Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ಎನ್‍ ಕೌಂಟರ್ ಗಳು, ಒಂದೇ ಪೊಲೀಸ್...

ಮೂರು ಎನ್‍ ಕೌಂಟರ್ ಗಳು, ಒಂದೇ ಪೊಲೀಸ್ ಅಧಿಕಾರಿ, ಅದೇ ವಿವರಣೆ

ವಾರ್ತಾಭಾರತಿವಾರ್ತಾಭಾರತಿ7 Dec 2019 6:15 PM IST
share
ಮೂರು ಎನ್‍ ಕೌಂಟರ್ ಗಳು, ಒಂದೇ ಪೊಲೀಸ್ ಅಧಿಕಾರಿ, ಅದೇ ವಿವರಣೆ

ಹೈದರಾಬಾದ್: ಹನ್ನೊಂದು ವರ್ಷಗಳ ಹಿಂದೆ, 2008ರಲ್ಲಿ ಮೂವರು ಆ್ಯಸಿಡ್ ದಾಳಿ ಪ್ರಕರಣದ ಆರೋಪಿಗಳನ್ನು ಎನ್‍ ಕೌಂಟರ್ ನಲ್ಲಿ ಕೊಂದ ಘಟನೆ,  2016ರಲ್ಲಿ ನಡೆದ ಮಾಜಿ ನಕ್ಸಲನೊಬ್ಬನ ಹತ್ಯೆ ಹಾಗೂ ಇದೀಗ ಪಶುವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್‍ಕೌಂಟರ್‍ ನಲ್ಲಿ ಕೊಂದ ಘಟನೆ- ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ಒಂದೇ ರೀತಿಯಲ್ಲಿ ಕಾರ್ಯಾಚರಿಸಿದ್ದರಲ್ಲದೆ, ಮೂರೂ ಪ್ರಕರಣಗಳಲ್ಲಿ ಅವರು ನೀಡಿದ ವಿವರಣೆ ಕೂಡ ಒಂದೇ ಆಗಿತ್ತು.

ತಮ್ಮ ಮೇಲೆ ದಾಳಿ ನಡೆದಿದ್ದರಿಂದ ಆತ್ಮರಕ್ಷಣೆಗೆ ಗುಂಡು ಹಾರಿಸಬೇಕೆಂಬ ವಿವರಣೆ ನೀಡಲಾಗಿತ್ತು. ಮೂರೂ ಪ್ರಕರಣಗಳಲ್ಲಿ ಪೊಲೀಸ್ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿಯ ಹೆಸರು ಕೂಡ ವಿ.ಸಿ. ಸಜ್ಜನರ್.

1996 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಸಜ್ಜನರ್ ಅವರು ವಾರಂಗಲ್ ಎಸ್‍ಪಿಯಾಗಿದ್ದಾಗ ಡಿಸೆಂಬರ್ 2008ರಲ್ಲಿ ಮೋಟಾರ್ ಸೈಕಲ್‍ ನಲ್ಲಿದ್ದ ಮೂವರು ಯುವಕರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದ ಇಬ್ಬರು ಯುವತಿಯರ ಮೇಲೆ ಆ್ಯಸಿಡ್ ಎರಚಿದ್ದರು. ಘಟನೆ ಭಾರೀ ಕೋಲಾಹಲಕ್ಕೆ ಕಾರಣವಾಗಿ ಪ್ರತಿಭಟನೆಗಳೂ ನಡೆದಿದ್ದವು. ಆರೋಪಿಗಳ ಬಂಧನವಾದ ಮರುದಿನವೇ ಮೂವರನ್ನೂ ಪೊಲೀಸರು ವಾರಂಗಲ್‍ ನಿಂದ 30 ಕಿ.ಮೀ. ದೂರದ ಮಮುನುರ್ ಅರಣ್ಯದಲ್ಲಿ ರಾತ್ರಿ ಗುಂಡಿಕ್ಕಿ ಸಾಯಿಸಿದ್ದರು.

ಸಾಕ್ಷ್ಯ (ಆ್ಯಸಿಡ್  ಹಾಗೂ ಮೋಟಾರ್ ಸೈಕಲ್) ಸಂಗ್ರಹಿಸಲು ಅವರನ್ನು ಕರೆದುಕೊಂಡು ಹೋಗಿದ್ದ ವೇಳೆ ಅವರಲ್ಲೊಬ್ಬ ದೇಶಿ ನಿರ್ಮಿತ ಪಿಸ್ತೂಲು ಹೊರತೆಗೆದುಪೊಲೀಸರತ್ತ ಗುರಿಯಾಗಿಸಿದ್ದನೆಂದು ಸಜ್ಜನರ್ ಆಗ ಹೇಳಿದ್ದರು. ಆರೋಪಿಗಳು ಪೊಲೀಸರ ಮೇಲೆ ಆ್ಯಸಿಡ್ ಕೂಡ ಎರಚಿದ್ದರಿಂದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಬೇಕಾಯಿತು ಎಂದೂ ಹೇಳಿದ್ದರು. ಆರೋಪಿಗಳಿಗೆ ಕೈಕೋಳ ತೊಡಿಸಲಾಗಿರಲಿಲ್ಲ ಹಾಗೂ ಅವರ ಕೈಗೆ ಪಿಸ್ತೂಲ್ ಏಕೆ ಬಂತೆಂಬುದಕ್ಕೂ ವಿವರಣೆಯಿರಲಿಲ್ಲ.

ಆಗಸ್ಟ್ 2016ರಲ್ಲಿ ಸಜ್ಜನರ್ ನೇತೃತ್ವದ ನಕ್ಸಲ್ ನಿಗ್ರಹ ತಂಡ (ಗ್ರೇಹೌಂಡ್ಸ್ ಟೀಂ) ಮಾಜಿ ನಕ್ಸಲ್ ಮುಹಮ್ಮದ್ ನಯೀಮುದ್ದೀನ್ ಎಂಬಾತನನ್ನು ಹೈದರಾಬಾದ್ ಹೊರವಲಯದಲ್ಲಿ ಗುಂಡಿಕ್ಕಿ ಸಾಯಿಸಿತ್ತು. ಆತ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಎಂದು ಪೊಲೀಸರು ವಿವರಣೆ ನೀಡಿದ್ದರು. ಆತ ತನ್ನ ಜೀಪಿನೊಳಗಡೆಯಿಂದ ಎಕೆ 47 ಪಿಸ್ತೂಲಿನಿಂದ ಗುಂಡು ಹಾರಿಸಿದ್ದ ಎಂದೂ ಪೊಲೀಸರು ಹೇಳಿದ್ದರು.

ಪಶುವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳು ಆಕೆಯ ಮೊಬೈಲ್ ಫೋನ್, ಕೈಗಡಿಯಾರ ಹಾಗೂ ಪವರ್ ಬ್ಯಾಂಕ್ ಅಡಗಿಸಿಟ್ಟಿದ್ದ ಸ್ಥಳವನ್ನು ಪೊಲೀಸರಿಗೆ ತೋರಿಸುತ್ತಿದ್ದಾಗ ದಾಳಿ ನಡೆಸಿದ್ದರು. ಆಕೆಯ ವಸ್ತುಗಳನ್ನು ಹುಡುಕಲು ಹೇಳಿದ್ದರಿಂದ ಅವರ ಕೈಗಳಿಗೆ ಕೋಳ ತೊಡಿಸಲಾಗಿರಲಿಲ್ಲ ಎಂದು ಸಜ್ಜನರ್ ವಿವರಣೆ ನೀಡಿದ್ದರು.

ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ನಿಯುಕ್ತಿಗೊಳ್ಳುವ ಮುನ್ನ ಅವರು ವಿಶೇಷ ಗುಪ್ತಚರ ವಿಭಾಗದ ಐಜಿ ಆಗಿದ್ದರಲ್ಲದೆ ಆ ಸಂದರ್ಭ ಹಲವು ನಕ್ಸಲರ ಶರಣಾಗತಿ ಹಾಗೂ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X