ಮೋದಿ, ಶಾ ಹಾಗೂ ನನ್ನ ವಿರುದ್ಧ ಚಿದಂಬರಂ ಸುಳ್ಳು ಪ್ರಕರಣ ದಾಖಲಿಸಿದ್ದರು: ಗಡ್ಕರಿ
Photo: PTI
ರಾಂಚಿ, ಡಿ.4: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ಪಡೆದಿರುವ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ವಿರುದ್ಧದ ಆರೋಪವನ್ನು ಸಾಬೀತುಪಡಿಸಲು ಸೂಕ್ತ ಪುರಾವೆಗಳಿವೆ. ನ್ಯಾಯಾಲಯ ಈ ಬಗ್ಗೆ ನಿರ್ಧರಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಗೃಹ ಸಚಿವರಾಗಿದ್ದ ಪಿ ಚಿದಂಬರಂ, ನರೇಂದ್ರ ಮೋದಿ, ಅಮಿತ್ ಶಾ ಹಾಗೂ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದರು. ಆದರೆ ನಾವು ನಿರ್ದೋಷಿಗಳೆಂದು ಬಳಿಕ ಸಾಬೀತಾಯಿತು ಎಂದು ಗಡ್ಕರಿ ಹೇಳಿದ್ದಾರೆ.
ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ನಾವು ಸೇಡಿನ ರಾಜಕೀಯ ಮಾಡುತ್ತಿಲ್ಲ. ಚಿದಂಬರಂ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ. ಪ್ರಕರಣ ಈಗ ವಿಚಾರಣೆ ಹಂತದಲ್ಲಿದ್ದು ನ್ಯಾಯಾಲಯ ಶೀಘ್ರ ತೀರ್ಪು ನೀಡಲಿದೆ ಎಂದು ಹೇಳಿದ್ದಾರೆ.
Next Story