮಸೂದೆಯನ್ನು ಅಂಗೀಕರಿಸಿದೆ ಹಾಗೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅದಕ್ಕೆ ಕಳೆದ ವಾರ ಸಹಿ ಹಾಕಿದ್ದು ಈಗ ಕಾನೂನಾಗಿದೆ. ಹಾಂಕಾಂಗ್ ಮಸೂದೆಗೆ ಚೀನಾ ಈಗಾಗಲೇ ಪ್ರಬಲ ಪ್ರತಿಭಟನೆ ಸಲ್ಲಿಸಿದೆ ಹಾಗೂ ಪ್ರತೀಕಾರದ ಕ್ರಮಗಳನ್ನೂ ಘೋಷಿಸಿದೆ.

ಸಾಮೂಹಿಕ, ಸ್ವೇಚ್ಛಾಚಾರದ ಬಂಧನಕ್ಕೆ ಖಂಡನೆ

ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅಂಗೀಕರಿಸಿದ ಮಸೂದೆಯು ಉಯಿಘರ್ ಮುಸ್ಲಿಮರ ಸಾಮೂಹಿಕ ಹಾಗೂ ಸ್ವೇಚ್ಛಾಚಾರದ ಬಂಧನವನ್ನು ಖಂಡಿಸುತ್ತದೆ ಹಾಗೂ ಅವರನ್ನು ಕೂಡಿಹಾಕಲಾದ ತಥಾಕಥಿತ ‘ಮರುಶಿಕ್ಷಣ ಶಿಬಿರ’ಗಳನ್ನು ಮುಚ್ಚುವಂತೆ ಆಗ್ರಹಿಸುತ್ತದೆ.

ಅದೇ ವೇಳೆ, ಚೀನಾದ ಉಯಿಘರ್ ನೀತಿಯ ಹಿಂದೆ ಇರುವ ಅಧಿಕಾರಿಗಳು, ಅದರಲ್ಲೂ ಮುಖ್ಯವಾಗಿ ಕ್ಸಿನ್‌ಜಿಯಾಂಗ್ ವಲಯದ ಕಮ್ಯುನಿಸ್ಟ್ ಪಕ್ಷದ ಮುಖ್ಯಸ್ಥ ಚೆನ್ ಕ್ವಾಂಗುವೊ ವಿರುದ್ಧ ದಿಗ್ಬಂಧನಗಳನ್ನು ವಿಧಿಸುವಂತೆ ಮಸೂದೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು ಒತ್ತಾಯಿಸುತ್ತದೆ.

ಅಮೆರಿಕ ಬೆಲೆ ತೆರಲೇಬೇಕು: ಚೀನಾ

ಉಯಿಘರ್ ಮುಸ್ಲಿಮರ ವಿರುದ್ಧ ಚೀನಾ ನಡೆಸುತ್ತಿದೆಯೆನ್ನಲಾದ ದಮನ ಕಾರ್ಯಾಚರಣೆಗೆ ಪ್ರತಿಯಾಗಿ ಚೀನಾದ ಉನ್ನತ ಅಧಿಕಾರಿಗಳ ವಿರುದ್ಧ ದಿಗ್ಬಂಧನ ವಿಧಿಸುವಂತೆ ಕರೆ ನೀಡುವ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ಮಸೂದೆಗೆ ಬುಧವಾರ ಕೋಪದಿಂದ ಪ್ರತಿಕ್ರಿಯಿಸಿರುವ ಚೀನಾ, ಇದಕ್ಕೆ ಅಮೆರಿಕ ಬೆಲೆ ತೆರಲೇಬೇಕು ಎಂದಿದೆ.

‘‘ಎಲ್ಲ ತಪ್ಪು ಕೃತ್ಯಗಳು ಮತ್ತು ಮಾತುಗಳಿಗೆ ಸರಿಯಾದ ಬೆಲೆ ತೆರಲೇಬೇಕು’’ ಎಂದು ಚೀನಾ ವಿದೇಶ ಸಚಿವಾಲಯದ ವಕ್ತಾರೆ ಹುವಾ ಚುನ್‌ಯಿಂಗ್ ಪತ್ರಿಕಾಗೋಷ್ಠಿಯೊಂದರಲ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X