Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆ ಬಳಿಕ ಶಾಸಕ ರಾಜೇಗೌಡ ಬಿಜೆಪಿ...

ಚುನಾವಣೆ ಬಳಿಕ ಶಾಸಕ ರಾಜೇಗೌಡ ಬಿಜೆಪಿ ಸೇರುತ್ತಾರಾ?: ಊಹಾಪೋಹಗಳಿಗೆ ಕಾರಣವಾಯಿತು ಪತ್ರ

'ವಾರ್ತಾಭಾರತಿ'ಗೆ ನೀಡಿದ ಸ್ಪಷ್ಟನೆಯಲ್ಲಿ ಶೃಂಗೇರಿ ಶಾಸಕ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ5 Dec 2019 10:52 PM IST
share
ಚುನಾವಣೆ ಬಳಿಕ ಶಾಸಕ ರಾಜೇಗೌಡ ಬಿಜೆಪಿ ಸೇರುತ್ತಾರಾ?: ಊಹಾಪೋಹಗಳಿಗೆ ಕಾರಣವಾಯಿತು ಪತ್ರ

ಚಿಕ್ಕಮಗಳೂರು, ಡಿ.5: ಉಪಚುನಾವಣೆಯ ಹೊತ್ತಿನಲ್ಲಿ ಜಿಲ್ಲೆಯ ಶೃಂಗೇರಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರಿಗೆ ಪತ್ರವೊಂದನ್ನು ಬರೆದಿದ್ದು, ಈ ಪತ್ರ ಸಮಾಜಿಕ ಜಾಲತಾಣಗಳೂ ಸೇರಿದಂತೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ವಿಧಾನಪರಿಷತ್ ಸದಸ್ಯ ಪ್ರಾಣೇಶ್ ಅವರಿಗೆ ಶಾಸಕ ರಾಜೇಗೌಡ ಅವರು ಬರೆದಿರುವ ಪತ್ರದಲ್ಲಿ, 'ನಾವಿಬ್ಬರು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ವೇಳೆ ಉತ್ತಮವಾಗಿ ಕಾರ್ಯನಿರ್ವಹಿಸಿದ್ದೇವೆ. ಬೇರೆ ಬೇರೆ ಪಕ್ಷಗಳಲ್ಲಿದ್ದರೂ ಸ್ನೇಹಿತರಾಗಿ ಆತ್ಮೀಯವಾಗಿದ್ದೇವೆ. ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರವನ್ನು ನೋಡಲ್ ಕ್ಷೇತ್ರವನ್ನಾಗಿ ಪಡೆದು ಅಭಿವೃದ್ಧಿ ಅನುದಾನ ಬಳಸಲು ಮುಂದಾಗಿರುವ ನೀವು ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆ ಸಂಬಂಧ ಕಾರ್ಯ ನಿರ್ವಹಿಸಲು ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ತಾಲೂಕು ಕೇಂದ್ರಗಳಲ್ಲಿರುವ ಶಾಸಕರ ಕಚೇರಿಯನ್ನು ಬಳಸಿಕೊಳ್ಳಬಹುದು. ಕ್ಷೇತ್ರದ ಅಭಿವೃದ್ಧಿಗೆ ಜತೆಯಾಗಿ ಶ್ರಮಿಸೋಣ' ಎಂಬಿತ್ಯಾಧಿಯಾಗಿ ಪತ್ರದಲ್ಲಿ ರಾಜೇಗೌಡ ಬರೆದುಕೊಂಡಿದ್ದಾರೆ.

ಇದೀಗ ರಾಜೇಗೌಡ ಅವರು ಬರೆದಿರುವ ಪತ್ರವನ್ನೇ ಮುಂದಿಟ್ಟುಕೊಂಡು ಭಾರೀ ಚರ್ಚೆಗಳು ಜಿಲ್ಲೆಯಾದ್ಯಂತ ಕೇಳಿ ಬರುತ್ತಿದೆ. ಶಾಸಕ ರಾಜೇಗೌಡ ಅವರನ್ನು ಈ ಹಿಂದೆ ಬಿಜೆಪಿಯವರು ತಮ್ಮ ಪಕ್ಷಕ್ಕೆ ಸೆಳೆಯಲು ಮುಂದಾಗಿದ್ದು, ಆಗ ಶಾಸಕ ರಾಜೇಗೌಡ ಇದನ್ನು ನಯವಾಗಿಯೇ ತಿರಸ್ಕರಿಸಿದ್ದರು. ಇದೀಗ ಉಪಚುನಾವಣೆ ಬಳಿಕ ಶಾಸಕ ರಾಜೇಗೌಡ ಅವರನ್ನು ಆಪರೇಷನ್ ಕಮಲದ ಖೆಡ್ಡಾಕ್ಕೆ ಕೆಡವಿಕೊಳ್ಳಲು ಎಲ್ಲ ಸಿದ್ಧತೆಗಳು ನಡೆದಿದ್ದು, ಚುನಾವಣೆ ಬಳಿಕ ಟಿ.ಡಿ.ರಾಜೇಗೌಡ ಬಿಜೆಪಿಗೆ ಹೋದರೂ ಆಶ್ಚರ್ಯವಿಲ್ಲ ಎಂಬಂತಹ ಮಾತುಗಳು ಕೇಳಿ ಬರುತ್ತಿವೆ.

ಈ ಹಿನ್ನೆಲೆಯಲ್ಲಿ 'ವಾರ್ತಾಭಾರತಿ' ಶಾಸಕ ರಾಜೇಗೌಡ ಅವರನ್ನು ಗುರುವಾರ ಮಾತನಾಡಿಸಿದಾಗ ಪ್ರತಿಕ್ರಿಯಸಿದ ಅವರು, 'ಇದೆಲ್ಲವೂ ಊಹಾಪೋಹಗಳು, ನಾನು ಹುಟ್ಟು ಕಾಂಗ್ರೆಸ್ಸಿಗನಾಗಿದ್ದು, ಯಾವುದೇ ಪಕ್ಕಕ್ಕೆ ನಾನು ಮಾರಾಟವಾಗುವುದಿಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಒಂದು ನಿರ್ದಿಷ್ಟ ತತ್ವ ಸಿದ್ಧಾಂತಗಳನ್ನು ನಂಬಿಕೊಂಡು ಅದನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದಿದ್ದೇನೆ. ನಾನು ಇದಕ್ಕೆ ಸದಾಕಾಲ ಬದ್ಧನಾಗಿರುತ್ತೇನೆ. ಶೃಂಗೇರಿ ಕ್ಷೇತ್ರದ ಜನರು ತನ್ನನ್ನು ಕಾಂಗ್ರೆಸ್ ಪಕ್ಷದ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಅವರ ನಂಬಿಕಗೆ ನಾನು ದ್ರೋಹ ಮಾಡುವುದಿಲ್ಲ. ಐದು ವರ್ಷಗಳ ಕಾಲ ನಾನು ಆ ಕ್ಷೇತ್ರದ ಆಶೋತ್ತರಗಳಿಗೆ, ಸಮಸ್ಯೆಗಳಿಗೆ ಧ್ವನಿ ಆಗಿರಬೇಕಾದದ್ದು ಕರ್ತವ್ಯವಾಗಿದೆ. ಇದನ್ನು ಚಾಚು ತಪ್ಪದೇ ಪಾಲಿಸುತ್ತೇನೆ. ಕ್ಷೇತ್ರದ ಜನರು ಇಂತಹ ಊಹಾಪೋಹಗಳನ್ನು ನಂಬಬಾರದು ಎಂದು ಶಾಸಕ ರಾಜೇಗೌಡ ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರಿಗೆ ತಾನು ಪತ್ರ ಬರೆದಿರುವುದು ನಿಜ. ಆದರೆ ಪತ್ರಕ್ಕೂ ಆಪರೇಷನ್ ಕಮಲಕ್ಕೂ ಸಂಬಂಧವಿಲ್ಲ. ಪ್ರಾಣೇಶ್ ಅವರು ಶೃಂಗೇರಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕೊಪ್ಪ ತಾಲೂಕನ್ನು ನೋಡನ್ ಕ್ಷೇತ್ರವನ್ನಾಗಿ ಆಯ್ಕೆ ಮಾಡಿದ್ದಾರೆ. ಇದರಿಂದಾಗಿ ಅವರ ಶಾಸಕರ ಅನುದಾನ ಈ ತಾಲೂಕಿನ ಅಭಿವೃದ್ಧಿಗೆ ಬಳಕೆಯಾಗುತ್ತದೆ. ತನ್ನ ಕ್ಷೇತ್ರದ ಅಭಿವೃದ್ಧಿಗೆ ಪ್ರಾಣೇಶ್ ಮುಂದಾಗಿರುವುದು ಸಂತಸದ ವಿಷಯವಾಗಿದೆ. ಅಭಿವೃದ್ಧಿ ಕಾರ್ಯಗಳ ಚರ್ಚೆಗೆಂದು ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕು ಕೇಂದ್ರಗಳಲ್ಲಿ ಸರಕಾರಿ ಕಟ್ಟಡದಲ್ಲಿ ನನ್ನ ಶಾಸಕರ ಕಚೇರಿ ಇದ್ದು, ಇದನ್ನು ಅಭಿವೃದ್ಧಿಗೆ ಕೆಲಸಗಳಿಗೆ ಬಳಸಿಕೊಳ್ಳಬಹುದು ಎಂದು ಪತ್ರದಲ್ಲಿ ತಿಳಿಸಿದ್ದೇನಷ್ಟೆ. ಇದರಲ್ಲಿ ಬೇರೆ ರಾಜಕೀಯವೇನಿಲ್ಲ ಎಂದು ಶಾಸಕ ರಾಜೇಗೌಡ ಸ್ಪಷ್ಟನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X