Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ದರ್ಗಾ ಬಗ್ಗೆ ವಕ್ಫ್ ಇಲಾಖೆಗೆ...

ಉಳ್ಳಾಲ ದರ್ಗಾ ಬಗ್ಗೆ ವಕ್ಫ್ ಇಲಾಖೆಗೆ ಸುಳ್ಳು ಮಾಹಿತಿ ನೀಡಲಾಗಿತ್ತು : ಅಬ್ದುಲ್ ರಶೀದ್

ವಾರ್ತಾಭಾರತಿವಾರ್ತಾಭಾರತಿ5 Dec 2019 7:08 PM IST
share
ಉಳ್ಳಾಲ ದರ್ಗಾ ಬಗ್ಗೆ ವಕ್ಫ್ ಇಲಾಖೆಗೆ ಸುಳ್ಳು ಮಾಹಿತಿ ನೀಡಲಾಗಿತ್ತು : ಅಬ್ದುಲ್ ರಶೀದ್

ಮಂಗಳೂರು : ಉಳ್ಳಾಲ ದರ್ಗಾ ಆಡಳಿತ ಸಮಿತಿ ಕಳೆದ ಮೂರುವರೆ ವರ್ಷದಿಂದ ಉತ್ತಮ ಆಡಳಿತ ನೀಡಿದರೂ ಕೂಡಾ ವಿರೋಧಿ ಬಣ ವಕ್ಫ್ ಇಲಾಖೆಗೆ ಸುಳ್ಳು ಮಾಹಿತಿ ನೀಡಿ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಉಳ್ಳಾಲ ದರ್ಗಾಕ್ಕೆ ಆಡಳಿತಾಧಿಕಾರಿ ಯಾಗಿ ಇಬ್ರಾಹಿಂ ಗೂನಡ್ಕ ಅವರನ್ನು ನೇಮಕ ಮಾಡಲಾಗಿತ್ತು ಎಂದು ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದರು.

ಅವರು ಗುರುವಾರ ದರ್ಗಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಉಳ್ಳಾಲ ದರ್ಗಾದಲ್ಲಿ 18 ವಿದ್ಯಾಸಂಸ್ಥೆಗಳು ಕಾರ್ಯಾಚರಿಸುತ್ತಿದ್ದು, ಅರೆಬಿಕ್ ಟ್ರಸ್ಟ್ ನಡಿಯಲ್ಲಿ 300 ವಿದ್ಯಾರ್ಥಿಗಳು ದರ್ಗಾ ಕ್ಯಾಂಪಸ್ ನಲ್ಲಿ ಉಚಿತವಾಗಿ ಅರೆಬಿಕ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರಿಗೆ ವಸತಿ, ದೈನಂದಿನ ಆಹಾರ ಉಚಿತವಾಗಿ ನೀಡಲಾಗುತ್ತಿದೆ. ದರ್ಗಾದಲ್ಲಿ ಇಬ್ರಾಹಿಂ ಹಾಜಿ ಅಧ್ಯಕ್ಷರಾಗಿದ್ದ ವೇಳೆ ದರ್ಗಾ ಸಾರ್ವಜನಿಕ ಸಂಸ್ಥೆ ಎಂಬ ಕಾರಣಕ್ಕೆ ಮಾಸಿಕ 2,500 ರೂ. ಸೆಸ್ ವಿಧಿಸಿತ್ತು. ಕ್ರಮೇಣ 5 ಸಾವಿರಕ್ಕೇರಿತ್ತು. ಈಗ ಅದರ ಮೌಲ್ಯ 10 ಸಾವಿರಕ್ಕೆ ತಲುಪಿದೆ. ಪ್ರಸ್ತುತ ಹತ್ತು ಸಾವಿರ ರೂ. ತಿಂಗಳಿಗೆ ದರ್ಗಾ ಸೆಸ್ ಪಾವತಿಸುತ್ತಿದೆ. ನಾವು ಅಧಿಕಾರ ವಹಿಸಿಕೊಂಡ ಬಳಿಕ ವಿರೋಧಿ ಬಣ 1.36 ಕೋಟಿ ರೂ. ಸೆಸ್ ಬಾಕಿ ಇಟ್ಟಿದೆ ಎಂದು ವಕ್ಫ್ ಇಲಾಖೆಗೆ ತಪ್ಪು ಮಾಹಿತಿ ನೀಡಿತ್ತು.  ಪ್ರಸಕ್ತ  ಸೆಸ್‍ಗೆ ಬಾಕಿ ಇರುವ ಹಣದ ಮೊತ್ತ 1.70 ಕೋಟಿಗೆ ಏರಿಸಿದ್ದು ಮಾತ್ರವಲ್ಲದೆ ಗೊಂದಲ ನಿವಾರಣೆಯಾಗಬೇಕು ಎಂಬ ಉದ್ದೇಶದಿಂದ ರಾಜ್ಯ ವಕ್ಫ್ ಆಡಳಿತಾಧಿಕಾರಿ ನೇಮಕ ಮಾಡಿತು. ಈ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಮಧ್ಯೆ  ಆಡಳಿತಾಧಿಕಾರಿ ನೇಮಕ ಮಾಡಿರುವುದು ಸರಿಯಲ್ಲ. ವಕ್ಫ್ ಇಲಾಖೆಗೆ ತಿಳುವಳಿಕೆಯ ಕೊರತೆಯಿಂದ ನೇಮಕ ಮಾಡಿರಲೂಬಹುದು. ಆದರೆ  ಈ ರೀತಿ ಒಂದು ಸಂಸ್ಥೆಯ ಮೇಲೆ ಸವಾರಿ ಮಾಡುತ್ತಿರುವುದು ಖಂಡನೀಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಉರೂಸ್ ಆದ ಕೂಡಲೇ ನೂತನ ಸಮಿತಿ ಚುನಾವಣೆ ಮೂಲಕ ಅಸ್ತಿತ್ವಕ್ಕೆ ಬರುತ್ತದೆ. ಕಳೆದ ಬಾರಿ ಉರೂಸ್ ಮುಗಿದು  2015ರಲ್ಲಿ ಆಡಳಿತ ಸಮಿತಿ ಅಸ್ತಿತ್ವಕ್ಕೆ ಬರಬೇಕಾಗಿತ್ತಾದ್ದರೂ ಕೆಲವು ಗೊಂದಲದ ವಾತಾವರಣ ನಿರ್ಮಾಣವಾದ ಕಾರಣ 2016ರಲ್ಲಿ  ಆಡಳಿತ ಅಸ್ತಿತ್ವಕ್ಕೆ ಬಂದಿದೆ.   ಕಳೆದ ಮೂರುವರೆ ವರ್ಷಗಳಿಂದ ಆಡಳಿತದ ವಿರುದ್ಧ  ಕೇರಳ ಮೂಲದ ಒಂದು ಗುಂಪು ಸವಾರಿ ಮಾಡಿ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ವ್ಯವಸ್ಥೆ ಮಾಡಿದ್ದಾರೆ.  ಇದಕ್ಕೆ ಯಾರೂ ಸಮ್ಮತ ವ್ಯಕ್ತಪಡಿಸದಿದ್ದರೂ ಇಬ್ರಾಹಿಂ ಕೂರ್ನಡ್ಕ ಅವರಿಂದ  ಗೊಂದಲ  ಉಂಟಾಗಿದೆ. ಆದರೆ ಜಿಲ್ಲಾ ಖಾಝಿ ತ್ವಾಖಾ ಉಸ್ತಾದರು ಮುಖ್ಯಮಂತ್ರಿಗಳ ಮೂಲಕ ಆಡಳಿತಾಧಿಕಾರಿ ರದ್ದುಪಡಿಸುವಲ್ಲಿ ಯಶಸ್ವಿ ಕಾರ್ಯ ಮಾಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ದರ್ಗಾ ಉಪಾಧ್ಯಕ್ಷ ಯು.ಕೆ. ಮೋನು ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಮೀರ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಕೋಶಾಧಿಕಾರಿ ಯು.ಕೆ. ಇಲ್ಯಾಸ್,  ಸದಸ್ಯರಾದ ಫಾರೂಕ್ ಉಳ್ಳಾಲ್ ಹಾಗೂ ಎವರೆಸ್ಟ್ ಮುಸ್ತಫಾ ಉಪಸ್ಥಿತರಿದ್ದರು.

ದರ್ಗಾ ದಾಖಲಾತಿ ಕೇಳಿದ ಆಡಳಿತಾಧಿಕಾರಿ

ಉಳ್ಳಾಲ ದರ್ಗಾ ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಇಬ್ರಾಹಿಂ ಗೂನಡ್ಕ ಅವರು ಜಿಲ್ಲಾಡಳಿತದ ನಿಯೋಗದೊಂದಿಗೆ ಉಳ್ಳಾಲ ದರ್ಗಾಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ದಾಖಲಾತಿ ಒಪ್ಪಿಸುವಂತೆ ಕೇಳಿ ಕೊಂಡಿದ್ದಾರೆ. ಈ ಸಂದರ್ಭ ಅಧ್ಯಕ್ಷರು ಇಲ್ಲದಿದ್ದ ಕಾರಣ ದಾಖಲಾತಿ ಸಿಗಲಿಲ್ಲ ಎಂದು ಇಬ್ರಾಹಿಂ ಕೂರ್ನಡ್ಕ ತಿಳಿಸಿದ್ದಾರೆ.

ನಿಯೋಗದಲ್ಲಿ ಸಹಾಯಕ ಅಧಿಕಾರಿ ರವಿಚಂದ್ರ ನಾಯಕ್, ಡಿಸಿಪಿ ಅರುಣಾಂಶಗಿರಿ, ಡಿಸಿಪಿ ಕ್ರೈ ಲಕ್ಷ್ಮೀ ಗಣೇಶ್, ಎಸಿಪಿ ಕೋದಂಡರಾಮ, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕರ್ ಮೊದಲಾದವರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X