Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ವಲಯ ಅಂತರ ವಿವಿ ಮಹಿಳಾ ಬ್ಯಾಡ್ಮಿಂಟನ್...

ದ.ವಲಯ ಅಂತರ ವಿವಿ ಮಹಿಳಾ ಬ್ಯಾಡ್ಮಿಂಟನ್ : ಪ್ರಶಸ್ತಿ ಉಳಿಸಿಕೊಂಡ ಜೈನ್ ವಿವಿ, ಕಲ್ಲಿಕೋಟೆ ರನ್ನರ್‌ಅಪ್

ವಾರ್ತಾಭಾರತಿವಾರ್ತಾಭಾರತಿ5 Dec 2019 8:10 PM IST
share
ದ.ವಲಯ ಅಂತರ ವಿವಿ ಮಹಿಳಾ ಬ್ಯಾಡ್ಮಿಂಟನ್ : ಪ್ರಶಸ್ತಿ ಉಳಿಸಿಕೊಂಡ ಜೈನ್ ವಿವಿ, ಕಲ್ಲಿಕೋಟೆ ರನ್ನರ್‌ಅಪ್

ಮಣಿಪಾಲ, ಡಿ.5: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಆಶ್ರಯದಲ್ಲಿ ವಿವಿಯ ಒಳಾಂಗಣ ಕ್ರೀಡಾ ಸಂಕೀರ್ಣ ‘ಮರೆನಾ’ದಲ್ಲಿ ನಡೆದ ದಕ್ಷಿಣ ವಲಯ ಅಂತರ ವಿವಿ ಮಹಿಳಾ ಬ್ಯಾಡ್ಮಿಂಟನ್ ಟೂರ್ನಿಯ ಚಾಂಪಿಯನ್ ಪ್ರಶಸ್ತಿಯನ್ನು ಬೆಂಗಳೂರಿನ ಜೈನ್ ವಿವಿ ತಂಡ ತನ್ನಲ್ಲೇ ಉಳಿಸಿಕೊಂಡಿತು. ಕೇರಳದ ಕಲ್ಲಿಕೋಟೆ ವಿವಿ ಮತ್ತೆ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಡಬೇಕಾಯಿತು.

ಗುರುವಾರ ಅಪರಾಹ್ನ ನಡೆದ ಏಕಪಕ್ಷೀಯ ಫೈನಲ್ ಪಂದ್ಯದಲ್ಲಿ ಜೈನ್ ವಿವಿಯ ಮಹಿಳಾ ತಂಡ, ಕಲ್ಲಿಕೋಟೆ ವಿವಿಯನ್ನು ಎರಡು ನೇರ ಗೇಮ್‌ಗಳಲ್ಲಿ ಸೋಲಿಸುವ ಮೂಲಕ ಸತತ ಐದನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ತಮಿಳುನಾಡಿನ ಎಸ್‌ಆರ್‌ಎಂ ವಿವಿಯನ್ನು 2-1 ಅಂತರದಿಂದ ಮಣಿಸಿದ ಆಂಧ್ರ ಪ್ರದೇಶದ ಆಂಧ್ರ ವಿವಿ ಮೂರನೇ ಸ್ಥಾನ ಪಡೆಯಿತು.

ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಶಿಖಾ ರಾಜೇಶ್ ಗೌತಮ್ ರನ್ನು ಒಳಗೊಂಡ ಜೈನ್ ವಿವಿ, ಟೂರ್ನಿಯುದ್ದಕ್ಕೂ ಸ್ಪಷ್ಟ ಮೇಲುಗೈ ಪಡೆದಿತ್ತು. ಯಾವುದೇ ಎದುರಾಳಿ ತಂಡಕ್ಕೂ ಜೈನ್ ವಿವಿಗೆ ಪ್ರತಿರೋಧ ಒಡ್ಡಲು ಸಾಧ್ಯ ವಾಗಲಿಲ್ಲ.
ಫೈನಲ್‌ನಲ್ಲಿ ಶಿಖಾ ರಾಜೇಶ್ ಗೌತಮ್ ಹಾಗೂ ಕಲ್ಲಿಕೋಟೆ ವಿವಿಯ ಅಶ್ವಥಿ ನಡುವಿನ ಮೊದಲ ಸಿಂಗಲ್ಸ್ ಪಂದ್ಯ ಆರಂಭಿಕ ಹಂತದಲ್ಲಿ ನಿಕಟ ಹೋರಾಟದ ಸೂಚನೆಯನ್ನು ನೀಡಿದರೂ, ಶಿಖಾ ಅವರ ಅನುಭವದ ಎದುರು ಎದುರಾಳಿ ಶರಣಾಗಲೇಬೇಕಾಯಿತು.

ಒಂದು ಹಂತದಲ್ಲಿ ಅಶ್ವಥಿ ಅವರು 15-9ರ ಮುನ್ನಡೆಯಲಿದ್ದರೂ, ಶಿಖಾ ಅವರು ಅದ್ಭುತ ರ್ಯಾಲಿಗಳ ಮೂಲಕ ಗೇಮ್‌ನ್ನು 21-19ರಿಂದ ಗೆದ್ದುಕೊಂಡು ಅಂತಿಮವಾಗಿ ಪಂದ್ಯವನ್ನು 21-19, 21-09ರಿಂದ ಜಯಿಸಿದರು.

ಮುಂದಿನ ಡಬಲ್ಸ್‌ನಲ್ಲಿ ಶಿಖಾ ರಾಜೇಶ್ ಹಾಗೂ ಅಶ್ವಿನಿ ಭಟ್ ಜೋಡಿ, ಕಲ್ಲಿಕೋಟೆಯ ಅಶ್ವಥಿ ಮತ್ತು ಶ್ರುತಿ ಕೆ.ಪಿ. ಜೋಡಿಯನ್ನು 21-16, 21-14ರಿಂದ ಹಿಮ್ಮೆಟ್ಟಿಸಿ ತಂಡಕ್ಕೆ 2-0 ಅಂತರದ ಜಯ ದೊರಕಿಸಿಕೊಟ್ಟರು. ಮೂರನೇ ಸ್ಥಾನಕ್ಕಾಗಿ ಸೆಮಿ ಫೈನಲ್‌ನಲ್ಲಿ ಸೋತ ಆಂಧ್ರ ವಿವಿ ಹಾಗೂ ಎಸ್‌ಆರ್‌ಎಂ ವಿವಿ ನಡುವಿನ ಪಂದ್ಯ ನಿಕಟವಾಗಿದ್ದರೂ, ಪ್ರೇಕ್ಷಕರಲ್ಲಿ ಯಾವುದೇ ಕುತೂಹಲ ಕೆರಳಿಸಲು ವಿಫಲವಾಯಿತು. ಎಸ್‌ಆರ್‌ಎಂ ಒಂದು ಮೊದಲ ಡಬಲ್ಸ್‌ನ್ನು ಗೆದ್ದು ಸಮಬಲ ಸಾಧಿಸಿದರೂ, ಎರಡನೇ ಸಿಂಗಲ್ಸ್‌ನಲ್ಲಿ ಏಕಪಕ್ಷೀಯವಾದ ಸೋಲನುಭವಿಸಿತು.

ಇಂದು ಬೆಳಗ್ಗೆ ನಡೆದ ಸೆಮಿಫೈನಲ್ ಪಂದ್ಯಗಳಲ್ಲಿ ಕಲ್ಲಿಕೋಟೆ ವಿವಿ, ತಮಿಳುನಾಡಿನ ಎಸ್‌ಆರ್‌ಎಂ ವಿವಿಯನ್ನು 2-1ರಿಂದ ಹಾಗೂ ಜೈನ್ ವಿವಿ, ಆಂಧ್ರ ವಿವಿಯನ್ನು 2-0ಯಿಂದ ಪರಾಭವಗೊಳಿಸಿ ಸತತ ಎರಡನೇ ಬಾರಿಗೆ ಫೈನಲ್‌ನ ಮುಖಾಮುಖಿಗೆ ಅರ್ಹತೆ ಪಡೆದುಕೊಂಡಿದ್ದವು.

ಸಮಾರೋಪ ಸಮಾರಂಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಎಂಐಟಿಯ ನಿರ್ದೇಶಕ ಡಾ.ಶ್ರೀಕಾಂತ ರಾವ್ ವಿಜೇತರಿಗೆ ಬಹುಮಾನ ಗಳನ್ನು ವಿತರಿಸಿದರು. ವಿವಿಯ ಕ್ರೀಡಾ ಕೌನ್ಸಿಲ್‌ನ ಕಾರ್ಯದರ್ಶಿ ಡಾ.ವಿನೋದ್ ನಾಯಕ್, ಜೊತೆ ಕಾರ್ಯದರ್ಶಿ ಡಾ.ಶೋಭಾ ಎಂ.ಇ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X