Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ದಸಂಸದಿಂದ ಸಂವಿಧಾನ ಸಂರಕ್ಷಣಾ...

ಉಡುಪಿ: ದಸಂಸದಿಂದ ಸಂವಿಧಾನ ಸಂರಕ್ಷಣಾ ದಿನ

ಡಾ.ಬಿ.ಆರ್.ಅಂಬೇಡ್ಕರ್ 63ನೇ ಪರಿನಿಬ್ಬಾಣ ದಿನ

ವಾರ್ತಾಭಾರತಿವಾರ್ತಾಭಾರತಿ6 Dec 2019 9:35 PM IST
share
ಉಡುಪಿ: ದಸಂಸದಿಂದ ಸಂವಿಧಾನ ಸಂರಕ್ಷಣಾ ದಿನ

ಉಡುಪಿ, ಡಿ.6: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನವಾದ ಡಿ.6ನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಉಡುಪಿ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ಬೌದ್ಧ ಮಹಾಸಭಾ ಉಡುಪಿ ಜಿಲ್ಲಾ ಘಟಕಗಳು ವಿವಿಧ ಪ್ರಗತಿಪರ ಸಂಘಟನೆ ಗಳೊಂದಿಗೆ ‘ಸಂವಿಧಾನ ಸಂರಕ್ಷಣಾ ದಿನ’ವಾಗಿ ಇಂದು ಆಚರಿಸಿದವು.

ಈ ಪ್ರಯುಕ್ತ ಶುಕ್ರವಾರ ಸಂಜೆ ನಗರದ ಜೋಡುಕಟ್ಟೆಯಿಂದ ಪ್ರಾರಂಭಗೊಂಡ ಮೊಂಬತ್ತಿ ಜಾಥಾಕ್ಕೆ ವಂ.ವಿಲಿಯ ಮಾರ್ಟಿಸ್ ಚಾಲನೆ ನೀಡಿದರು. ಜಾಥಾ ಪ್ರಮುಖ ಬೀದಿಗಳಲ್ಲಿ ಸಾಗಿ ಸರ್ವಿಸ್ ಬಸ್‌ನಿಲ್ದಾಣ ಬಳಿಯ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಮುಕ್ತಾಯಗೊಂಡಿತು. ಅಲ್ಲಿ ಸೇರಿದ ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿಂತಕ ಜಿ.ರಾಜಶೇಖರ್ ಅವರು ಡಿ.6 ನಮಗೆ ಎರಡು ಕಾರಣಗಳಿಗಾಗಿ ಮುಖ್ಯವಾಗುತ್ತದೆ. ಒಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ಹಾಗೂ ಇನ್ನೊಂದು ದೇಶದ ಸೌಹಾರ್ದತೆಯ ಪರಂಪರೆಗೆ ಧಕ್ಕೆಯನ್ನುಂಟುಮಾಡಿದ ಬಾಬರಿ ಮಸೀದಿ ಧ್ವಂಸಕ್ಕಾಗಿ. ಆ ದಿನದಿಂದ ಕೆಲವು ತಿಂಗಳುಗಳವರೆಗೆ ಮುಂಬಯಿಯಲ್ಲಿ ನಡೆದ ಕೋಮುಗಲಭೆಯ ನೈಜ ಸ್ವರೂಪವನ್ನು ಶ್ರೀಕೃಷ್ಣ ಆಯೋಗ ಪುರಾವೆಗಳೊಂದಿಗೆ ತೆರೆದಿಟ್ಟರೂ ಆ ಬಗ್ಗೆ ಯಾವುದೇ ಕ್ರಮ ಜರಗಿಸಿಲ್ಲ ಎಂದರು.

ಇಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ಸಂಪೂರ್ಣ ಕಡೆಗಣಿಸುತ್ತಿರುವ ಪಕ್ಷವೊಂದರ ಆಡಳಿತ ನಡೆಯುತ್ತಿದೆ. ಹಿಂದುತ್ವದ ನೆಲೆಯಲ್ಲಿ ನಡೆದಿರುವ ಆಡಳಿತವನ್ನು ಬಿಟ್ಟು ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸವನ್ನು ಎಲ್ಲರೂ ಮಾಡಬೇಕಾಗಿದೆ ಎಂದರು.

ಚಿಂತಕ ಕೆ.ಫಣಿರಾಜ್ ಮಾತನಾಡಿ, ನಮ್ಮ ಸಂವಿಧಾನ ಎಲ್ಲಾ ಜಾತಿ,ಮತ, ವರ್ಗ, ಧರ್ಮೀಯರಿಗೂ ಪವಿತ್ರ ಗ್ರಂಥ, ಆಧ್ಯಾತ್ಮಿಕ ಗ್ರಂಥವಾಗಿದೆ. ಈ ಆಧ್ಯಾತ್ಮಿಕದ ಮೂಲ ಬುದ್ಧ ಧರ್ಮದಲ್ಲಿದೆ, ಬುದ್ಧ ಧರ್ಮದ ಸಂದೇಶದಲ್ಲಿದೆ. ನಮ್ಮ ಸಂವಿಧಾನ ಹೇಳಿದ ಸ್ವಾತಂತ್ರ, ಸಹೋರತ್ವ ಹಾಗೂ ಸಮಾನತೆಯ ಸಮಾಜ ನಮಗಿಂದು ಬೇಕಾಗಿದೆ. ಇಂದಿನ ಪವಿತ್ರ ದಿನದಂದು ಈ ಮೂರನ್ನೂ ಒಳಗೊಂಡ ಸಮಾಜವನ್ನು ಸ್ಥಾಪಿಸಲು ನಾವೆಲ್ಲಾ ಪಣತೊಡಬೇಕಾಗಿದೆ ಎಂದರು.

ಈಗ ದೇಶದಲ್ಲಿರುವ ಹೊರ ಅಂಧಕಾರ ನಮ್ಮನ್ನು ಹೆದರಿಸುತ್ತಿದೆ. ಇದರ ವಿರುದ್ಧ ನಾವೆಲ್ಲ ಧೀಮಂತ ಹೋರಾಟ ನಡೆಸಬೇಕಾ ಗಿದೆ. ಈ ಮೂಲಕ ಸಂವಿಧಾನದ ಮೂಲ ತತ್ವಗಳನ್ನು ಪಾಲಿಸಬೇಕಾಗಿದೆ. ಸಮಾನತೆ ಇಲ್ಲದೇ ಸ್ವಾತಂತ್ರಕ್ಕೆ ಅರ್ಥವೇ ಇಲ್ಲ. ನಾವೆಲ್ಲರೂ ನಿರ್ಭಯವಾಗಿ ಸಮಾನತೆ ಬೇಡುವ ಸ್ವಾತಂತ್ರ ನಮಗಿಂದು ಬೇಕಾಗಿದೆ. ಈ ಸಮಾನತೆಗೆ ಸಹಬಾಳ್ವೆಯ ಅಗತ್ಯವಿದೆ ಎಂದವರು ನುಡಿದರು.

ದಲಿತ ಮುಖಂಡ ಹಾಗೂ ಚಿಂತಕ ನಾರಾಯಣ ಮಣೂರು ಮಾತನಾಡಿ, ನಮ್ಮ ಕತ್ತಲಿನ ಜಗತ್ತಿಗೆ ಬೆಳಕನ್ನು ನೀಡಿ, ಜಗತ್ತಿನ ಅರಿವು ಮೂಡಿಸಿದ ಅಂಬೇಡ್ಕರ್, ದೈಹಿಕವಾಗಿ, ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇದ್ದರೂ, ಅವರ ವಿಚಾರಧಾರೆ, ಎಲ್ಲರಿಗೂ ಸಮಪಾಲು, ಸಮಭಾವದ ಚಿಂತನೆ ಹಾಗೂ ಅವರ ತಾಯ್ತನದ ಪ್ರೀತಿಯನ್ನು ಸಂವಿಧಾನದ ಮೂಲಕ ಒದಗಿಸಿಕೊಟ್ಟಿದ್ದಾರೆ ಎಂದರು.

ಸಿಪಿಎಂ ನಾಯಕ ಬಾಲಕೃಷ್ಣ ಶೆಟ್ಟಿ, ವಂ. ವಿಲಿಯಂ ಮಾರ್ಟಿಸ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ದಲಿತ ಮುಖಂಡ ಶ್ಯಾಮರಾಜ್ ಬಿರ್ತಿ ಕಾರ್ಯಕ್ರಮ ನಿರೂಪಿಸಿದರು. ಸುಂದರ ಮಾಸ್ತರ್, ದಿವಾಕರ ಬೇಂಗ್ರೆ, ಹುಸೇನ್ ಕೋಡಿಬೇಂಗ್ರೆ, ಯಾಸಿನ್ ಕೋಡಿಬೇಂಗ್ರೆ, ಎಸ್.ಎಸ್.ಪ್ರಸಾದ್, ಸಿರಿಲ್ ಮಥಾಯಸ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X