Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾರ್ವಜನಿಕ ಜೀವನ ಪ್ರವೇಶ ನನ್ನ...

ಸಾರ್ವಜನಿಕ ಜೀವನ ಪ್ರವೇಶ ನನ್ನ ಆಯ್ಕೆಯಲ್ಲ, ಆಕಸ್ಮಿಕ: ಪಿ.ಜಿ.ಆರ್.ಸಿಂಧ್ಯಾ

ವಾರ್ತಾಭಾರತಿವಾರ್ತಾಭಾರತಿ6 Dec 2019 10:00 PM IST
share
ಸಾರ್ವಜನಿಕ ಜೀವನ ಪ್ರವೇಶ ನನ್ನ ಆಯ್ಕೆಯಲ್ಲ, ಆಕಸ್ಮಿಕ: ಪಿ.ಜಿ.ಆರ್.ಸಿಂಧ್ಯಾ

ಬೆಂಗಳೂರು, ಡಿ.6: ನಮ್ಮ ದೇಶದಲ್ಲಿ ಹಲವು ರಾಜರು ಆಳ್ವಿಕೆ ನಡೆಸಿದ್ದರೂ, ಇಂದಿಗೂ ಜನರ ಮನಸ್ಸಿನಲ್ಲಿ ಉಳಿದುಕೊಂಡಿರುವ ಕೆಲವರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಒಬ್ಬರಾಗಿದ್ದಾರೆ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದ್ದಾರೆ. 

ಶುಕ್ರವಾರ ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ನಾಲ್ವಡಿ ಕೃಷ್ಣರಾಜ ಒಡೆಯರ ದತ್ತಿ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.

ಕೃಷ್ಣರಾಜ ಒಡೆಯರ್ ದೇವದಾಸಿ ಪದ್ಧತಿ, ಬಸವಿ ಪದ್ಧತಿ, ಗೆಜ್ಜೆ ಪೂಜೆ, ವೇಶ್ಯಾವಾಟಿಕೆಯಂತ ದುಷ್ಟ ಪದ್ಧತಿಗಳನ್ನು ನಿರ್ಮೂಲನೆಗೊಳಿಸಿ ಮಹಿಳೆಯರಿಗೆ ಮತದಾನ ಹಾಗೂ ಶಿಕ್ಷಣದ ಹಕ್ಕನ್ನು ನೀಡಿದವರು. ಜನರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ರಾಜ್ಯಾದ್ಯಂತ ಕಾರ್ಖಾನೆಗಳನ್ನು ನಿರ್ಮಿಸಿದ ಅವರ ಕಾರ್ಯ ಶ್ಲಾಘನೀಯ. ಅಂತಹವರ ಹೆಸರಿನಲ್ಲಿ ಸ್ಥಾಪಿಸಿರುವ ದತ್ತಿ ಪ್ರಶಸ್ತಿ ಪಡೆದಿರುವುದು ನನ್ನ ಪುಣ್ಯ ಎಂದು ತಿಳಿಸಿದರು.

ಸಾರ್ವಜನಿಕ ಜೀವನ ಪ್ರವೇಶ ನನ್ನ ಆಯ್ಕೆಯಲ್ಲ, ಆಕಸ್ಮಿಕ ಎಂದ ಅವರು, ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ನನ್ನನ್ನು ಕರೆದ ಎಸ್.ಆರ್. ಬೊಮ್ಮಾಯಿ, ತಮ್ಮ ಕಿಸೆಯಿಂದ 5 ಸಾವಿರ ರೂ. ನೀಡಿ ಚುನಾವಣೆಯಲ್ಲಿ ನಿಲ್ಲುವಂತೆ ಹೇಳಿದರು. ಆ ಮೂಲಕ ನಾನು ಸಾರ್ವಜನಿಕ ಜೀವನ ಪ್ರವೇಶಿಸಿದೆ ಎಂದು ಸಿಂಧ್ಯಾ ಹೇಳಿದರು.

ಸಚಿವನಾಗಿ ನಾನಾ ಖಾತೆಗಳಲ್ಲಿ ಕಾರ್ಯನಿರ್ವಹಿಸಿ ಮೆಚ್ಚುಗೆ ಪಡೆದಷ್ಟೇ, ಬೈಸಿಕೊಂಡದ್ದೂ ಇದೆ. ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ನಾನು ಕೇಳದಿದ್ದರೂ ನನ್ನ ಬಳಿಗೇ ಬಿ ಫಾರ್ಮ್ ಬರುತ್ತಿತ್ತು. ಆಗೆಲ್ಲ ನಾನು ಗೆದ್ದಿದ್ದೇನೆ. ಯಾವಾಗ ನಾನೇ ಬಿ ಫಾರ್ಮ್ ಕೇಳಿ ಚುನಾವಣೆಗೆ ಸ್ಪರ್ಧಿಸಿದೆನೋ ಆಗೆಲ್ಲ ಸೋತಿದ್ದೇನೆ ಎಂದು ಅನುಭವ ಹಂಚಿಕೊಂಡರು.

ರಾಜಕೀಯದಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿಯಿಂದ ಹಾಲಿ ಪ್ರಧಾನಿ ನರೇಂದ್ರ ಮೋದಿ ವರೆಗಿನ ಎಲ್ಲ ಪ್ರಧಾನಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಅದೇ ರೀತಿ ಸಾಹಿತ್ಯ, ಸಂಗೀತ, ಧಾರ್ಮಿಕ ಸೇರಿದಂತೆ ನಾನಾ ಕ್ಷೇತ್ರಗಳ ಪ್ರಮುಖರ ಒಡನಾಟದಲ್ಲಿ ಈವರೆಗೂ ಸಾಗಿ ಬಂದಿದ್ದೇನೆ. ಅದರಲ್ಲೂ ಕುವೆಂಪು ಅವರಿಂದ ಇಂದಿನ ಚಂದ್ರಶೇಖರ ಕಂಬಾರರವರೆಗಿನ ಎಲ್ಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೊಂದಿಗೆ ಕೆಲಸ ಮಾಡುವ ಅವಕಾಶ ದೊರೆತಿದ್ದು ಅತಿ ಸಂತಸ ಎಂದರು.

ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್, ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X